ವಿವಿಧೆಡೆ ಡಿಸಿ ದಿಢೀರ್‌ ಭೇಟಿ-ಪರಿಶೀಲನೆ

ವೃದ್ಧರ ಯೋಗಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ ಬಾಲಮಂದಿರ ಅಚ್ಚುಕಟ್ಟು -ಸ್ವಚ್ಛತೆ ಕಾಪಾಡಲು ಸಲಹೆ

Team Udayavani, Dec 12, 2019, 11:40 AM IST

12-December-7

ಬೀದರ: ನಗರದ ವಿವಿಧೆಡೆ ಬುಧವಾರ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ್‌ ದಿಢೀರ್‌ ಭೇಟಿ ನೀಡಿ, ಆಯಾ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ ನಡೆಸಿದರು.

ಚಿದ್ರಿಯ ಕ್ರಾಸ್‌ ಬಳಿ ಡಾ| ಅಂಬೇಡ್ಕರ ಕಲ್ಚರಲ್‌ ಆ್ಯಂಡ್‌ ವೆಲ್ಫೇರ್‌ ಸೊಸೈಟಿ ಅಡಿ ನಡೆಯುವ ಜ್ಯೋತಿಬಾ ಫುಲೆ ವೃದ್ಧಾಶ್ರಮ ಮತ್ತು ಮಂಗಲಪೇಟ ಹತ್ತಿರದ ಮದರ್‌ ಥೆರೆಸಾ ವೃದ್ಧಾಶ್ರಮಗಳಿಗೆ ಭೇಟಿ ನೀಡಿ, ವೃದ್ಧಾಶ್ರಮದಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲಿದ್ದ ವೃದ್ಧರನ್ನು ಆಪ್ತತೆಯಿಂದ ಮಾತನಾಡಿಸಿದರು.

ಎಲ್ಲಿಂದ ಬಂದಿದ್ದೀರಿ?, ನಿಮಗೆ ಮಾಸಾಶನ ಸಿಗುತ್ತಾ? ಎಂದು ಕೇಳಿ ಅವರ ಯೋಗಕ್ಷೇಮ ವಿಚಾರಿಸಿದರು. ಎಲ್ಲ ವೃದ್ಧರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಲು ಅಧಿ ಕಾರಿಗಳಿಗೆ ಸೂಚಿಸಿದರು. ಬಾಲಕರ ಬಾಲಮಂದಿರಕ್ಕೆ ಭೇಟಿ: ಇದಕ್ಕೂ ಮೊದಲು ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಂಜೂರಾದ ಹುದ್ದೆಗಳು ಮತ್ತು ಖಾಲಿ ಹುದ್ದೆಗಳ ಮಾಹಿತಿ ಪಡೆದು ಕಚೇರಿ ಶಿಸ್ತಾಗಿ ಇಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಬಾಲಮಂದಿರದಲ್ಲಿನ ವಸತಿ, ಅಡುಗೆ ಕೋಣೆಗಳನ್ನು ಜಿಲ್ಲಾಧಿ ಕಾರಿಗಳು ವೀಕ್ಷಿಸಿದರು.

ಅಲ್ಲಲ್ಲಿ ಮೇಲ್ಛಾವಣೆ, ಗೋಡೆಗಳು ಹಾಳಾಗಿದ್ದನ್ನು ಕಂಡು, ಇದನ್ನು ದುರಸ್ತಿ ಮಾಡಿಸಲು ಏನಾಗಿದೆ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿ, ಬಾಲಮಂದಿರವನ್ನು ಅಚ್ಚುಕಟ್ಟಾಗಿ ಇಡುವಂತೆ ಸೂಚಿಸಿದರು.

ಸೂಪರಿಟೆಂಡೆಂಟ್‌ಗೆ ಎಚ್ಚರಿಕೆ: ಅಲ್ಲಿದ್ದ ಬಾಲಕರಿಗೆ ಇಟ್ಟಿದ್ದ ಸಂಗೀತ ಸಲಕರಣೆಗಳು ಧೂಳು ಹತ್ತಿರುವುದನ್ನು ಮತ್ತು ಕೆಲವು ಕೋಣೆಗಳು ಎಲ್ಲೆಂದರಲ್ಲಿ ಕಸ ಬಿದ್ದಿರುವುದನ್ನು ಕಂಡು, ಇದು ನಿಮಗೆ ಕಣ್ಣಿಗೆ ಕಾಣುವುದಿಲ್ಲವೇ?, ನಿಮ್ಮ ಕಾರ್ಯವೈಖರಿ ಸರಿಪಡಿಸಿಕೊಳ್ಳದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಬಾಲಮಂದಿರದ ಸೂಪರಿಟೆಂಡೆಂಟ್‌ ಅವರಿಗೆ ಎಚ್ಚರಿಕೆ ನೀಡಿದರು.

ಅಲ್ಲಿದ್ದ ಕೆಲವು ಮಕ್ಕಳನ್ನು ಮಾತನಾಡಿಸಿ ಅವರ ಓದು, ಆರೋಗ್ಯದ ಬಗ್ಗೆ ವಿಚಾರಿಸಿದರು. ಇಲ್ಲಿ ಮೂಲಭೂತ ಸೌಕರ್ಯ ಇರುವಂತೆ ನೋಡಿಕೊಳ್ಳಿ. ಈ ಕಟ್ಟಡದ ದುರಸ್ತಿ ಕಾರ್ಯ ತುರ್ತಾಗಿ ಆಗುವ ನಿಟ್ಟಿನಲ್ಲಿ ಅಂದಾಜು ಪತ್ರಿಕೆ ಸಿದ್ಧಪಡಿಸಿ ಸಲ್ಲಿಸಿ, ಅನುಮತಿ ಪಡೆದು, ಕೆಲಸ ಆರಂಭಿಸಿರಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಬಾಲಕಿಯರ ಬಾಲಮಂದಿರಕ್ಕೆ ಭೇಟಿ: ಹತ್ತಿದಲ್ಲಿದ್ದ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಸ್ಥಳದಲ್ಲೇ ದೂರವಾಣಿ ಮೂಲಕ ನಗರಸಭೆ ಪೌರಾಯುಕ್ತರಿಗೆ ಮಾತನಾಡಿ, ಆವರಣದಲ್ಲಿನ ಕಸ ವಿಲೇವಾರಿಗೆ ಮತ್ತು ಅಲ್ಲಿದ್ದ ಬಾವಿಯನ್ನು ಶುಚಿಗೊಳಿಸಿ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ನಮಗೆ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು ಎಂದು ಅಲ್ಲಿದ್ದ ಸಿಬ್ಬಂದಿ ಕೋರಿದರು. ಬಾಲಕಿಯರ ಬಾಲಮಂದಿರದ ಬೇಡಿಕೆ ಪಟ್ಟಿ ಪಡೆದು, ಅದಕ್ಕೂ ಕೂಡ ಅಂದಾಜು ಪತ್ರಿಕೆ ಸಿದ್ಧಪಡಿಸಿ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ವೀಕ್ಷಣಾಲಯಕ್ಕೆ ಭೇಟಿ: ಬಸವನಗರದ ಜಂಗಲಕೋಯಿನಲ್ಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ವೀಕ್ಷಣಾಲಯಕ್ಕೂ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ವೀಕ್ಷಣಾಯಲಯದ ಆಪ್ತ ಸಮಾಲೋಚಕರಿಂದ, ಅಲ್ಲಿದ್ದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ, ಜಿಲ್ಲಾ ಮಕ್ಕಳ ರಕ್ಷಣಾಧಿ ಕಾರಿ ಸಿ.ಎನ್‌. ಜಾಧವ, ಜಿಲ್ಲಾ ವಿಕಲಚೇತನರ ಇಲಾಖಾ ಅಧಿಕಾರಿ ಜಗದೀಶ, ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪುರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಧೀಕ್ಷಕ ಶಂಭುಲಿಂಗ ಹಿರೇಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.