9 ವರ್ಷದ ಬಳಿಕ ವಿವಿ ಸಾಗರಕ್ಕೆ 100 ಅಡಿ ನೀರು

ತಳ ಮಟ್ಟ ತಲುಪಿದ್ದ ಜಲಾಶಯಕ್ಕೀಗ ಜೀವ ಕಳೆ ■ ಉತ್ತಮ ಮಳೆಯಾಗಿದ್ದರಿಂದ ಹರಿದು ಬರುತ್ತಿದೆ ನೀರು

Team Udayavani, Dec 12, 2019, 1:39 PM IST

12-December-12

ಸಿದ್ಧಗಂಗಾ ಶಿವಶಂಕರ್‌

ಹಿರಿಯೂರು: ಬರೋಬ್ಬರಿ 9 ವರ್ಷಗಳ ಬಳಿಕ ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ 100 ಅಡಿ ನೀರು ಹರಿದು ಬಂದಿದೆ. ಜಲಾಶಯದ ಕೋಡಿ ಮಟ್ಟ 130 ಅಡಿ ಇದ್ದರೆ, ತೂಬಿನ ಮಟ್ಟ 60 ಅಡಿ ಇದೆ. ತಾಲೂಕಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ವಾಣಿವಿಲಾಸ ಸಾಗರದ ಮೇಲ್ಭಾಗದಲ್ಲಿರುವ ಹೊಸದುರ್ಗ ತಾಲೂಕು, ಚಿಕ್ಕಮಗಳೂರಿನ ಕಡೂರು, ಬೀರೂರು , ಅಜ್ಜಂಪುರ ತಾಲೂಕುಗಳ ಕೆರೆ ಕಟ್ಟೆಗಳು ಕೋಡಿ ಒಡೆದಿದ್ದವು. ಇದರಿಂದಾಗಿ ವಾಣಿ ವಿಲಾಸ ಸಾಗರಕ್ಕೆ ಹೆಚ್ಚಿನ ನೀರು ಬಂದಿದೆ. ಅಲ್ಲದೆ ಕಳೆದ ಮೂರ್‍ನಾಲ್ಕು ವರ್ಷಗಳಿಗಿಂತ ಈ ಬಾರಿ ಜಲಾಶಯದ ಮೇಲ್ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ವಿವಿ ಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ.

ಮಳೆಗಾಲ ಆರಂಭವಾಗುವುದಕ್ಕಿಂತ ಮುನ್ನ ಜಲಾಶಯದಲ್ಲಿ ಕೇವಲ 61. 4 ಅಡಿ ನೀರಿತ್ತು. ತಾಲೂಕಿನಲ್ಲಿ ನೀರಿನ ಹಾಹಾಕಾರ ಉಂಟಾಗಿ ಜನ-ಜಾನುವಾರಗಳಿಗೆ ಕುಡಿಯಲು ನೀರಿಲ್ಲದೆ ಪರಿತಪಿಸುವಂತಹ ಸ್ಥಿತಿ ನಿರ್ಮಾಣವಾಗಿತ್ತು. ನಂತರ ವರುಣ ಕೃಪೆ ತೋರಿದ್ದರಿಂದ ಉತ್ತಮ ಮಳೆಯಾಗಿ ವಿವಿ ಸಾಗರದಲ್ಲಿ 100 ಅಡಿ ನೀರು ಸಂಗ್ರಹಗೊಳ್ಳುವಂತಾಗಿದೆ.

ವಾಣಿವಿಲಾಸ ಸಾಗರ 30 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸುತ್ತದೆ. ಅಡಿಕೆ, ತೆಂಗು ಬೆಳೆಗಳಿಗೆ ಆಧಾರವಾಗಿದೆ. ಇಷ್ಟೇ ಅಲ್ಲ, ಹಿರಿಯೂರು ನಗರ, ಚಿತ್ರದುರ್ಗ, ಚಳ್ಳಕೆರೆ ತಾಲೂಕುಗಳಿಗೆ ಇಲ್ಲಿಂದಲೇ ನೀರು ಪೂರೈಕೆಯಾಗುತ್ತಿದೆ.

ವೇದಾವತಿ ನದಿಗೆ ಅಡ್ಡಲಾಗಿ ವಾಣಿವಿಲಾಸ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. 2015ರಲ್ಲಿ 81.50 ಅಡಿ ನೀರು ಬಂದಿದ್ದನ್ನು ಬಿಟ್ಟರೆ ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ನೀರು ಸಂಗ್ರಹಗೊಂಡಿದ್ದು ಇದೇ ಮೊದಲು. 2016ರಲ್ಲಿ 71 ಅಡಿ,
2017ರಲ್ಲಿ 66 ಅಡಿ ನೀರಿನ ಸಂಗ್ರಹವಿತ್ತು. 2019ರ ಮೇ ತಿಂಗಳವರೆಗೆ ನೀರು ಖಾಲಿಯಾಗಿ ಕನಿಷ್ಠ ಮಟ್ಟ 61 ಅಡಿಗೆ ಬಂದು ಡೆಡ್‌ ಸ್ಟೋರೇಜ್‌ ಹಂತ ತಲುಪಿತ್ತು.

ಮಳೆಗಾಲ ಆರಂಭವಾದ ನಂತರ ಜಲಾಶಯಕ್ಕೆ ನೀರು ಬರಲು ಪ್ರಾರಂಭವಾಯಿತು. ಜೂನ್‌ನಿಂದ ಇಲ್ಲಿಯವರೆಗೆ 40 ಅಡಿಗಿಂತ ಹೆಚ್ಚು ನೀರು ಬಂದಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಕಳೆದ ಹತ್ತು ದಿನಗಳಿಂದ 2 ಅಡಿ ನೀರು ಹರಿದು ಬಂದಿದೆ. ಮಾರ್ಚ್‌ 30ರ ತನಕ ಪ್ರತಿ ದಿನ ಬೆಟ್ಟದತಾವರೆ ಕೆರೆಯಿಂದ ವಿವಿ ಸಾಗರಕ್ಕೆ 460 ಕ್ಯೂಸೆಕ್‌ ನೀರು ಹರಿದು ಬರಲಿದೆ.

ಸತತ ಬರಗಾಲದಿಂದ 4 ಲಕ್ಷ ತೆಂಗಿನಮರಗಳು ಒಣಗಿ ರೈತರು ಸಂಕಷ್ಟದಲ್ಲಿದ್ದಾರೆ. ಈಗ ನೀರು ಸಂಗ್ರಹಗೊಳ್ಳುತ್ತಿರುವುದರಿಂದ ನೀರಾವರಿ ಇಲಾಖೆ ಅಧಿಕಾರಿಗಳು ವಿವಿ ಸಾಗರದ ಎಡ ಮತ್ತು ಬಲ ನಾಲೆಗಳನ್ನು ಸ್ವತ್ಛಗೊಳಿಸಬೇಕು. ತೂಬುಗಳನ್ನು ರಿಪೇರಿ ಮಾಡಬೇಕು. ನಾಲೆಗಳಿಗೆ ಅಕ್ರಮ ಪಂಪ್‌ಸೆಟ್‌ ಅಳವಡಿಸಿ ನೀರು ಕಳ್ಳತನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
. ಕೆ.ಸಿ. ಹೊರಕೇರಪ್ಪ,
ತಾಲೂಕು ರೈತ ಸಂಘದ ಗೌರವಾಧ್ಯಕ್ಷ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.