ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ರಸ್ತೆಯಲ್ಲಿ ಬಿದ್ದವರ ಮೇಲೆ ಹರಿದ ಲಾರಿ: ಇಬ್ಬರ ಸಾವು
Team Udayavani, Dec 12, 2019, 1:59 PM IST
ದಾವಣಗೆರೆ: ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಹಿಂದಿನಿಂದ ಬಂದ ಲಾರಿ ಗಾಯಳುಗಳ ಮೇಲೆ ಹರಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ.
ಮಿಯಾಪುರ ಗ್ರಾಮದ ಅಂಜಿನಪ್ಪ(29) ಮತ್ತು ಮನೋಜ್ (19) ಮೃತ ದುರ್ದೈವಿಗಳು. ಈ ಯುವಕರು ದಾವಣಗೆರೆಯಿಂದ ತ್ಯಾವಣಿಗೆ ಕಡೆಗೆ ಬೈಕಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಈ ವೇಳೆ ಎದುರಿನ ಬೈಕ್ ನಲ್ಲಿದ್ದ ವ್ಯಕ್ತಿಗಳು ರಸ್ತೆಯ ಬದಿಗೆ ಬಿದ್ದರೆ, ಅಂಜಿನಪ್ಪ ಮತ್ತು ಮನೋಜ್ ರಸ್ತೆಯ ಮೇಲೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಬಂದ ಲಾರಿ, ಗಾಯಳುಗಳ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಸ್ಥಳದಲ್ಲೆ ಒಬ್ಬ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಕೆಲಕಾಲ ಗಾಯಳುಗಳು ರಸ್ತೆಯಲ್ಲೇ ನರಳಿದ್ದು, ಆಸ್ಪತ್ರೆಗೆ ಕರೆದೊಯ್ಯುಲು ವಾಹನ ಸಿಗದೆ ಪರದಾಟ ಅನುಭವಿಸಿದ್ದಾರೆ. ಇನ್ನಿಬ್ಬರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ