ಹಾಲಕ್ಕಿ ಸಾಂಸ್ಕೃತಿಕ ಮ್ಯೂಜಿಯಂ ನಿರ್ಮಾಣ


Team Udayavani, Dec 12, 2019, 3:47 PM IST

uk-tdy-1

ಕಾರವಾರ: ಹಾಲಕ್ಕಿ ಒಕ್ಕಲಿಗರ ಸಾಂಸ್ಕೃತಿಕ ವೈಭವ ಪ್ರದರ್ಶನಕ್ಕೆ ಮ್ಯೂಜಿಯಂ ಸ್ಥಾಪನೆಗೆ ಸರ್ಕಾರ 3 ಕೋಟಿ ರೂ. ಮಂಜೂರು ಮಾಡಿದೆ. ಪ್ರವಾಸಿಗರಿಗೆ ಶಾಶ್ವತವಾಗಿ ಹಾಲಕ್ಕಿ ಜನಾಂಗದ ಸಾಂಸ್ಕೃತಿಕ ಮಹತ್ವ ತಿಳಿಯುವ ಹಾಗೆ ಮ್ಯುಜಿಯಂ ನಿರ್ಮಾಣ ಮಾಡಲಾಗುವುದು ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಕ್ಕಿಗಳ ಉಡುಗೆ ತೊಡುಗೆ, ಸುಗ್ಗಿ ಕುಣಿತ, ಗುಮಟೆ ಪಾಂಗ್‌, ಸಾಂಪ್ರದಾಯಿಕ ಹಾಡಿನ ದಾಖಲೆ ಎಲ್ಲವೂ ಮ್ಯೂಜಿಯಂನಲ್ಲಿರಲಿವೆ ಎಂದರು. ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆ ಹಾಗೇ ಉಳಿದಿದೆ. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ಜಾನಪದ ಕಲಾವಿದೆ ಸುಕ್ರಿ ಬೊಮ್ಮ ಗೌಡರ ಮಾರ್ಗದರ್ಶನ ಪಡೆದು ಪ್ರಯತ್ನ ಮಾಡುವೆ. ಸುಕ್ರಿ ಬೊಮ್ಮ ಗೌಡರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಕರೆದೊಯ್ಯುವೆ. ಅವರ ಬಯಕೆ ಈಡೇರಿಸಲು ಯತ್ನಿಸುವೆ. ಇದರಿಂದ ಹಾಲಕ್ಕಿ ಸಮುದಾಯದ ಸಾಮಾಜಿಕ, ಆರ್ಥಿಕ ಪ್ರಗತಿ ಸಾಧ್ಯವಾಗಲಿದೆ ಎಂದರು.

ಗಡಿನಾಡಲ್ಲಿ ಕನ್ನಡ ಸಾಂಸ್ಕೃತಿ ಭವನ ನಿರ್ಮಾಣದ ಅವಶ್ಯಕತೆಯಿದ್ದು, ಇದಕ್ಕಾಗಿ 1.25 ಕೋಟಿ ರೂ. ಮಂಜೂರಾಗಿದೆ. ಕನ್ನಡ ಸಾಂಸ್ಕೃತಿ ಭವನವನ್ನು ಕರ್ನಾಟಕ ಗೋವಾ ಗಡಿ ಭಾಗದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.

ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ 100 ಕೋಟಿ ರೂ. ಸರ್ಕಾರ ನೀಡಿದೆ. ವಿವಿಧ ರಸ್ತೆ, ಚರಂಡಿ ನಿರ್ಮಾಣ, ರಸ್ತೆ ದುರಸ್ತಿ ತೆಗೆದುಕೊಳ್ಳಲಾಗುತ್ತಿದೆ. ರಾಮನಗುಳಿಕಲ್ಲೇಶ್ವರ ನಡುವೆ ಸೇತುವೆ ನಿರ್ಮಾಣಕ್ಕೆ 17 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದೆ. ಕಳೆದ ಮಳೆಗಾಲದ ಪ್ರವಾಹದಲ್ಲಿ ಈ ಭಾಗದ ತೂಗು ಸೇತುವೆ ಕೊಚ್ಚಿ ಹೋಗಿತ್ತು. ಇದಕ್ಕೆ ಶಾಶ್ವತ ಕಾಮಗಾರಿ ಮಾಡಲು ಸರ್ಕಾರ 17 ಕೋಟಿ ನೀಡಿದೆ ಎಂದರು.

ಕಾರವಾರ ಪ್ರವಾಸಿ ಮಂದಿರ ನಿರ್ಮಾಣಕ್ಕೆ 10 ಕೋಟಿ ಮಂಜೂರಾಗಿದೆ. ಕೋಡಿಭಾಗ, ಕಾಳಿ ಮಾತಾ ದೇವಾಲಯ ಇರುವ ದ್ವೀಪಕ್ಕೆ ಜಟ್ಟಿ ನಿರ್ಮಿಸಲು ಒಟ್ಟು 5 ಕೋಟಿ ಬಂದಿದೆ. ಕೂರ್ಮಗಡ ಬಳಿ ಜಟ್ಟಿ ನಿರ್ಮಾಣದ ಕಾಮಗಾರಿಗೆ ಹಣ ಮಂಜೂರಿ ಹಂತದಲ್ಲಿದೆ ಎಂದು ವಿವರಿಸಿದರು.

ಚಿಕ್ಕ ನೀರಾವರಿ ವಿಭಾಗಕ್ಕೆ 4 ಕೋಟಿ ಬಂದಿದೆ. ಕುಡಿಯುವ ನೀರಿನ ಕಾಮಗಾರಿ ರಿಪೇರಿಗೆ 10 ಕೋಟಿ ರೂ. ಹಾಗೂ ಸೀಬರ್ಡ್‌ ನೌಕಾನೆಲೆ, ಕಾರವಾರ ನಗರಕ್ಕೆ ನೀರು ಸರಬರಾಜು ಯೋಜನೆಗೆ 106 ಕೋಟಿ ರೂ.ಮಂಜೂರಾಗಿದೆ ಎಂದು ಶಾಸಕಿ ವಿವರಿಸಿದರು.

ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿ 4 ಕೋಟಿ ರೂ.ಬಂದಿದೆ. ವಿವಿಧ ಕಾಮಗಾರಿಗಳನ್ನು ಈ ಅನುದಾನದಲ್ಲಿ ತೆಗೆದುಕೊಳ್ಳಲಾಗಿದೆ. ಮೆಡಿಕಲ್‌ ಕಾಲೇಜು ಆಸ್ಪತ್ರೆ ನಿರ್ಮಾಣಕ್ಕೆ 160 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದರು. ಪ್ರವಾಹ ಪರಿಹಾರ: ಪ್ರವಾಹದಲ್ಲಿ ತೊಂದರೆಗೀಡಾದ ಕಾರವಾರ ತಾಲೂಕಿನ ವಿವಿಧ ಗ್ರಾಮಗಳ 1647 ಕುಟುಂಬಗಳಿಗೆ ತಲಾ 10 ಸಾವಿರ ದಂತೆ ಪರಿಹಾರ ವಿತರಿಸಲಾಗಿದೆ. 57 ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ತಲಾ 5 ಲಕ್ಷದಂತೆ ಪರಿಹಾರ ನೀಡಲು ಸಿದ್ಧತೆ ನಡೆದಿವೆ. ಮೊದಲ ಕಂತಿನ ಹಣ ನೀಡಲಾಗಿದೆ. ಮನೆ ಹಾನಿ ಸಿ ಕೆಟಗಿರಿಯ 342 ಫಲಾನುಭವಿಗಳಿಗೆ ತಲಾ 50 ಸಾವಿರ ಪರಿಹಾರ ವಿತರಿಸಲಾಗಿದೆ. ಅಂಕೋಲಾದಲ್ಲಿ 1673 ಕುಟುಂಬಗಳಿಗೆ ತಲಾ 10 ಸಾವಿರದಂತೆ ಪರಿಹಾರ ನೀಡಲಾಗಿದೆ. 135 ಜನರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು ನೀಡಲು ಪಟ್ಟಿ ಸಿದ್ಧವಿದ್ದು, ಮೊದಲ ಕಂತಿನ ಹಣ ನೀಡಲಾಗಿದೆ. 138 ಸಿ ಕೆಟಗರಿಯಲ್ಲಿ ಹಾನಿಯಾದವರಿಗೆ ತಲಾ 50 ಸಾವಿರದಂತೆ ಪರಿಹಾರ ವಿತರಿಸಲಾಗಿದೆ. ನಗರಸಭೆಯ ವ್ಯಾಪ್ತಿಯ 11 ಮನೆಗಳ ಕುಟುಂಬದವರಿಗೆ ತಲಾ 50 ಸಾವಿರದಂತೆ ಪರಿಹಾರ ವಿತರಿಸಲಾಗಿದೆ ಎಂದು

ಶಾಸಕಿ ರೂಪಾಲಿ ನಾಯ್ಕ ವಿವರಿಸಿದರು.

ಬಿಜೆಪಿ ವಕ್ತಾರ ರಾಜೇಶ್‌ ನಾಯಕ್‌, ಜಗದೀಶ್‌ ನಾಯಕ, ನಿತಿನ್‌ ಪಿಕಳೆ, ಗಣಪತಿ ಉಳ್ವೆಕರ್‌, ಅರುಣ್‌ ನಾಡಕರ್ಣಿ, ನಯನಾ ನೀಲಾವರ, ಬಿಜೆಪಿ ನಗರ ಮತ್ತು ಗ್ರಾಮೀಣ ಘಟಕದ ಅಧ್ಯಕ್ಷರು, ಶಾಸಕರು ಬೆಂಬಲಿಗರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.