ಶೃಂಗೇರಿಯಲ್ಲೂ ಅದ್ಧೂರಿ ಶೋಭಾಯಾತ್ರೆ
ದತ್ತ ಪೀಠದಲ್ಲಿ ಪೂಜೆ ಸಲ್ಲಿಸಲು ಮುಕ್ತ ಅವಕಾಶ ಕೊಡಿ
Team Udayavani, Dec 12, 2019, 4:15 PM IST
ಶೃಂಗೇರಿ: ದತ್ತ ಜಯಂತಿ ಅಂಗವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದತ್ತಮಾಲಾಧಾರಿಗಳು ಪಟ್ಟಣದ ಮುಖ್ಯ ರಸ್ತೆಯಲ್ಲಿ ಬುಧವಾರ ಶೋಭಾಯಾತ್ರೆ ನಡೆಸಿದರು. ಭಕ್ತರು ದತ್ತಾತ್ರೇಯರ ಮೂರ್ತಿಯೊಂದಿಗೆ ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಸಾಗಿದರು.
ಪಟ್ಟಣದ ಶ್ರೀ ಶಂಕರಾಚಾರ್ಯ ವೃತ್ತದ ಬಳಿ ದತ್ತಾತ್ರೇಯ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ದತ್ತಜಯಂತಿ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲೆಡೆ ಕೇಸರಿ ಬಾವುಟ, ಕೇಸರಿ ಧ್ವಜ ರಾರಾಜಿಸುತ್ತಿತ್ತು. ನಾಸಿಕ್ ವಾದ್ಯಮೇಳ ಶೋಭಾಯಾತ್ರೆಯ ಮೆರಗು ಹೆಚ್ಚಿಸಿತ್ತು. ಶೋಭಾಯಾತ್ರೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ಬಸ್ ನಿಲ್ದಾಣದ ಮೂಲಕ ಸಂತೆ ಮಾರುಕಟ್ಟೆ ಬಳಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸದಸ್ಯ ಬಿ.ಶಿವಶಂಕರ್, ಹಿಂದೂಗಳ ಶ್ರದ್ಧಾ ಕೇಂದ್ರವಾದ ದತ್ತಪೀಠದಲ್ಲಿ ಪೂಜೆ ಸಲ್ಲಿಸುವುದು ಹಿಂದಿನಿಂದಲೂ ನಡೆದುಕೊಂಡ ಬಂದ ಸಂಪ್ರದಾಯವಾಗಿದೆ. ಜಯಂತಿ ಅಂಗವಾಗಿ ಮಾಲಾಧಾರಣೆ ಮಾಡಿ, ವ್ರತಾಚರಣೆ ಕೈಗೊಂಡು ದತ್ತಪೀಠದಲ್ಲಿ ಸ್ವಾಮಿಯ ಪಾದುಕೆ ದರ್ಶನ ಮಾಡಲಾಗುತ್ತದೆ ಎಂದರು. ಸಂಘ ಪರಿವಾರದ ಮುಖಂಡ ಎ.ಎಸ್.ನಯನ ಮಾತನಾಡಿ, ದತ್ತ ಪೀಠವು ಅಯೋಧ್ಯೆ ತೀರ್ಪಿನಂತೆ ಹಿಂದೂಗಳ ಪರವಾಗುತ್ತದೆ ಎಂಬ ವಿಶ್ವಾಸವಿದೆ. ದತ್ತ ಭಕ್ತರಿಗೆ ಪೂಜೆ ಸಲ್ಲಿಸಲು ಮುಕ್ತ ಅವಕಾಶ ನೀಡಬೇಕು ಎಂದರು. ಶೋಭಾಯಾತ್ರೆಯಲ್ಲಿ ಬಿಜೆಪಿ ಮುಖಂಡರಾದ ಶ್ರೀಕಾಂತ್, ರಾಮಕೃಷ್ಣ, ಟಿ.ಎಸ್. ಉಮೇಶ್, ರಂಗನಾಥ್, ನಟೇಶ್, ಅಶೋಕ್, ನಾಗೇಂದ್ರ, ಹರೀಶ್ ಶೆಟ್ಟಿ, ವೇಣುಗೋಪಾಲ್, ಪ್ರವೀಣ, ವಿದ್ಯಾ, ರಾ ಕಾ, ಜ್ಯೋತಿರಾಘವೇಂದ್ರ, ಭಾಗ್ಯನಾಗೇಂದ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್ : ಗಿನ್ನೆಸ್ ಅಧಿಕಾರಿಗಳ ಭೇಟಿ
Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ