ಅಯೋಧ್ಯೆ ತೀರ್ಪು; ಎಲ್ಲಾ 18 ಮರುಪರಿಶೀಲನಾ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್
Team Udayavani, Dec 12, 2019, 4:30 PM IST
ನವದೆಹಲಿ:ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲಾ ಹದಿನೆಂಟು ಮರುಪರಿಶೀಲನಾ ಮೇಲ್ಮನವಿಗಳನ್ನು ಸುಪ್ರೀಂಕೋರ್ಟ್ ನ ಪಂಚಸದಸ್ಯ ಪೀಠ ಗುರುವಾರ ವಜಾಗೊಳಿಸಿದೆ.
ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ 18 ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್ ಸಿಜೆಐ ಎಸ್ ಎ ಬೋಬ್ಡೆ ನೇತೃತ್ವದ ಪಂಚಸದಸ್ಯ ಪೀಠ ಗೌಪ್ಯ ವಿಚಾರಣೆ ನಡೆಸಿತ್ತು.
ಪಂಚಸದಸ್ಯ ಪೀಠದಲ್ಲಿ ಸಿಜೆಐ ಎಸ್ ಎ ಬೋಬ್ಡೆ, ಜಸ್ಟೀಸ್ ಗಳಾದ ಡಿವೈ ಚಂದ್ರಾಚೂಡ್, ಅಶೋಕ್ ಭೂಷಣ್, ಎಸ್ ಎ ನಝೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡಿದೆ.
ಆಲ್ ಇಂಡಿಯಾ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಹಿಂದೂ ಮಹಾಸಭಾ, ನಿರ್ಮೋಹಿ ಅಖಾಡ ಸೇರಿದಂತೆ ಹದಿನೆಂಟು ಪಾರ್ಟಿಗಳು ಅಯೋಧ್ಯೆ ತೀರ್ಪಿನ ಕುರಿತು ಮರುಪರಿಶೀಲನಾ ಮೇಲ್ಮನವಿ ಸಲ್ಲಿಸಿದ್ದವು. ಆದರೆ ಅಯೋಧ್ಯೆ ಕುರಿತ ಅಂತಿಮ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವುದಾಗಿ ಪಂಚಸದಸ್ಯ ಪೀಠ ತಿಳಿಸಿದೆ. ಇದರೊಂದಿಗೆ ಅಯೋಧ್ಯೆ ಭೂವಿವಾದ ಕುರಿತ ಕಾನೂನು ಸಮರ ಅಂತ್ಯಕಂಡಂತಾಗಿದೆ.
ರಾಮಜನ್ಮಭೂಮಿ-ಬಾಬ್ರಿ ಮಸೀದಿಯ 2.77 ಎಕರೆ ಭೂವಿವಾದಕ್ಕೆ ಸಂಬಂಧಿಸಿದಂತೆ ನವೆಂಬರ್ 9ರಂದು ಸುಪ್ರೀಂಕೋರ್ಟ್ ಸಿಜೆಐ ಜಸ್ಟೀಸ್ ರಂಜನ್ ಗೋಗೊಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ, ಅಯೋಧ್ಯೆ ರಾಮಜನ್ಮಭೂಮಿಯಾಗಿದ್ದು, ಇಲ್ಲಿಯೇ ರಾಮಮಂದಿರ ನಿರ್ಮಿಸಲು ಕೇಂದ್ರ ಸರ್ಕಾರ ಮೂರು ತಿಂಗಳೊಳಗೆ ಸಮಿತಿ ರಚಿಸಬೇಕು. ಅಲ್ಲದೇ ಸುನ್ನಿ ವಕ್ಫ್ ಮಂಡಳಿಗೆ ಮಸೀದಿ ಕಟ್ಟಲು ಅಯೋಧ್ಯೆಯಲ್ಲಿ 5 ಎಕರೆ ಜಾಗ ನೀಡಬೇಕೆಂದು ಒಮ್ಮತದ ತೀರ್ಪನ್ನು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!