ಜಾಗ ಇದ್ರಷ್ಟೇ ವಾಹನ ನೋಂದಣಿ


Team Udayavani, Dec 13, 2019, 11:25 AM IST

bng-tdy-3

ಬೆಂಗಳೂರು: ನಗರದಲ್ಲಿ ಹೊಸ ವಾಹನ ಖರೀದಿಸುವವರು ಕಡ್ಡಾಯವಾಗಿ ಆ ವಾಹನ ನಿಲುಗಡೆಗೆ ಜಾಗ ಇರುವ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ಇನ್ನು ಈಗಾಗಲೇ ವಾಹನ ಇರುವವರಿಗೆ ಜಾಗದ ಲಭ್ಯತೆಗೆ ಸಂಬಂಧಿಸಿದಂತೆ ದೃಢೀಕರಿಸಲು ಎರಡು ವರ್ಷಗಳ ಕಾಲಾವಕಾಶ ನೀಡಬೇಕು. ನಿಗದಿತ ಅವಧಿಯಲ್ಲಿ ಸಲ್ಲಿಸದಿದ್ದರೆ, “ದಂಡ ಪ್ರಯೋಗ’ ಮಾಡಬೇಕು.

– ಹೀಗಂತ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹಾಗೂ ನಗರ ಭೂಸಾರಿಗೆ ನಿರ್ದೇಶನಾಲಯ (ಡಿಯುಎಲ್ಟಿ) ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮ ಸಂಯುಕ್ತವಾಗಿ ಸಿದ್ಧಪಡಿಸಿದ ಸಮಗ್ರ ಸಂಚಾರ ಯೋಜನೆ (ಸಿಎಂಪಿ)ಯ ಕರಡಿನಲ್ಲಿ ಶಿಫಾರಸು ಮಾಡಲಾಗಿದೆ. ವಸತಿ ಪ್ರದೇಶಗಳ ರಸ್ತೆಯುದ್ದಕ್ಕೂ ಕಾರು ಮತ್ತಿತರ ಪ್ರಕಾರದ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು, ರಸ್ತೆಯ ಶೇ. 25 ಭಾಗವು ಈ ಅನಧಿಕೃತ ವಾಹನ ನಿಲುಗಡೆ ಅತಿಕ್ರಮಿಸುತ್ತಿದೆ. ಪರಿಣಾಮ ನಗರದ ಭೂಬಳಕೆಯಲ್ಲಿ ವ್ಯತ್ಯಾಸ ಆಗುತ್ತಿದ್ದು, ವಾಹನಗಳ ಸರಾಸರಿ ವೇಗ ಕಡಿಮೆ ಆಗುವುದರ ಜತೆಗೆ ಸಂಚಾರ  ದಟ್ಟಣೆಗೂ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹೊಸ ವಾಹನಗಳ ನೋಂದಣಿಗೂ ಮುನ್ನ ಆ ವಾಹನ ನಿಲುಗಡೆಗೆ ಜಾಗದ ಲಭ್ಯತೆ ಬಗ್ಗೆ ಮಾಲಿಕರು ದೃಢೀಕರಿಸಬೇಕು. ಪ್ರಸ್ತುತ ಇರುವ ವಾಹನಗಳಿಗೆ ಈ ದೃಢೀಕರಣಕ್ಕೆ ಎರಡು ವರ್ಷ ಕಾಲಾವಕಾಶ ನೀಡಬೇಕು ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.

ಕಲ್ಯಾಣ ಮಂಟಪಗಳಿಗೂ ಕಡ್ಡಾಯ? ಕಲ್ಯಾಣ ಮಂಟಪಗಳು, ದೊಡ್ಡ ರೆಸ್ಟೋರೆಂಟ್‌ ಗಳು, ಚಿತ್ರಮಂದಿರಗಳು, ಶಾಪಿಂಗ್‌ ಕೇಂದ್ರಗಳು ಮತ್ತಿತರ ಕಡೆಗಳಲ್ಲಿ “ಪೀಕ್‌ ಲೋಡ್‌ ಪಾರ್ಕಿಂಗ್‌’ (ದಟ್ಟಣೆ ನಿಲುಗಡೆ ವ್ಯವಸ್ಥೆ) ಸೌಲಭ್ಯ ಹೊಂದಿರುವ ಬಗ್ಗೆಯೂ ದೃಢೀಕರಿಸಿಕೊಳ್ಳಬೇಕು ಎಂದೂ ಕರಡಿನಲ್ಲಿ ತಜ್ಞರು ಶಿಫಾರಸು ಮಾಡಿದ್ದಾರೆ.

ಮೋಟಾರು ವಾಹನ ಕಾಯ್ದೆ ಮತ್ತು ಮಹಾನಗರ ಪಾಲಿಕೆ ಬೈಲಾ ಮೂಲಕ ಈ ಸಂಬಂಧದ ನಿಯಮ ರೂಪಿಸಬೇಕು. ಕಟ್ಟಡ ನಿರ್ಮಾಣ ಯೋಜನೆಗೆ ಅನುಮೋದನೆ ನೀಡುವ ವ್ಯವಸ್ಥೆಯಲ್ಲೂ ಈ ವಾಹನ ನಿಲುಗಡೆ ಜಾಗದ ಲಭ್ಯತೆಗೆ ಸಂಬಂಧಿಸಿದ ನಿಯಮ ಇರಬೇಕು. ಇದಲ್ಲದೆ, ಆನ್‌-ಸ್ಟ್ರೀಟ್‌ ಪಾರ್ಕಿಂಗ್‌ (ರಸ್ತೆಗಳ ಬದಿ ನಿಲುಗಡೆ)   ಪ್ರೋತ್ಸಾಹಿಸದಿರಲು “ವಾಹನ ನಿಲುಗಡೆ ಶುಲ್ಕ’ ನೀತಿ ಪರಿಚಯಿಸಬೇಕು. ಈಗಾಗಲೇ ಇರುವ ಆನ್‌-ಸ್ಟ್ರೀಟ್‌ ಪಾರ್ಕಿಂಗ್‌ ಶುಲ್ಕಕ್ಕಿಂತ ಆಫ್-ಸ್ಟ್ರೀಟ್‌ ಪಾರ್ಕಿಂಗ್‌ (ವಾಹನ ನಿಲುಗಡೆಗಾಗಿಯೇ ನಿರ್ಮಿಸಿದ ತಾಣಗಳು) ಶುಲ್ಕ ಕಡಿಮೆ ಇರಬೇಕು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.