ಅಸ್ಸಾಂ ಪ್ರತಿಭಟನೆ ಎಫೆಕ್ಟ್; ಬಾಂಗ್ಲಾ ಸಚಿವರ ಬೆನ್ನಲ್ಲೇ ಜಪಾನ್ ಪ್ರಧಾನಿ ಭೇಟಿಯೂ ರದ್ದು
ಅಸ್ಸಾಂನ ಗುವಾಹಟಿಯಲ್ಲಿ ಡಿಸೆಂಬರ್ 15ರಿಂದ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ
Team Udayavani, Dec 13, 2019, 12:46 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಭಾರತ ಪ್ರವಾಸವನ್ನು ರದ್ದುಪಡಿಸುವ ಸಾಧ್ಯತೆ ಇದೆ ಎಂದು ಜಪಾನ್ ನ ಜೀಜಿ ಪ್ರೆಸ್ ವರದಿ ಮಾಡಿದೆ.
ಅಸ್ಸಾಂನ ಗುವಾಹಟಿಯಲ್ಲಿ ಡಿಸೆಂಬರ್ 15ರಿಂದ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅಬೆ ಭಾರತಕ್ಕೆ ಆಗಮಿಸಲು ಸಿದ್ದತೆ ನಡೆಸಿದ್ದರು.
ಏತನ್ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುವಾಹಟಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜ್ಯದ ವಿವಿಧೆಡೆ ವ್ಯಾಪಿಸಿದ್ದು, ಈ ನಿಟ್ಟಿನಲ್ಲಿ ಭಾರತ ಪ್ರವಾಸದ ಕುರಿತು ಮರು ಪರಿಶೀಲನೆ ನಡೆಸುವುದಾಗಿ ಶಿಂಜೋ ಅಬೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಡಿ.15ರಿಂದ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಶೃಂಗದಲ್ಲಿ ಪ್ರಧಾನಿ ಮೋದಿ ಮತ್ತು ಶಿಂಜೋ ಅಬೆ ಭೇಟಿ ನಡೆಯಲಿದೆಯೇ ಇಲ್ಲವೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
MUST WATCH
ಹೊಸ ಸೇರ್ಪಡೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ