ದತ್ತ ಪೀಠ ವಿವಾದಕ್ಕೆ ಶೀಘ್ರ ತಾರ್ಕಿಕ ಅಂತ್ಯ
ಭಜರಂಗದಳ ರಾಷ್ಟ್ರೀಯ ಸಹ ಸಂಯೋಜಕ ಸೂರ್ಯನಾರಾಯಣ್ ವಿಶ್ವಾಸ
Team Udayavani, Dec 13, 2019, 1:39 PM IST
ಚಿಕ್ಕಮಗಳೂರು: ದತ್ತಪೀಠ ವಿವಾದದ ಮುಕ್ತಿಗಾಗಿ ಅಯೋಧ್ಯೆ ಮಾದರಿಯಲ್ಲೇ ಹೋರಾಟ ನಡೆದಿದ್ದು, ಆದಷ್ಟು ಬೇಗ ತಾರ್ಕಿಕ ಅಂತ್ಯ ಕಾಣುವ ವಿಶ್ವಾಸವಿದೆ ಎಂದು ಭಜರಂಗದಳ ರಾಷ್ಟ್ರೀಯ ಸಹ ಸಂಯೋಜಕ ಸೂರ್ಯನಾರಾಯಣ್ ಹೇಳಿದರು.
ದತ್ತಪೀಠದ ಆವರಣದ ಹೊರಭಾಗದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ದತ್ತಪೀಠಕ್ಕೆ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವಂತೆ ಮನವಿ ಮಾಡಿದರು.
ದತ್ತ ಪೀಠದ ಹೊರಭಾಗದಲ್ಲಿ ಈ ಹಿಂದೆ ಮಾಂಸಾಹಾರ ಸೇವನೆ ನಡೆಯುತ್ತಿತ್ತು. ಹೋರಾಟದ ಫಲವಾಗಿ ಅದಕ್ಕೆ ಈಗ ಕಡಿವಾಣ ಬಿದ್ದಂತಾಗಿದೆ ಎಂದರು. ದತ್ತಪೀಠದ ಮುಕ್ತಿ ಹೋರಾಟಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್, ಸಚಿವ ಸಿ.ಟಿ.ರವಿ ಸೇರಿದಂತೆ ಹಲವು ಚುನಾಯಿತ ಪ್ರತಿನಿಧಿಗಳು ಮುಂದಾಗಿದ್ದರೆಂದು ತಿಳಿಸಿದರು.
ಶಂಕರದೇವರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಆಶ್ರಯ ಕೇಳಿ ಬಂದವರಿಗೆ ಅವರ ಧರ್ಮಾಚರಣೆಗೂ ಅವಕಾಶ ಮಾಡಿಕೊಡುವ ಔದಾರ್ಯ ನಮ್ಮದು. ಆದರೂ ನಮ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿಕೃತಿ ನಡೆಯುತ್ತಿದೆ ಎಂದು ಹೇಳಿದರು.
ಯಳನಾಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ, ಬೀರೂರು ರಂಭಾಪುರಿ ಶಾಖಾಮಠದ ಶ್ರಿ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಭಜರಂಗದಳ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ, ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಎ.ಶಿವಶಂಕರ್, ಕಾರ್ಯದರ್ಶಿ ಯೋಗೀಶ್ ರಾಜ್ ಅರಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ