ನಾಡ ಕಚೇರಿ ನಿವೇಶನ ಒತ್ತುವರಿ ತೆರವು ಕಾರ್ಯಾಚರಣೆ
Team Udayavani, Dec 13, 2019, 2:33 PM IST
ಭಾರತೀನಗರ: ನಾಡಕಚೇರಿಗೆ ಮಂಜೂರಾಗಿದ್ದ ಸ್ಥಳ ಒತ್ತುವರಿ ತಹಶೀಲ್ದಾರ್ ನಾಗೇಶ್ ಸ್ಥಳದಲ್ಲಿ ಹಾಜರಿದ್ದು ತೆರವುಗೊಳಿಸಿದರು.
ಗ್ರಾಮದ ನಿವಾಸಿ ಲಕ್ಷ್ಮಮ್ಮ ಒತ್ತುವರಿ ಮಾಡಿ ಕೊಂಡಿದ್ದ ಸ್ಥಳದಲ್ಲಿ ಶೌಚಾಲಯ ನಿರ್ಮಿಸಿದ್ದರು. ಬುಧವಾರ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸುವಂತೆ ಉಪ ತಹಶೀಲ್ದಾರ್ ಸೋಮಶೇಖರ್ ಅವರಿಗೆ ಸೂಚನೆ ನೀಡಿದ್ದರು.
ಗುರುವಾರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ನಾಗೇಶ್ ನೇತೃತ್ವದಲ್ಲಿ ನಾಡಕಚೇರಿ ನಿವೇಶನ ತೆರವು ಗೊಳಿಸಲು ಸರ್ವೆ ನಡೆಸಿ ಗುರುತು ಹಾಕಿ, ತೆರವು ಗೊಳಿಸಿದರು. ನಾಡಕಚೇರಿಗೆ ಮಂಜೂರಾಗಿದ್ದ ಜಾಗ ಗುರುತು ಮಾಡಿ ಸಂಬಂಧ ಪಟ್ಟಿ ಎಂಜಿನಿಯರ್ಗೆ ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಮಾಡುವಂತೆ ತಹಶೀಲ್ದಾರ್ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗೇಶ್ ಮಾತನಾಡಿ, ಈ ಭಾಗದಲ್ಲಿ ಮೂರೂಕಾಲು ಗುಂಟೆ ಜಾಗವಿತ್ತು. ಅದರಲ್ಲಿ ಒತ್ತುವರಿ ಮಾಡಿಕೊಂಡಿದ್ದ ಒಂದು ಗುಂಟೆ ತೆರವುಗೊಳಿಸಿ ನಾಡಕಚೇರಿ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ನಿರ್ಮಿತಿ ಕೇಂದ್ರದವರು ಕೂಡಲೇ ಕಟ್ಟಡ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವರು ಎಂದು ತಿಳಿಸಿದರು. ರಾಜಸ್ವ ನಿರೀಕ್ಷಕರಾದ ಮಹೇಶ್, ರಾಜಶೇಖರ್, ಗ್ರಾಮ ಲೆಕ್ಕಾಧಿಕಾರಿಗಳಾದ ರವಿ, ನವೀನ್, ಬೀರೇಶ್, ರುದ್ರೇಶ್, ಸುರೇಶ್, ಸೌಮ್ಯ, ಸಾಸಪ್ಪ, ಗೋವಿಂದಶೆಟ್ಟಿ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ