ನಿಮ್ಮ ಪಾನ್‌ – ಆಧಾರ್‌ ಲಿಂಕ್‌ ಮಾಡುವುದು ಹೇಗೆ? ಇಲ್ಲಿದೆ ವಿವರ : ಡಿಸೆಂಬರ್ 31 ಅಂತಿಮ ದಿನ


Team Udayavani, Dec 13, 2019, 9:32 PM IST

Aadhaar-PAN-Card-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ನಿಮ್ಮ ಆಧಾರ್‌ ಕಾರ್ಡ್‌ನೊಂದಿಗೆ ಪಾನ್‌ ಲಿಂಕ್‌ ಮಾಡಲು ಡಿಸೆಂಬರ್‌ 31 ಕಡೆಯ ದಿನವಾಗಿದೆ. ಈ ಹಿಂದೆ ಬರೊಬ್ಬರಿ 7 ಬಾರಿ ಕಡೆಯ ದಿನಾಂಕ ನಿಗದಿ ಮಾಡಲಾಗಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಪಾನ್‌ ಕಾರ್ಡ್‌ಗೆ ಆಧಾರ್‌ ಲಿಂಕ್‌ ಆಗದ ಕಾರಣ ಮತ್ತೆ ಅವಕಾಶ ಮಾಡಿಕೊಡಲಾಗಿತ್ತು.

ನಾಳಿದ್ದು, ಡಿ. 31 ಕಡೆಯ ದಿನ ನೀವು ಆಧಾರ್‌ ಲಿಂಕ್‌ ಮಾಡಿಸದೇ ಇದ್ದರೆ ನಿಮ್ಮ ಪಾನ್‌ ಕಾರ್ಡ್‌ ಮುಂಬರುವ ತಿಂಗಳಿನಿಂದ ನಿಷ್ಕ್ರಿಯಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪಾನ್‌ ನಿಷ್ಕ್ರಿಯಗೊಂಡರೆ ಬ್ಯಾಂಕ್‌ ವಹಿವಾಟು ಸೇರಿದಂತೆ ವಾಣಿಜ್ಯ ವ್ಯವಹಾರಗಳಿಗೆ ಸಮಸ್ಯೆಯಾಗಲಿದೆ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಾದರೆ ಆಧಾರ್‌ ಸಂಖ್ಯೆ ಅನಿವಾರ್ಯವಾಗಿತ್ತು. ಈ ವೇಳೆ ನಿಮ್ಮಲ್ಲಿ ಆಧಾರ್‌ ಕಾರ್ಡ್‌ ಇಲ್ಲದೇ ಇದ್ದರೆ ಅಥವ ನಿಮ್ಮ ಆಧಾರ್‌ ಪಾನ್‌ ಕಾರ್ಡ್‌ಗೆ ಲಿಂಕ್‌ ಆಗದೇ ಇದ್ದರೆ ನೀವು ತೆರಿಗೆ ಲಿಟರ್ನ್ಸ್ ಸಲ್ಲಿಸಲು ಬರುವುದಿಲ್ಲ. ಇನ್ನೂ ಯಾರದಾದರೂ ಪಾನ್‌ – ಆಧಾರ್‌ ಲಿಂಕ್‌ ಮಾಡಲು ಬಾಕಿ ಇದ್ದರೆ ಡಿಸೆಂಬರ್‌ ಅಂತ್ಯದೊಳಗೆ ಮಾಡಬೇಕಾಗಿದೆ.

ಲಿಂಕ್‌ ಮಾಡುವ ಬಗೆಯನ್ನು ಈ ಕೆಳಗೆ ಹಂತ ಹಂತವಾಗಿ ನೀಡಲಾಗಿದೆ.
ಹಂತ 1: https://www.incometaxindiaefiling.gov.in/home

ಹಂತ 2: ವೆಬ್‌ಸೈಟ್‌ನ ನಿಮ್ಮ ಎಡಬದಿಯ ಮೆಲೆ ಕಾಣಿಸಿಕೊಳ್ಳುವ ಲಿಂಕ್‌ ಆಧಾರ್‌ ಮೇಲೆ ಕ್ಲಿಕ್‌ ಮಾಡಿ.

ಹಂತ 3: ಅಲ್ಲಿ ಸೂಚಿಸಿದಂತೆ ನಿಮ್ಮ ಪಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ನಮೂದಿಸಿ.

ಹಂತ 4: ನಿಮ್ಮ ಆಧಾರ್‌ ಕಾರ್ಡ್‌ನಲ್ಲಿ ಮುದ್ರಣವಾಗಿರುವ ಹೆಸರನ್ನು ಅಲ್ಲಿ ನಮೂದಿಸಬೇಕು

ಹಂತ 5: ಕೆಲವು ಆಧಾರ್‌ ಕಾರ್ಡ್‌ಗಳಲ್ಲಿ ಹುಟ್ಟಿದ ವರ್ಷ ಮಾತ್ರ ದಾಖಲಾಗಿರುತ್ತದೆ. ಅಂತಹ ಪ್ರಕರಣಗಳಲ್ಲಿ ಅಲ್ಲಿ ನೀಡಲಾಗಿರುವ ‘https://www.incometaxindiaefiling.gov.in’ ಬಾಕ್ಸ್‌ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.

ಹಂತ 6: ನೀವು ಮೆಲೆ ನೀಡಲಾದ ಎಲ್ಲಾ ವಿವರಗಳು ಸರಿಯಾಗಿದೆಯೇ ಎಂದು ಮತ್ತೂಮ್ಮೆ ಪರೀಕ್ಷಿಸಿ, ಎಲ್ಲವೂ ಸರಿಯಾಗಿದ್ದರೆ “I agree to validate my Aadhar details with UIDAI’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

ಹಂತ 7: ಬಳಿಕ ಕೆಳಗೆ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳುವ ಕೋಡ್‌ (ಸರಿಯಾಗಿ ಗಮನಿಸಿ ಇದು ಹಲವು ಕ್ಯಾಪ್ಸ್‌ ಮತ್ತು ಸ್ಮಾಲ್‌ ಲೆಟರ್‌ಗಳನ್ನು ಅಂಕಿಯೊಂದಿಗೆ ಒಳಗೊಂಡಿರುತ್ತದೆ) ಅನ್ನು ನಮೂದು ಮಾಡಿ.

ಹಂತ 8: ಬಳಿಕ ಕೆಳಗೆ ಕಾಣಿಸಿಕೊಳ್ಳುವ ಲಿಂಕ್‌ ಆಧಾರ್‌ ಮತ್ತು ಕ್ಯಾನ್ಸಲ್‌ ಎಂಬ ಬಟನ್‌ಗಳನ್ನು ಗಮನಿಸಿಸಿ, ಅಲ್ಲಿ ನೀವು ಲಿಂಕ್‌ ಆಧಾರ್‌ ಬಟನ್‌ ಮೆಲೆ ಕ್ಲಿಕ್‌ ಮಾಡಬೇಕು.

ಹಂತ: 9 ಕಡೆಯದಾಗಿ ನಿಮ್ಮಿಂದ ಮಾಹಿತಿಯನ್ನು ಪಡೆದು ಕೊಂಡ ವೆಬ್‌ಸೈಟ್‌ ಎಲ್ಲವೂ ಸರಿಯಾಗಿದೆ ಎಂದಾದ ಬಳಿಕ ‘Your Pan is already linked’ ಎಂಬ ಸಂದೇಶವನ್ನು ತೋರಿಸುತ್ತದೆ.

ಮೊಬೈಲ್‌ನಲ್ಲೇ ಲಿಂಕ್‌ ಮಾಡುವುದು ಹೇಗೆ?
ನಿಮ್ಮ ಮೊಬೈಲ್‌ನಿಂದ ಎಸ್‌ಎಂಎಸ್‌ ಮೂಲಕ ಪಾನ್‌ ಮತ್ತು ಆಧಾರ್‌ ಕಾರ್ಡ್‌ ಅನ್ನು ಲಿಂಕ್‌ ಮಾಡಬಹುದು. ಇದಕ್ಕೆ ನೀವು ಮಾಡಬೇಕಾಗಿರುವುದು ಇಷ್ಟೇ.

ಉದಾ: ನಿಮ್ಮ ಆಧಾರ್‌ ಸಂಖ್ಯೆ 111122224444 ಎಂದೂ, ಪಾನ್‌ ಕಾರ್ಡ್‌ ನಂಬರ್‌ AAAPA9999Q ಎಂದು ಇದೆ ಎಂದುಕೊಳ್ಳೋಣ. ನಿಮ್ಮ ಪೋನ್‌ನಿಂದ UIDPAN 111122224444 AAAPA9999Q ಎಂದು 567678 ಅಥವ 56161 ಸಂಖ್ಯೆಗೆ ಮೆಸೇಜ್‌ ಮಾಡಬಹುದಾಗಿದೆ. ಇದಕ್ಕೆ ನಿಮ್ಮ ನೆಟ್ ವರ್ಕ್‌ ಪೂರೈಕೆದಾರರ ಮೆಸೇಜ್‌ ದರ ಅನ್ವಯವಾಗಲಿದೆ.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.