ಪಿಲಿಕುಳದಲ್ಲಿ ವೀಕ್ಷಣೆಗೆ ವಿಶೇಷ ವ್ಯವಸ್ಥೆ

ಹೆಜಮಾಡಿಯಿಂದ ಕೋಯಿಕ್ಕೋಡ್‌ ತನಕ ಕಂಕಣ ಸೂರ್ಯಗ್ರಹಣ ಗೋಚರ

Team Udayavani, Dec 14, 2019, 5:19 AM IST

xd-26

ಮಂಗಳೂರು: ಸುಮಾರು 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ಡಿ. 26ರಂದು ಕಂಕಣ ಸೂರ್ಯಗ್ರಹಣ ಗೋಚರವಾಗಲಿದೆ. ಇದರ ವೀಕ್ಷಣೆಗಾಗಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಪುಣೆಯಿಂದ 400 ವಿಶೇಷ ಸೋಲಾರ್‌ ಎಕ್ಲಿಪ್ಸ್‌ ಗ್ಲಾಸ್‌ಗಳನ್ನು ತರಿಸಲಾಗಿದೆ.

ಕರಾವಳಿಯ ಸುಮಾರು 158 ಕಿ.ಮೀ. ವ್ಯಾಪ್ತಿಯಲ್ಲಿ ಕಂಕಣ ಸೂರ್ಯಗ್ರಹಣ ಗೋಚರವಾಗಲಿದೆ. ಬೆಳಗ್ಗೆ 8.06ಕ್ಕೆ ಗ್ರಹಣ ಪ್ರಾರಂಭಗೊಳ್ಳಲಿದ್ದು, 9.26ಕ್ಕೆ ಮಧ್ಯ ಭಾಗಕ್ಕೆ ಬಂದು, 11.04ಕ್ಕೆ ಅಂತ್ಯ ಗೊಳ್ಳಲಿದೆ. ಮೂರು ತಾಸು ಇರಲಿದ್ದು, ಉಳಿದ ಪ್ರದೇಶಗಳಿಗೆ ಇದು ಪಾರ್ಶ್ವ ಸೂರ್ಯ ಗ್ರಹಣ ವಾಗಿರುತ್ತದೆ.

ಈ ವರ್ಷದಲ್ಲಿ ಇದು ಮೊದಲ ಮತ್ತು ಕೊನೆಯ ಸೂರ್ಯ ಗ್ರಹಣವಾಗಿದ್ದರೆ, ಕಂಕಣ ಸೂರ್ಯಗ್ರಹಣವು ಸುಮಾರು 50 ವರ್ಷಗಳಿಂದೀಚೆಗೆ ಮೊದಲ ಬಾರಿಗೆ ಕರಾವಳಿಯಲ್ಲಿ ಗೋಚರಿಸುತ್ತಿದೆ. ಅದಕ್ಕೂ ಹಿಂದೆ ಗೋಚರಿಸಿದೆಯೋ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧಿಕಾರಿಗಳು ಹೇಳುತ್ತಾರೆ. ಇದರ ವೀಕ್ಷಣೆಗೆಂದೇ ಪುಣೆಯ ಕುತ್ವಾಲ್‌ನಿಂದ 400 ಕನ್ನಡಕಗಳನ್ನು ತರಿಸಲಾಗಿದ್ದು, ಗ್ರಹಣ ವೀಕ್ಷಣೆಗೆ ಪಿಲಿಕುಳದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

2020ರ ಜೂನ್‌ನಲ್ಲಿ ಇನ್ನೊಂದು ಸೂರ್ಯಗ್ರಹಣ
2020ರ ಜೂನ್‌ನಲ್ಲಿ ಇನ್ನೊಂದು ಸೂರ್ಯಗ್ರಹಣ ಘಟಿಸಲಿದ್ದು, ಅದು ದ. ಭಾರತೀಯರಿಗೆ ಕಂಕಣ ಸೂರ್ಯಗ್ರಹಣವಾದರೂ ಕರಾವಳಿಗೆ ಪಾರ್ಶ್ವ ಗ್ರಹಣವಾಗಲಿದೆ. ಶೇ. 32ರಷ್ಟು ಗ್ರಹಣ ಕರಾವಳಿಗೆ ಗೋಚರಿಸಲಿದೆ. ಡಿ. 26ರ ಗ್ರಹಣವು ಕರಾವಳಿಯಲ್ಲಿ ಶೇ. 93ರಷ್ಟು ಗೋಚರವಾಗಲಿದೆ. ಸೂರ್ಯ ಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸಿದರೆ ಕಣ್ಣಿಗೆ ಹಾನಿಯಾಗುತ್ತದೆ. ಪಿಲಿಕುಳಕ್ಕೆ ಆಗಮಿಸಿ ಸಾರ್ವಜನಿಕರು ವೀಕ್ಷಣೆ ಮಾಡಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಶೈಕ್ಷಣಿಕ ಸಹಾಯಕ ಶರಣಯ್ಯ ತಿಳಿಸಿದ್ದಾರೆ.

ಸಂಪೂರ್ಣ ಪ್ರಕ್ರಿಯೆ ವೀಕ್ಷಣೆ
ಪಿನಾಲ್‌ ಆಪರೇಟರ್ ಮೂಲಕ ಗ್ರಹಣ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಈ ಮಾದರಿಯ ವೀಕ್ಷಣೆಯಲ್ಲಿ ಒಂದು ಕನ್ನಡಿಯನ್ನು ಸೂರ್ಯನ ಕಡೆ ಮುಖ ಮಾಡಿ ಅದರಿಂದ ಬರುವ ಬೆಳಕಿನ ಪ್ರತಿಬಿಂಬವನ್ನು ಅಲ್ಯುಮಿನಿಯಂ ಪ್ಲೇಟ್‌ ಒಂದರ ರಂಧ್ರದ ಮೂಲಕ ಹಾಯಿಸಿ 15 ಮೀ. ದೂರದಲ್ಲಿರುವ ಗೋಡೆಗೆ ಬಿಂಬ ಬಿಡಲಾಗುತ್ತದೆ. ಗ್ರಹಣದ ಎಲ್ಲ ಪ್ರಕ್ರಿಯೆಗಳು ಈ ಬಿಂಬದ ಮೂಲಕ ಗೋಚರವಾಗುತ್ತವೆ. ಟೆಲಿಸ್ಕೋಪ್‌ಗ್ಳ ಮೂಲಕವೂ ಸನ್‌ ಫಿಲ್ಟರ್‌ ಹಾಕಿ ಗ್ರಹಣವನ್ನು ಸಾರ್ವಜನಿಕರಿಗೆ ತೋರಿಸಲಾಗುತ್ತದೆ.

ವಿದ್ಯಾರ್ಥಿಗಳಿಂದಲೇ ಅಧ್ಯಯನ
ವಿಶೇಷವೆಂದರೆ ಗ್ರಹಣದ ವಿವಿಧ ಹಂತಗಳಲ್ಲಿ ಬೆಳಕಿನ ಪ್ರಖರತೆ ತಿಳಿದುಕೊಳ್ಳುವುದು, ವಾತಾವರಣದ ತಾಪಮಾನ, ಬೆಳಕಿನ ಗಾಢತೆಯ ಅಳತೆ ಸಹಿತ ವಿವಿಧ ಬದಲಾವಣೆಗಳನ್ನು ವಿದ್ಯಾರ್ಥಿಗಳೇ ಅಧ್ಯಯನ ನಡೆಸಲು ವ್ಯವಸ್ಥೆ ಮಾಡಲಾಗುತ್ತದೆ. ಗ್ರಹಣ ಆಗುವಾಗ ಚಂದ್ರ ಸೂರ್ಯನ ಎಷ್ಟು ವಿಸ್ತೀರ್ಣವನ್ನು ಆವರಿಸುತ್ತಾನೆ ಎನ್ನುವುದನ್ನೂ ಕಂಡುಹಿಡಿಯಲು ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ.

6 ಕಾಲೇಜುಗಳಲ್ಲಿ ಕಾರ್ಯಾಗಾರ
ಕಂಕಣ ಸೂರ್ಯಗ್ರಹಣವು ಕರಾವಳಿಗೆ ವಿಶೇಷವಾಗಿದೆ. ಈಗಾಗಲೇ ಅವಿಭಜಿತ ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಸೇರಿ 6 ಕಾಲೇಜುಗಳಲ್ಲಿ ಈ ಬಗ್ಗೆ ಕಾರ್ಯಾಗಾರ ನಡೆಸಲಾಗಿದೆ. ಪಿಲಿಕುಳ ಮಾತ್ರವಲ್ಲದೆ ಆರು ಕಾಲೇಜುಗಳಲ್ಲಿಯೂ ಸೂರ್ಯಗ್ರಹಣ ವೀಕ್ಷಣೆ ಮಾಡುವ ನಿಟ್ಟಿನಲ್ಲಿ ವೀಕ್ಷಣಾ ಕ್ರಮಗಳ ಬಗ್ಗೆ ಅವರಿಗೆ ತರಬೇತಿ ಮತ್ತು ವೀಕ್ಷಣೆಗೆ ಬೇಕಾದ ಕಿಟ್‌ಗಳನ್ನು ನೀಡಲಾಗುತ್ತಿದೆ.
-ಡಾ| ಕೆ. ವಿ. ರಾವ್‌, ನಿರ್ದೇಶಕರು, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.