ಕಪಿಲಾ ನದಿಯಲ್ಲಿ ವೈಭವದ ಶ್ರೀಕಂಠೇಶ್ವರನ ತೆಪ್ಪೋತ್ಸವ


Team Udayavani, Dec 14, 2019, 3:00 AM IST

kapila

ನಂಜನಗೂಡು: ಪಂಚ ಮಹಾರಥೋತ್ಸವ ಅಂಗವಾಗಿ ಶ್ರೀಕಂಠೇಶ್ವರನ ಸನ್ನಿಧಿಯ ಕಪಿಲಾ ನದಿಯಲ್ಲಿ ಶುಕ್ರವಾರ ಸಡಗರ, ಸಂಭ್ರಮದಿಂದ ಶ್ರೀಕಂಠೇಶ್ವರಸ್ವಾಮಿ ತೆಪ್ಪೋತ್ಸವ ಜರುಗಿತು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಈ ವೈಭವದ ಶ್ರೀಕಂಠನ ಉತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.

ಸಂಜೆ 7.30ಕ್ಕೆ ಸರಿಯಾಗಿ ದೇಗುಲದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್‌ ಅವರು ಶ್ರೀಕಂಠೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ಉತ್ಸವ ಮೂರ್ತಿಯನ್ನು ಹೂವಿನಿಂದ ಅಲಂಕೃತಗೊಳಿಸಿದ್ದಲ್ಲದೇ ಶ್ರೀಕಂಠಮುಡಿ ಧಾರಣೆಯಿಂದ ವಿಶೇಷವಾಗಿ ಕಂಗೊಳಿಸುತ್ತಿತ್ತು. ಈ ದೃಶ್ಯವನ್ನು ವೀಕ್ಷಿಸಿದ ಭಕ್ತರು ಭಾವಪರವಶರಾದರು.

ನಂತರ ವಿದ್ಯುತ್‌ ದೀಪದಿಂದ ಅಲಂಕೃತಗೊಂಡ ತೇಲುವ ವಾಹನದಲ್ಲಿ ಶ್ರೀ ಕಂಠೇಶ್ವರಸ್ವಾಮಿಯನ್ನು ಪ್ರತಿಷ್ಠಾಪಿಸಿ, ಕಪಿಲಾ ನದಿಯಲ್ಲಿ ಮೂರು ಸುತ್ತು ಪ್ರದಕ್ಷಣೆ ಮಾಡಲಾಯಿತು. ನಂಜನಗುಡಿನಾಧಿಶ್ವರ ನಂಜುಂಡಪ್ಪ ದಂಪತಿಗಳ ಈ ಜಲ ಉತ್ಸವದ ಸೊಬಗ‌ನ್ನು ಕಪಿಲಾ ನದಿ ಸ್ನಾನಘಟ್ಟದ ಸುತ್ತ ನೆರೆದಿದ್ದ ಭಕ್ತರು ಸೋಪಾನಕಟ್ಟೆ ಸೇರಿದಂತೆ ನದಿಯ ಇಕ್ಕೆಲಗಳ ದಂಡೆಯ ಮೇಲೆ ಕುಳಿತು ಕಣ್ತುಂಬಿಕೊಂಡರು.

ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜ್ಜಿಗೆ, ತೋರೆಮಾವು, ಕೆಂಪಿಸಿದ್ದನಹುಂಡಿ, ಬಸವನಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಆ ಕಡೆ ದಡದಲ್ಲಿ ನಿಂತು ಶ್ರೀಕಂಠೇಶ್ವರನ ವೈಭವದ ತಪ್ಪೋತ್ಸವವನ್ನು ವೀಕ್ಷಣೆ ಮಾಡಿ ಧನ್ಯತಾ ಭಾವ ಮೆರೆದರು. ಜಾತ್ರಾ ಮಹೋತ್ಸವ ಪ್ರಯುಕ್ತ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಮುಡಿ ಸೇವೆ ಸೇರಿದಂತೆ ವಿವಿಧ ಹರಕೆಗಳನ್ನು ತೀರಿಸಿ ಪುನೀತರಾದರು.

ಈ ಸಂದ‌ರ್ಭದಲ್ಲಿ ದೇವಾಲಯದ ನೂತನ ಕಾರ್ಯನಿರ್ವಹಕ ಅಧಿಕಾರಿ ಶಿವಕುಮಾರಯ್ಯ, ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಶಿವನಂಜು, ಸದಸ್ಯರಾದ ಶ್ರೀಧರ್‌, ಮಂಜಳಾ ಮಧು, ಇಂಧನ್‌ ಭಾಬು, ಪುಟ್ಟನಿಂಗ ಶೆಟ್ಟಿ , ಶಶಿರೇಖಾ, ದೇವಾಲಯದ ಸ್ಥಳಪುರೋಹಿತ ಸಪ್ತರ್ಷಿ ಜೋಯಿಸ್‌, ಅರ್ಚಕರಾದ ನೀಲಕಂಠ ದೀಕ್ಷಿತರು, ವಿಶ್ವಾನಾಥ ದೀಕ್ಷಿತರು, ಸದಾಶಿವು ಸೇರಿದಂತೆ ಅರ್ಚಕ ವೃಂದ ಹಾಗೂ ಅಪಾರ ಭಕ್ತ ಸಮೂಹ ನೆರೆ‌ದಿತ್ತು.

ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೋಲಿಸ್‌ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.