ಏದಲಭಾವಿಯಲ್ಲಿದೆ ಅತ್ಯುತ್ತಮ ಪರಿಸರ ಶಾಲೆ


Team Udayavani, Dec 14, 2019, 1:48 PM IST

14-December-16

ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ
: ಅತ್ಯುತ್ತಮ ಪರಿಸರದೊಂದಿಗೆ ಏದಲಭಾವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಗೊಳಿಸುತ್ತಿದೆ. ಮಕ್ಕಳಿಗಾಗಿ ಕೈತೋಟ ನಿರ್ಮಿಸಿ ಮೆಣಸಿಕಾಯಿ, ಟೋಮ್ಯಾಟೋ ಹಾಗೂ ಇನ್ನಿತರ ಕಾಯಿಪಲ್ಯ ಬೆಳೆಸಲಾಗಿದೆ. ಶಾಲೆ ಆವರಣದೊಳಗೆ ತೆಂಗು, ಅಶೋಕ ಮರಗಳಿವೆ. ಉದ್ಯಾನ ನಿರ್ಮಿಸಿ ಹಸಿರು ವಾತಾವರಣ ಸೃಷ್ಟಿಸಲಾಗಿದೆ. ಮಕ್ಕಳ ಆಟೋಟಕ್ಕೆ ಉತ್ತಮ ಆವರಣ ಇದೆ.

2012-13 ಸಾಲಿನ ಸರ್ವ ಶಿಕ್ಷಣ ಅಭಿಯಾನದಲ್ಲಿ ಸುಸಜ್ಜಿತವಾಗಿ 11 ಕೊಠಡಿ ನಿರ್ಮಿಸಲಾಗಿದೆ. ಗೋಡೆ ಮೇಲೆ ರಾಷ್ಟ್ರನಾಯಕರ ಭಾವಚಿತ್ರ, ರಾಷ್ಟ್ರ ಪ್ರಾಣಿ, ಪಕ್ಷಿ ಚಿತ್ರ ಚಿತ್ರಿಸಲಾಗಿದೆ. ಹಾಗೇ ಹಸಿರು ಹುಲ್ಲಿನ ಹಾಸಿನಲ್ಲಿ ಕರ್ನಾಟಕ, ಭಾರತ ನಕ್ಷೆ ಚಿತ್ರಿಸಲಾಗಿದೆ. 2014-15ನೇ ಸಾಲಿನಲ್ಲಿ ಹಸಿರು ಶಾಲೆ ಜಿಲ್ಲಾ ಪ್ರಶಸ್ತಿ ಕೂಡ ಲಭಿಸಿದೆ.

ಒಟ್ಟಾರೆ ಸುಂದರ ಪರಿಸರ ನಡುವೆ ಏದಲಭಾವಿ ಶಾಲೆ ಇತರ ಶಾಲೆಗಳಿಗೆ ಮಾದರಿಯಾಗಿದೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಬಿಸಿಯೂಟ ತಯಾರಿಸಲು ಉತ್ತಮ ಅಡುಗೆ ಕೋಣೆ, ಕುಡಿಯುವ ನೀರಿನ ವ್ಯವಸ್ಥೆ ಇದೆ. ಗುಣಮಟ್ಟದ ಶೌಚಾಲಯ ನಿರ್ಮಿಸಿ ಸ್ವಚ್ಚತೆ ಕಾಪಾಡಿಕೊಂಡು ಬರಲಾಗಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ಇಲ್ಲ. ಅಭ್ಯಸಿಸಲು ಗ್ರಂಥಾಲಯ ಸಹ ಇದೆ. ಇನ್ನೂ ಹೆಚ್ಚಿನ ಶಿಕ್ಷಣ ನೀಡಲು ಎಲ್‌ಸಿಡಿ ಪ್ರೋಜೆಕ್ಟ್ ಇದ್ದು, ಬಹು ವಿಷಯ ಆಧಾರಿತ ಸಿಡಿಗಳ ಮೂಲಕ ವಿದ್ಯಾರ್ಥಿಗಳಿಗೆ ಪಠ್ಯೇತರ ಬೋಧನೆ ನಡೆಸಿಕೊಂಡು ಬರಲಾಗುತ್ತಿದೆ. ಹಾಗೇ ಮಕ್ಕಳಲ್ಲಿ ಕಲಿಕಾ ಆಸಕ್ತಿ ಮೂಡಿಸಲು ಕ್ಯಾಸಿಯೋ ಮೂಲಕ ಸಂಗೀತ ಕೂಡ ಹೇಳಿಕೊಡಲಾಗುತ್ತಿದೆ.

ಶಾಲೆ 1ರಿಂದ 8ನೇ ತರಗತಿಗಳಿವೆ. ಮೂವರು ಜನ ಖಾಯಂ ಶಿಕ್ಷಕರು ಹಾಗೂ ಮೂರು ಜನ ಅತಿಥಿ ಶಿಕ್ಷಕರು ಇದ್ದಾರೆ. ಇಂಗ್ಲಿಷ್‌ ಹಾಗೂ ಹಿಂದಿ ಸೇರಿ ಇಬ್ಬರು ಶಿಕ್ಷಕರು ಕೊರತೆ ಇದೆ. ಹೀಗಾಗಿ ಎರಡು ವಿಷಯಗಳ ಮೇಲೆ ಹಿಡಿತ ಸಾಧಿಸಲು ಶಿಕ್ಷಕರನ್ನು ನೇಮಿಸುವುದು ಅವಶ್ಯಕವಿದೆ ಎನ್ನುತ್ತಾರೆ ಶಿಕ್ಷಕರು.

ಒಟ್ಟು 217 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಪ್ರತಿ ವರ್ಷ ಉತ್ತಮ ಫಲಿತಾಂಶ ಬರುತ್ತದೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಡೊಳ್ಳು ಕುಣಿತ, ಹಾಗೂ ನಾಟಕ ಪ್ರದರ್ಶಿಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದು ಶಾಲೆಗೆ ಹೆಮ್ಮೆ ವಿಷಯ ಎಂದು ಶಿಕ್ಷಕರು ತಿಳಿಸಿದ್ದಾರೆ.

ಗ್ರಾಮಸ್ಥರ ಸಹಕಾರದಿಂದ ಶಾಲೆ ಅಭಿವೃದ್ಧಿ ಮಾಡಲಾಗಿದೆ. ಪರಿಸರವೇ ಮಕ್ಕಳಿಗೆ ಹೆಚ್ಚಿನ ಜ್ಞಾನತಂದು ಕೊಡುವಂತಿದೆ. ಇಬ್ಬರು ಶಿಕ್ಷಕರ ಅವಶ್ಯಕತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮಾಡಿಕೊಂಡು ಬರಲಾಗುತ್ತಿದೆ.
ಸಂಗಪ್ಪ ಡಿ. ವಿಶ್ವಕರ್ಮ,
ಪ್ರಧಾನ ಗುರುಗಳು, ಏದಲಭಾವಿ

ಅತ್ಯುತ್ತಮ ಶಾಲೆಯಿಂದ ನಮ್ಮೂರಿನ ಘನತೆ ಹೆಚ್ಚಿಸಿದೆ. ಕಲಿಕಾ ಗುಣಮಟ್ಟ ಸಾಧಿಸಲು ಶಿಕ್ಷಕರ ಬೇಕಿದೆ. ಇನ್ನು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು.
ಹುಲಗಪ್ಪ ಬಾಚಿಹಾಳ,
ಎಸ್‌ಡಿಎಂಸಿ ಅಧ್ಯಕ್ಷ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.