ರಸ್ತೆ ಕಾಮಗಾರಿ ಸ್ಥಗಿತಗೊಳಿಸಿ ಗ್ರಾಮಸ್ಥರ ಆಕ್ರೋಶ
Team Udayavani, Dec 14, 2019, 2:46 PM IST
ಮುಂಡಗೋಡ: ತಾಲೂಕಿನ ಮಲವಳ್ಳಿಯಿಂದ ಕಾಳಗನಕೊಪ್ಪ ಮಾರ್ಗವಾಗಿ ಮುಂಡಗೋಡವರೆಗೆ ನಿರ್ಮಿಸುತ್ತಿರುವ ಡಾಂಬರ್ ರಸ್ತೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಗ್ರಾಮಸ್ಥರು ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. ಮಲವಳ್ಳಿಯಿಂದ ಮುಂಡಗೋಡವರೆಗೂ ಡಾಂಬರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆಯ ಮೆಟಲಿಂಗ್ ಮಾಡಬೇಕು. ಖಡೀಕರಣ ಮೆಟಲಿಂಗ್ ಡಾಂಬರು ಸೇರಿದಂತೆ ಒಂಬತ್ತು ಇಂಚು ದಪ್ಪ ರಸ್ತೆ ನಿರ್ಮಿಸಬೇಕು. ಆದರೆ ಕೇವಲ ಐದು ಇಂಚು ದಪ್ಪ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಲೋಕೋಪಯೋಗಿ ಇಲಾಖೆಯವರು ತಯಾರಿಸಿರುವ ಕಾಮಗಾರಿ ಕ್ರಿಯಾ ಯೋಜನೆ ಕೈಯಲ್ಲಿ ಹಿಡಿದುಕೊಂಡು ಯೋಜನೆಯಂತೆ ಕಾಮಗಾರಿ ಮಾಡಬೇಕು ಎಂದು ಪಟ್ಟು ಹಿಡಿದಿದ್ದು ಈಗಾಗಲೆ ಮಲವಳ್ಳಿಯಿಂದ ಒಂದು ಕಿಮೀ ರಸ್ತೆ ಸಂಪೂರ್ಣ ಡಾಂಬರ್ ಮಾಡಿ ಮುಗಿಸಲಾಗಿದೆ. ಇದನ್ನು ಪರಿಶೀಲಿಸಬೇಕು. ಕ್ರಿಯಾ ಯೋಜನೆಯಲ್ಲಿರುವ ಹಾಗೆ ಕೆಲಸ ಮಾಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದು ಕೆಲಸ ಸ್ಥಗಿತಗೊಳಿಸಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಕ್ರಿಯಾ ಯೋಜನೆಯಲ್ಲಿ ಇರುವ ಹಾಗೆ ರಸ್ತೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಆದರೆ ಈಗಾಗಲೆ ಮುಗಿದಿರುವ ರಸ್ತೆಯನ್ನು ಸಹ ಸರಿ ಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!