ಹದಗೆಟ್ಟ ರಸ್ತೆ ದುರಸ್ತಿ ಯಾವಾಗ?

„ಗುಂಡಿ ಬಿದ್ದ ರಸ್ತೆಯಲ್ಲಿ ಸಂಚಾರಕ್ಕೆ ಸಂಕಷ್ಟ„ಮೆಣಸೆ ಗ್ರಾಮಸ್ಥರ ನರಕಯಾತನೆ

Team Udayavani, Dec 14, 2019, 3:18 PM IST

14-December-18

„ರಮೇಶ್‌ ಕರುವಾನೆ
ಶೃಂಗೇರಿ:
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನಡೆದು ಆರು ತಿಂಗಳು ಕಳೆದರೂ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಹೀಗಾಗಿ, ಹೊಂಡ, ಗುಂಡಿಯಲ್ಲಿ ದಿನವೂ ಸಂಚರಿಸಬೇಕಾದ ಅನಿವಾರ್ಯತೆ ತಾಲೂಕಿನ ಮೆಣಸೆ- ಹಾಲಂದೂರು ಗ್ರಾಮಸ್ಥರಿಗೆ ಬಂದೊದಗಿದೆ.

ರಾಜ್ಯ ಹೆದ್ದಾರಿ ಎಸ್‌.ಎಚ್‌.27 ಮೆಣಸೆಯಿಂದ ಹಾಲಂದೂರು, ಮಸಿಗೆ, ಕಿರಕೋಡು ಮುಂತಾದ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರೇಣುಕಾಂಬಾ ನಗರದ ಮುಖ್ಯ ರಸ್ತೆ ಅಭಿವೃದ್ಧಿಗೆ ಇನ್ನೂ ಕಾಲ ಕೂಡಿಬಂದಿಲ್ಲ. ರಸ್ತೆ ಡಾಂಬರೀಕರಣವಾದ ನಂತರ ಒಂದೆರಡು ಬಾರಿ ಹೊಂಡ, ಗುಂಡಿಗಳನ್ನು ಮುಚ್ಚಿದ್ದು, ಅದರ ಹೊರತಾಗಿ ರಸ್ತೆ ಅಭಿವೃದ್ಧಿಯನ್ನೇ ಕಂಡಿಲ್ಲ ಎಂಬ ಆರೋಪ ಸ್ಥಳೀಯರದ್ದಾಗಿದೆ.

ರೇಣುಕಾಂಬಾ ನಗರದಲ್ಲಿರುವ ಒಂದು ನೂರಕ್ಕೂ ಹೆಚ್ಚು ಮನೆಗಳ ಜನರು ಸೇರಿದಂತೆ ಅನೇಕ ಹಳ್ಳಿಗಳ ಜನರು ಓಡಾಡಲು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಹೊಂಡ, ಗುಂಡಿ ತಪ್ಪಿಸಲು ಸಾಧ್ಯವಾಗದ ಸ್ಥಿತಿಯಲ್ಲಿ ರಸ್ತೆ ಇದ್ದು, ಮಳೆಗಾಲದಲ್ಲಿ ಕೆಲವೆಡೆ ಕೆರೆಯಾಗಿ ರಸ್ತೆ ಮಾರ್ಪಾಟಾಗುತ್ತದೆ. ವಾಹನ ಸವಾರರು ಕೆರೆಯಂತಿರುವ ರಸ್ತೆಯಲ್ಲಿ ನೀರಿಗೆ ಇಳಿದು ಹತ್ತಬೇಕಿದೆ.

ಸುತ್ತಮುತ್ತಲಿನ ರಸ್ತೆಗಳು ಅಭಿವೃದ್ಧಿ ಹೊಂದಿದರೂ ಈ ರಸ್ತೆಯ ಗ್ರಹಣ ಮಾತ್ರ ಬಿಟ್ಟಿಲ್ಲ. ಎರಡು ಕಿ.ಮೀ. ರಸ್ತೆ ಮೆಣಸೆಯಿಂದ ಮೂಡಬನದ ಮೂಲಕ ಹಾಲಂದೂರು ಮುಖ್ಯ ರಸ್ತೆಗೆ ಸಂಪರ್ಕಿಸುತ್ತದೆ. ರಸ್ತೆ ಬದಿಯ ಗಿಡಗಂಟಿಗಳು, ಮುಳ್ಳು ಮುಚ್ಚಿಕೊಂಡಿದ್ದು, ರಸ್ತೆಯಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯವಾಗಿದೆ. ಪ್ರತಿದಿನ ಖಾಸಗಿ ಬಸ್‌ ಸಹಿತ ನೂರಾರು ವಾಹನಗಳು ಈ ರಸ್ತೆಯಲ್ಲಿಯೇ ಸಂಚಾರ ಮಾಡುತ್ತವೆ. ಹಾಗಾಗಿ, ಆದ್ಯತೆ ಮೇಲೆ ರಸ್ತೆ ಮರು ಡಾಂಬರಿಕರಣವಾಗಬೇಕಿದೆ. ಹಲವಾರು ವರ್ಷದಿಂದ ನನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಗೆ ಕಳೆದ ಏಪ್ರಿಲ್‌ನಲ್ಲಿ 50 ಲಕ್ಷ ರೂ. ಅನುದಾನದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆದರೆ ನಂತರ ಯಾವುದೇ ಕಾಮಗಾರಿ ಆರಂಭವಾಗದೇ ಗ್ರಾಮಸ್ಥರು ಇನ್ನೂ ಹೊಂಡ- ಗುಂಡಿಗಳಲ್ಲೇ ಸಂಚರಿಸಬೇಕಿದೆ.

ಅಡ್ಡಗದ್ದೆ ಗ್ರಾಪಂ ವ್ಯಾಪ್ತಿಯ ಎನ್‌.ಎಚ್‌.169ರಿಂದ ಹೆಬ್ಬಿಗೆ, ಮಡಹು, ಕೆರೋಡಿ ಮುಂತಾದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಜಿಪಂ ರಸ್ತೆ ಸಂಪೂರ್ಣ ಹಾಳಾಗಿದೆ. ತುಂಗಾ ನದಿಯಿಂದ ಮರಳು ಸಾಗಾಟ ನಡೆಸುವುದರಿಂದ ಅತಿ ಭಾರದ ಲಾರಿ ಸಂಚಾರ ಇದಕ್ಕೆ ಕಾರಣವಾಗಿದೆ. ಸರಕಾರಕ್ಕೆ ಸಾಕಷ್ಟು ಆದಾಯವಿದ್ದರೂ ಡಾಂಬರೀಕರಣ ಇನ್ನೂ ಆಗಲಿಲ್ಲ ಎಂಬುದು ಗ್ರಾಮಸ್ಥರ ದೂರಾಗಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿರುವ ವಳಲೆ ಮಾವಿನಕಾಡು ರಸ್ತೆಯಲ್ಲಿ ಅತಿವೃಷ್ಟಿಯಿಂದ ಹೊಂಡ-
ಗುಂಡಿಗಳು ಬಿದ್ದಿದ್ದು, ಸರಕಾರ ತುರ್ತು ದುರಸ್ತಿಗೆ ಗಮನ ಹರಿಸಬೇಕಿದೆ. ಮರ್ಕಲ್‌ ಗ್ರಾಪಂನ ಸಿರಿಮನೆ ಜಲಪಾತದ ರಸ್ತೆಯಲ್ಲೂ ಗುಂಡಿಗಳಾಗಿದ್ದು, ಸಂಚಾರ ಮಾಡುವುದೇ ಕಷ್ಟವಾಗಿದೆ. ಜಲಪಾತ ವೀಕ್ಷಿಸಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಹದಗೆಟ್ಟ ರಸ್ತೆ ಮೂಲಕ ಸಂಚಾರ ನಡೆಸಬೇಕಿದೆ.

ಪ್ರತಿ ದಿನದ ಅಗತ್ಯವಾಗಿರುವ ರಸ್ತೆ ಕಳೆದ ಮೂರು ದಶಕದಿಂದಲೂ ಇದೇ ರೀತಿಯಾಗಿದೆ. ಪ್ಯಾಚ್‌ವರ್ಕ್‌ ಒಂದೆರಡು ಬಾರಿಯಾಗಿದೆ. ಆದರೂ, ರಸ್ತೆ ಮತ್ತೆ ಹಾಳಾಗಿದೆ. ಅನೇಕ ಕಡೆ ರಸ್ತೆ ಬದಿ ಕಾಲುವೆ ಇಲ್ಲದಿರುವುದು, ಗುಣಮಟ್ಟದ ಕಾಮಗಾರಿ ನಡೆಯದೇ ರಸ್ತೆ ದುಸ್ಥಿತಿಯಲ್ಲಿದೆ. ರಸ್ತೆಯನ್ನು ಕೆಲವೆಡೆ ಎತ್ತರಿಸುವ ಅಗತ್ಯವಿದ್ದು, ಸರಕಾರ ತುರ್ತಾಗಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು.
.ಜಯಂತ ಶೆಟ್ಟಿ,
ರೇಣುಕಾಂಬಾನಗರ, ಶೃಂಗೇರಿ

ರಸ್ತೆ ಅಭಿವೃದ್ಧಿಗೆ ಶಾಸಕ ಟಿ.ಡಿ.ರಾಜೇಗೌಡರು 50 ಲಕ್ಷ ರೂ. ಮೀಸಲಿರಿಸಿದ್ದು, ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಸ್ತೆಗೆ ಮರು ಡಾಂಬರೀಕರಣದ ಮೂಲಕ ಅಭಿವೃದ್ಧಿಪಡಿಸಲಾಗುತ್ತದೆ.
.ಎಂ.ಪಿ.ಚಂದ್ರಹಾಸ,
ಮೆಣಸೆ ಗ್ರಾಪಂ ಸದಸ್ಯ

ಟಾಪ್ ನ್ಯೂಸ್

Modi, Shah, Dhoni, Shahrukh, Sachin apply for the post of Team India coach!

Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Modi, Shah, Dhoni, Shahrukh, Sachin apply for the post of Team India coach!

Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.