ನಕ್ಸಲ್‌ ನೆರಳಿನ ಎಳನೀರಿಗೆ ಕಿಂಡಿ ಅಣೆಕಟ್ಟು

ಪಾಲದ ಸೇತುವೆಗೆ ಮುಕ್ತಿ; 5 ಕೋ. ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, Dec 15, 2019, 4:27 AM IST

zx-15

ಬೆಳ್ತಂಗಡಿ: ನಕ್ಸಲ್‌ ನೆರಳಿನಲ್ಲೇ ಜೀವನ ಸಾಗಿಸುತ್ತಿದ್ದ ಮಂದಿಗೆ ಇದೀಗ ಕೊಂಚ ನಿಟ್ಟುಸಿರು ಬಿಡುವ ಕಾಲ. ಬಹುಕಾಲದಿಂದ ಬೇಡಿಕೆಗೆ ಕಡೆಗೂ ಸರಕಾರ ಅಸ್ತು ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಅಂಚಿನಲ್ಲಿರುವ ಬೆಳ್ತಂಗಡಿ ತಾ|ನ ಮಿತ್ತಬಾಗಿಲು ಗ್ರಾಮದ ಎಳನೀರು ಸಮೀಪದ ಬಂಗಾರಪಲ್ಕೆ ಸೇತುವೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರ 5 ಕೋ. ರೂ. ಮಂಜೂರು ಗೊಳಿಸಿದ್ದು, ಮುಖ್ಯಮಂತ್ರಿಯವರು ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದಾರೆ.

ಊರಿನ ಸಮಸ್ಯೆ ಬಗ್ಗೆ ಉದಯವಾಣಿ ಸುದಿನದಲ್ಲಿ ಜು.28 ರಂದು ನೂತನ ಸರಕಾರದಿಂದ ಮೂಲ ಸೌಕರ್ಯ ನಿರೀಕ್ಷೆ ಎಂಬ ವರದಿ ಪ್ರಕಟಿಸಲಾಗಿತ್ತು. ಇದಕ್ಕೆ ಶಾಸಕ ಹರೀಶ್‌ ಪೂಂಜ ಅನುದಾನ ಮೀಸಲಿಡುವ ಭರವಸೆ ನೀಡಿದ್ದರು. ಅದರಂತೆ ಎಳನೀರು ಭಾಗದ ಕೃಷಿಕರ ಅನುಕೂಲಕ್ಕಾಗಿ ಮತ್ತು ಬಂಗಾರಪಲ್ಕೆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವುದಕ್ಕಾಗಿ ಬಂಗಾರಪಲ್ಕೆ ಎಂಬಲ್ಲಿ ನೇತ್ರಾವತಿ ನದಿಗೆ 5 ಕೋ. ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಮಂಜುರಾಗಿದೆ. ಸಿ.ಎಂ. ಡಿ. 8ರಂದು ಉಜಿರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ.

ಹಲವು ರಸ್ತೆಗಳ ಅಭಿವೃದ್ಧಿ
ಎಳನೀರು ರಸ್ತೆಗೆ 5 ಲಕ್ಷ ರೂ., ಗುತ್ಯಡ್ಕ ಕುರೆಕಲ್‌ ರಸ್ತೆಗೆ 10 ಲಕ್ಷ ರೂ., ಗುತ್ಯಡ್ಕ ಶಾಲೆ ರಸ್ತೆಗೆ 10 ಲಕ್ಷ ರೂ., ಬಂಗಾರ ಪಲ್ಕೆ ಮಲೆಕುಡಿಯ ಕಾಲನಿ ರಸ್ತೆಗೆ 5 ಲಕ್ಷ ರೂ. ಮಂಜೂರಾಗಿದೆ. ಗುತ್ಯಡ್ಕ, ಎಳನೀರು ರಸ್ತೆಗೆ ತಲಾ 3 ಲಕ್ಷ ರೂ. ಮಂಜೂ ರಾಗಿ ಕಾಮಗಾರಿ ಪೂರ್ಣಗೊಂಡಿದೆ. ಬಡಮನೆ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನದ ಪ್ರಸ್ತಾವನೆ ಮಂಜೂರಾತಿ ಹಂತ ದಲ್ಲಿದೆ. ವಿಧಾನ ಪರಿಷತ್‌ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಕುರ್ಚಾರು ಪ. ಪಂಗಡ ಕಾಲನಿ ರಸ್ತೆ ಕಾಂಕ್ರೀಟ್‌ ರಸ್ತೆಗೆ 5.91 ಲಕ್ಷ ರೂ.ಮಂಜೂರಾಗಿದೆ.

151 ಕುಟುಂಬ ವಾಸ
ಗಿರಿಶೃಂಗದ ನಡುವೆ ನೆಲೆಸಿರುವ ಊರಿನ ಸೊಬಗು ಸ್ವರ್ಗದಂತಿದೆ. ಎಳನೀರು, ಬಂಗಾರಪಲ್ಕೆ,
ಬಡಾವಣೆ, ಗುತ್ಯಡ್ಕ, ತಿಮ್ಮಯ್ಯ ಕಂಡವನ್ನು ಒಳಗೊಂಡಿರುವ ಪ್ರದೇಶದಲ್ಲಿ 151 ಕುಟುಂಬಗಳು ವಾಸಿಸುತ್ತಿವೆ. ಸುಮಾರು 500ಕ್ಕೂ ಹೆಚ್ಚು ಜನಸಂಖ್ಯೆ ಇರುವ ಎಳನೀರಲ್ಲಿ 463 ಮತದಾರರಿದ್ದಾರೆ. 130 ಒಕ್ಕಲಿಗ ಸಮುದಾಯ, 25 ಮಲೆಕುಡಿಯ ಹಾಗೂ 25 ಜೈನ್‌ ಸಮುದಾಯ ಸಹಿತ ಇತರ ಸಮುದಾಯ ನೆಲೆಸಿರುವ ಪ್ರದೇಶ ಹಲವು ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ.

ಅಂಕಿಅಂಶ
· ಮಲವಂತಿಗೆ ಗ್ರಾ.ಪಂ. ವಿಸ್ತೀರ್ಣ
-6,539.82 ಹೆಕ್ಟೇರ್‌.
· ಗ್ರಾಮದಲ್ಲಿನ ಕುಟುಂಬ- 620, ಜನಸಂಖ್ಯೆ 3,550.
· ಎಳನೀರು ಗ್ರಾಮದ ಜನಸಂಖ್ಯೆ-550, 463 ಮತದಾರರು, 151 ಕುಟುಂಬ.
· ಕೃಷಿ ಭೂಮಿ-340 ಎಕ್ರೆ
· ಸಾಮಾನ್ಯ ಬೆಳೆ- ಭತ್ತ, ವಾಣಿಜ್ಯ ಬೆಳೆಗಳಾದ
ಕಾಫಿ, ಅಡಿಕೆ, ತೆಂಗು, ರಬ್ಬರ್‌.
· ಕಿ.ಪ್ರಾ. ಶಾಲೆ-3, ಖಾಸಗಿ ಹಿ.ಪ್ರಾ.ಶಾಲೆ-1
· ಅಂಗನವಾಡಿ ಕೇಂದ್ರ-3
· ಪ್ರವಾಸಿ ತಾಣ-ಕಡವುಗುಂಡಿ ಜಲಪಾತ
· ಅಭಿವೃದ್ಧಿಗೆ ಸಿಕ್ಕ ಅನುದಾನ-ಒಟ್ಟು
6 ಕೋಟಿ 30 ಲಕ್ಷ ರೂ.

ಅಭಿವೃದ್ಧಿ ಆಗಬೇಕಿರುವ ರಸ್ತೆ
· ಗಡಿಯಿಂದ ಬಂಗಾರಪಲ್ಕೆ ಮಲೆಕುಡಿಯ ಕಾಲನಿ ರಸ್ತೆ.
· ಗಡಿಯಿಂದ
ಎಳನೀರು ರಸ್ತೆ.
· ಗಡಿಯಿಂದ
ಗುತ್ಯಡ್ಕ ಶಾಲೆ ರಸ್ತೆ.
· ಗಡಿಯಿಂದ
ಕುರೆಕಲ್‌ ರಸ್ತೆ.
· ಎಳನೀರು ಬ್ರಹ್ಮ ದೇವರ ಮನೆ ಕಾಲುಸಂಕ.
· 5 ಮೋರಿ ಕಾಮಗಾರಿ.

60 ಮನೆಗಳಿಗಿಲ್ಲ ವಿದ್ಯುತ್‌
ಎಳನೀರು ಪ್ರದೇಶ ವಿದ್ಯುತ್ತನ್ನೇ ಕಂಡಿಲ್ಲ. ಅರಣ್ಯ ಹಕ್ಕು ಕಾಯ್ದೆ ಇದಕ್ಕೆ ಅಡ್ಡಿ ತರುತ್ತಿದೆ. ಅರಣ್ಯ ಹಕ್ಕು ಕಾಯ್ದೆಯ ಚಾಪ್ಟರ್‌ 2ರಲ್ಲಿ ಸೆಕ್ಷನ್‌ 2ಎ ಯಲ್ಲಿ ಕೇಂದ್ರ ಸರಕಾರದ 13 ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ಕಾನೂನನ್ನು ಮುಂದಿಟ್ಟು ತಡೆಯೊಡ್ಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಆದರೂ ಬಂಗಾರಪಲ್ಕೆ-ಎಳನೀರಿನ 60ಕ್ಕೂ ಹೆಚ್ಚು ಮನೆಗಳು ವಿದ್ಯುತ್‌ ಕಂಡಿಲ್ಲ.

 ಅಭಿವೃದ್ಧಿಗೆ ಅನುದಾನ
ಎಳನೀರು ಪ್ರದೇಶ ಅಭಿವೃದ್ಧಿ ವಿಚಾರವಾಗಿ ಈ ಮೊದಲ ಭರವಸೆ ನೀಡಿದಂತೆ ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಲವು ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ಲಾರಿ ಹೋಗುವಷ್ಟು ಸಾಮರ್ಥ್ಯದ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.
– ಹರೀಶ್‌ ಪೂಂಜ, ಶಾಸಕರು

–  ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.