ತಂಬಾಕು ಮುಕ್ತ ಜಿಲ್ಲೆ; ದ.ಕ.ದ ಎಲ್ಲ ತಾಲೂಕುಗಳಲ್ಲಿ ವಿಶೇಷ ತಂಡ ರಚನೆ

ತಂಬಾಕು ನಿಯಂತ್ರಣ ಕಾಯ್ದೆ; ಕಟ್ಟುನಿಟ್ಟಾಗಿ ಜಾರಿಗೆ ಕ್ರಮ

Team Udayavani, Dec 15, 2019, 5:21 AM IST

zx-17

ಮಹಾನಗರ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ತಂಡಗಳನ್ನು ರಚನೆ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ.

ಹೆಚ್ಚಾಗಿ ತಂಬಾಕು ಬಳಕೆ ಮಾಡುವ ಪೆಟ್ಟಿ ಅಂಗಡಿ, ವೈನ್‌ಶಾಪ್‌ ಸಹಿತ ಮತ್ತಿತರ ಪ್ರದೇಶಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು ಇಟ್ಟಿದ್ದು, ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸುವ ಪಣ ತೊಟ್ಟಿದೆ. ಈವರೆಗೆ ಜಿಲ್ಲಾ ಮಟ್ಟದಲ್ಲಿ ನಗರ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಕಾರ್ಯಾಚರಣೆ ನಡೆಯುತ್ತಿತ್ತು. ಇದೀಗ ತಾ| ಮಟ್ಟಕ್ಕೆ ವಿಸ್ತರಣೆ ಮಾಡಲಾಗಿದೆ.

ತಾ| ಮಟ್ಟದಲ್ಲಿ ಒಟ್ಟು 12-15 ಮಂದಿಯ ತಂಡ ರಚನೆಯಾಗಲಿದ್ದು, ಇದರಲ್ಲಿ ತಹಶೀಲ್ದಾರ್‌, ಉಪ ತಹಶೀಲ್ದಾರ್‌, ಕಂದಾಯಾಧಿಕಾರಿ, ತಾಲೂಕು ಮಟ್ಟದ ಆರೋಗ್ಯಾಧಿಕಾರಿ, ಆಡಳಿತ ವೈದ್ಯಾಧಿಕಾರಿ, ಶಿಕ್ಷಣಾಧಿಕಾರಿ, ಪೊಲೀಸ್‌ ಅಧಿಕಾರಿ ಒಳಗೊಂಡಿರುತ್ತಾರೆ. ಜಿಲ್ಲೆಯ ಕೆಲವೊಂದು ಹಳ್ಳಿ ಪ್ರದೇಶಗಳಲ್ಲಿ ಇನ್ನೂ, ಅನಧಿಕೃತವಾಗಿ ತಂಬಾಕು ಮಾರಾಟ ನಡೆಯುತ್ತಿದೆ. ಅಲ್ಲದೆ, ಹಳ್ಳಿಗಳಲ್ಲಿನ ಶಾಲೆಗಳ 100 ಗಜ ಅಂತರದಲ್ಲೇ ಬೀಡಿ, ಸಿಗರೇಟ್‌ನಂತ ಅಮಲು ಪದಾರ್ಥಗಳು ಸಿಗುತ್ತವೆೆ.

ಶಿಕ್ಷೆ ಪ್ರಮಾಣ ಹೇಗಿದೆ?
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಎಚ್ಚರಿಕೆಯ ಫಲಕ ಇಲ್ಲದಿರುವುದು ಅಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಲೈಟರ್‌, ಬೆಂಕಿ ಕಡ್ಡಿ ಪೊಟ್ಟಣ ಇಟ್ಟರೆ 200 ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ತಂಬಾಕು ಬ್ರಾಂಡ್‌ ಹೆಸರಿನೊಂದಿಗೆ ಜಾಹೀರಾತು ಫಲಕ, ಯಾವುದೇ ರೂಪ ದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮೊದಲ ಅಪರಾಧಕ್ಕೆ 1,000 ರೂ. ದಂಡ ಅಥವಾ 2 ವರ್ಷ ಜೈಲು ಶಿಕ್ಷೆ ಅಥವಾ ಈ ಎರಡೂ ಶಿಕ್ಷೆ ವಿಧಿಸಬ ಹುದು. ಪದೇ ಪದೇ ಅಪರಾಧ ಎಸಗಿ ದರೆ 5,000 ರೂ. ದಂಡ ಅಥವಾ 5 ವರ್ಷ ಜೈಲು ಶಿಕ್ಷೆ ನೀಡಬಹುದು. 18 ವರ್ಷ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೂಚನ ಫಲಕ ಹಾಕದಿ ರುವುದು, ತಂಬಾಕು ಉತ್ಪನ್ನಗಳ ಪ್ರದರ್ಶನಕ್ಕೆ 200 ರೂ. ದಂಡ ವಿಧಿಸಬ ಹುದು. ತಂಬಾಕು ಉತ್ಪನ್ನ ಪ್ಯಾಕ್‌ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಇರದಿರುವುದು, ಎಚ್ಚರಿಕೆ ಚಿತ್ರ  ಗಳು ಶೇ.85ಕ್ಕಿಂತ ಕಡಿಮೆ ಅಳತೆಯ ಲ್ಲಿರು ವುದು, ಹಳೆಯ ಎಚ್ಚರಿಕೆ ಚಿತ್ರ ಹಾಕಿ ದ್ದರೆ ತಯಾರಕರಿಗೆ ಮೊದಲನೇ ಅಪರಾ ಧಕ್ಕೆ 2 ವರ್ಷ ಶಿಕ್ಷೆ ಅಥವಾ 5,000 ರೂ. ದಂಡ, ಎರಡನೇ ಅಪರಾಧಕ್ಕೆ 5 ವರ್ಷ ಶಿಕ್ಷೆ ಅಥವಾ 5.000ರೂ. ದಂಡ ವಿಧಿಸ ಬ ಹುದು. ಚಿಲ್ಲರೆ ವ್ಯಾಪಾರಿಗಳಿಗೆ ಮೊದಲ ಅಪ ರಾಧಕ್ಕೆ 1 ವರ್ಷ ಶಿಕ್ಷೆ ಅಥವಾ 1,000 ರೂ. ದಂಡ, ಎರಡನೇ ಅಪರಾಧಕ್ಕೆ 2 ವರ್ಷ ಶಿಕ್ಷೆ ಅಥವಾ 3,000 ರೂ. ದಂಡ ವಿಧಿ ಸಲು ಕಾನೂನಿ ನಲ್ಲಿ ಅವಕಾಶವಿದೆ.

ತಂಬಾಕು ನಿಯಂತ್ರಣ ಕಾರ್ನರ್‌
ಎಲ್ಲ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ತಂಬಾಕು ಸೇವನೆ ನಿಷೇಧ ಎಂಬ ನಿಯಮವಿದೆ. ಶೇ.98.36ರಷ್ಟು ಶಾಲೆ ಮತ್ತು ಶೇ.97.5ರಷ್ಟು ಕಾಲೇಜುಗಳಲ್ಲಿ ನೋ ಸ್ಮೋಕಿಂಗ್‌ ವಲಯ ಮಾಡಲಾಗಿದೆ. ತಂಬಾಕು ನಿಯಂತ್ರಣ ಘಟಕವು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಕಾರ್ನರ್‌ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ವಿನೂತನವಾಗಿ ಡಿಸೈನ್‌ ಮಾಡಲಾದ ತಂಬಾಕು ಸೇವನೆ ಪರಿಣಾಮಗಳ ಕುರಿತು ಕಿರುಚಿತ್ರಗಳನ್ನು ತೋರಿಸುವುದು, ಜಾಗೃತಿ ಮೂಡಿಸುವುದು

ಈ ಕಾರ್ನರ್‌ ಉದ್ದೇಶ. ಅನಧಿಕೃತ ತಂಬಾಕು ಮಾರಾಟ ತಡೆಗೆ ಕ್ರಮ ದಕ್ಷಿಣ ಕನ್ನಡ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪ್ರತೀ ತಾಲೂಕು ಮಟ್ಟದಲ್ಲಿ ಅನಧಿಕೃತ ತಂಬಾಕು ಮಾರಾಟ ತಡೆಯುವ ನಿಟ್ಟಿನಲ್ಲಿ ಕಾರ್ಯಾಚರಣೆಗೆ ತಂಡ ರಚಿಸಲಾಗುವುದು. ಇದೇ ತಿಂಗಳು ತರಬೇತಿ ಬಳಿಕ, ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುವುದು.
 - ಸಿಂಧೂ ಬಿ. ರೂಪೇಶ್‌, ಜಿಲ್ಲಾಧಿಕಾರಿ

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.