ನಮ್ಮತನಕ್ಕೆ ಆದ್ಯತೆ, ಬಳಿಕ ಹೊಂದಾಣಿಕೆ: ಕೃಷ್ಣಾಪುರ ಶ್ರೀ


Team Udayavani, Dec 15, 2019, 3:50 AM IST

zx-38

ಉಡುಪಿ: ಇತರರೊಂದಿಗೆ ಹೊಂದಾಣಿಕೆ ಮಾಡುವಾಗ ನಮ್ಮತನ, ನಮ್ಮ ವೈಶಿಷ್ಟéಗಳನ್ನು ಬಿಡಬಾರದು ಎಂದು ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಕಿವಿಮಾತು ನುಡಿದರು. ಅವರು ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಸಮ್ಮೇಳನದ ಧಾರ್ಮಿಕ ಸಮಾವೇಶದಲ್ಲಿ ಆಶೀರ್ವಚನ ನೀಡಿದರು. ಬೇರೆಡೆಗಳಲ್ಲಿ ಶ್ರಾವಣ ಮಾಸದಲ್ಲಿ ಅಷ್ಟಮಿ ಆಚರಣೆ ನಡೆದರೆ ಉಡುಪಿಯಲ್ಲಿ ಮಾತ್ರ ಲಾಗಾಯ್ತಿನಿಂದಲೂ ಸಿಂಹ ಮಾಸದ ಅಷ್ಟಮಿ ಆಚರಣೆ ನಡೆಯುತ್ತಿದೆ. ಇಂತಹ ವೈಶಿಷ್ಟ್ಯಗಳನ್ನು ಉಳಿಸಿಕೊಂಡು ಬರಬೇಕು. ಇದು ಇತರ ಧಾರ್ಮಿಕ ಆಚರಣೆಗಳಿಗೂ ಅನ್ವಯ ಎಂದರು.

ದೇವಾಲಯಗಳಲ್ಲಿ ಶುದ್ಧಾಚಾರಗಳಿದ್ದರೆ ಮಾತ್ರ ಅದರ ಪ್ರಯೋಜನ ಸಮಗ್ರ ಸಮಾಜಕ್ಕೆ ಸಿಗುತ್ತದೆ. ವಾಸ್ತುವಿನಿಂದ ಹಿಡಿದು, ಅಷ್ಟಬಂಧ, ಬ್ರಹ್ಮಕಲಶ, ನಿತ್ಯ ಪೂಜೆಯವರೆಗೆ ಪರಿಶುದ್ಧತೆಗೆ ಆದ್ಯತೆ ಕೊಡಬೇಕು. ಇದಕ್ಕೆ ಆಡಳಿತ ಮಂಡಳಿ ಮತ್ತು ಅರ್ಚಕರು ಪೂರಕವಾಗಿ ವರ್ತಿಸಬೇಕು. ಕೈಕಾಲು ತೊಳೆದುಕೊಂಡು ಪರಿಶುದ್ಧರಾಗಿ ದೇವಸ್ಥಾನಕ್ಕೆ ಹೋಗುವ ಪರಿಪಾಠ ಬೇಕು ಎಂದು ಸಂಸ್ಕೃತ ಕಾಲೇಜಿನ ಪ್ರಾಧ್ಯಾಪಕ ಡಾ| ಶಿವಪ್ರಸಾದ ತಂತ್ರಿ ಹೇಳಿದರು.

ಜಾತಕ ನೋಡುವಾಗ ಕೇವಲ ಕೂಟತಾರಾವಳಿಯನ್ನು ಮಾತ್ರ ನೋಡಿ ನಿರ್ಣಯಕ್ಕೆ ಬರಬಾರದು. ಉದಾಹರಣೆಗೆ ಮೂಲ ನಕ್ಷತ್ರ ಎಂದಾಕ್ಷಣವೇ ತಿರಸ್ಕರಿಸಬಾರದು, ಶಾಸ್ತ್ರದಲ್ಲಿ ಸಾಕಷ್ಟು ವಿಮರ್ಶೆಗೆ ಅವಕಾಶಗಳಿವೆ ಎಂದು ಡಾ| ತಂತ್ರಿ ಹೇಳಿದರು.

ಶಾಸ್ತ್ರಾಧ್ಯಯನದೊಂದಿಗೆ ಶಿವಳ್ಳಿ ಸಂಪ್ರದಾಯದ ಆಚಾರ ವಿಚಾರ ತಿಳಿಯಬೇಕು. ಕನಿಷ್ಠ ಗಾಯತ್ರಿ, ಪುರುಷಸೂಕ್ತಾದಿ ಸೂಕ್ತಗಳು, ಅಗ್ನಿಕಾರ್ಯ, ವಿಷ್ಣುಸಹಸ್ರನಾಮಾದಿ ಸ್ತೋತ್ರಗಳನ್ನು ತಿಳಿದಿರಬೇಕು ಎಂದು ಅವಧಾನಿ ಗುಂಡಿಬೈಲು ಸುಬ್ರಹ್ಮಣ್ಯ ಭಟ್‌ ತಿಳಿಸಿದರು.

ಬ್ರಾಹ್ಮಣರನ್ನು ನೋಡಿ ಇತರರು ಧರ್ಮಾಚರಣೆ ಮಾಡುತ್ತಾರೆ ಎಂದು ಶಾಸ್ತ್ರಗಳಲ್ಲಿರುವುದರಿಂದ ಬ್ರಾಹ್ಮಣರು ಗರಿಷ್ಠವಾಗಿ ಧರ್ಮಾಚರಣೆ ನಡೆಸಬೇಕು ಎಂದು ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಪ್ರೊ| ಸತ್ಯನಾರಾಯಣ ಆಚಾರ್ಯ ಕರೆ ನೀಡಿದರು.

ಹರಿಕೃಷ್ಣ ಪುನರೂರು, ಶ್ರೀಪತಿ ಉಪಾಧ್ಯಾಯ ಕುಂಭಾಶಿ, ರಾಮದಾಸ ಭಟ್‌ ವಿಷಯ ಮಂಡಿಸಿದರು. ಬಕ್ರೆ ವಾಸುದೇವ ಭಟ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.