ಬೆಲೆ ಕುಸಿತಕ್ಕೆ ಕಂಗೆಟ್ಟ ಅನ್ನ ದಾತರು


Team Udayavani, Dec 15, 2019, 2:56 PM IST

rc-tdy-1

ಮುದಗಲ್ಲ: ಸಿರಿಧಾನ್ಯಗಳಲ್ಲೊಂದಾದ ಸಜ್ಜೆ ಧಾರಣೆ ಕ್ರಮೇಣ ಇಳಿಮುಖವಾಗುತ್ತಿದ್ದು ಸಜ್ಜೆ ಬೆಳೆದ ಈ ಭಾಗದ ರೈತರಲ್ಲಿ ಆತಂಕ ಮನೆ ಮಾಡಿದೆ.

ಪ್ರಸಕ್ತ ವರ್ಷ ಮುಂಗಾರು ಮಳೆ ವಿಳಂಬದ ನಡುವೆಯೂ ಸಜ್ಜೆ ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬಂದಿದೆ. ಕಟಾವು ಹಂತದಲ್ಲಿ ಒಂದೂವರೆ ತಿಂಗಳು ಕಾಡಿದ ಮಳೆಯಿಂದಾಗಿ ಅಲ್ಲಲ್ಲಿ ಸಜ್ಜೆ ತೆನೆ ತೋಯ್ದು ಅಲ್ಪಸ್ವಲ್ಪ ಕಪ್ಪು ಬಣ್ಣಕ್ಕೆ ತಿರುಗಿದ್ದು ಬಿಟ್ಟರೆಉಳಿದಂತೆ ಸಜ್ಜೆ ಫಸಲು ಉತ್ತಮವಾಗಿದೆ. ಜುಲೈ-ಆಗಸ್ಟ್‌ ತಿಂಗಳಲ್ಲಿ ಎಪಿಎಂಸಿಯಲ್ಲಿ ಸಜ್ಜೆ ಪ್ರತಿ ಕ್ವಿಂಟಲ್‌ಗೆ 2,400ರೂ.ವರೆಗೂ ದರವಿತ್ತು. ಈಗ ಮಾರುಕಟ್ಟೆಗೆ ಬೆಳೆ ಆಗಮನವಾಗುತ್ತಿದ್ದಂತೆ ಬೆಲೆ ಕುಸಿತ ಕಾಣುತ್ತಿದ್ದು ಪ್ರತಿ ಕ್ವಿಂಟಲ್‌ಗೆ 1600ರಿಂದ 1700ರೂ.ವರೆಗೆ ಮಾರಾಟವಾಗುತ್ತಿದೆ ಎಂದು ಸಜ್ಜೆ ಬೆಳೆದ ರೈತರಾದ ಶಂಕ್ರಪ್ಪ ದೇಸಾಯಿ ಭೋಗಾಪುರ, ಮಲ್ಲಪ್ಪ ಹಡಗಲಿ, ಲಿಂಬೆಪ್ಪ ಹಡಗಲಿ ತಾಂಡಾ ಪತ್ರಿಕೆಗೆ ತಿಳಿಸಿದ್ದಾರೆ.

ಸಜ್ಜೆ ಬೆಳೆ ರೈತರಿಗೆ ಲಾಭಾದಾಯಕ ಅಲ್ಲದಿದ್ದರೂ ರಾಸುಗಳಿಗೆ ಮೇವು ದೊರೆಯುತ್ತದೆ. ಅಲ್ಲದೇ ಕಡಿಮೆ ಖರ್ಚಿನ ಬೆಳೆಯಾಗಿದ್ದರಿಂದ ಈ ಬಾರಿ ಮುದಗಲ್ಲ ಭಾಗದ ರೈತರು ಹೆಚ್ಚಾಗಿ ಸಜ್ಜೆ ಬೆಳೆದಿದ್ದಾರೆ.

ಬೆಳೆ ಪ್ರದೇಶ: ಕೃಷಿ ಇಲಾಖೆ ಮಾಹಿತಿ ಪ್ರಕಾರ ಲಿಂಗಸುಗೂರ ತಾಲೂಕಿನಲ್ಲಿ 41,805 ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಗುರಿ ಹೊಂದಲಾಗಿತ್ತು. ಇದರಲ್ಲಿ ಸಜ್ಜೆ 19,416 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದ್ದರೆ, ತೊಗರಿ 17,772 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾಂತೇಶ ಹವಾಲ್ದಾರ ಪತ್ರಿಕೆಗೆ ತಿಳಿಸಿದ್ದಾರೆ.

ಪ್ರತಿದಿನ ಮುದಗಲ್ಲ ಎಪಿಎಂಸಿಗೆ 300ರಿಂದ500 ಚೀಲ ಸಜ್ಜೆ ಆವಕವಾಗುತ್ತಿದೆ. ಪ್ರತಿದಿನ ಮಾರುಕಟ್ಟೆಯಲ್ಲಿ ಸಜ್ಜೆ ಆವಕ ಹೆಚ್ಚಳವಾಗುತ್ತಿದ್ದಂತೆ ಮಾರುಕಟ್ಟೆಯಲ್ಲಿ ಸಜ್ಜೆ ಧಾರಣೆ ಕುಸಿಯುತ್ತಿದೆ. ಧಾರಣೆ ಗಮನಿಸುತ್ತಿರುವ ರೈತರು ಮುಂದೆ ಇದಕ್ಕಿಂತ ಕಡಿಮೆ ಬೆಲೆಗೆ ಕುಸಿದರೆ ಹೇಗೆಂದು ಈಗಲೇ ನಾ ಮುಂದೆ ತಾ ಮುಂದೆ ಎಂದು ಸಜ್ಜೆ ಮಾರಾಟದಲ್ಲಿ ತೊಡಗಿದ್ದಾರೆ.

 

ದೇವಪ್ಪ ರಾಠೊಡ

ಟಾಪ್ ನ್ಯೂಸ್

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

1——dsadsad

UAE ಗೋಲ್ಡನ್‌ ವೀಸಾ : ಅಬುಧಾಬಿ ಮಂದಿರಕ್ಕೆ ರಜನಿಕಾಂತ್‌ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.