ತೆರಿಗೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Dec 15, 2019, 4:24 PM IST
ರಾಣಿಬೆನ್ನೂರ: ಸಹಕಾರಿ ಕ್ಷೇತ್ರದ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್ -ಜಿಎಸ್ಟಿ ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಟೇಟ್ ಕೋ-ಆಪ್ ಸೊಸೈಟೀಸ್ ಅಸೋಸಿಯೇಷನ್ ನೇತೃತ್ವದಲ್ಲಿ ಸಹಕಾರಿ ಸಂಸ್ಥೆಗಳ ಪದಾಧಿ ಕಾರಿಗಳು-ಸಿಬ್ಬಂದಿ ನಗರದಲ್ಲಿ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್ ಮಂಜುನಾಥ ಹಾದಿಮನಿ
ಅವರಿಗೆ ಮನವಿ ಸಲ್ಲಿಸಿದರು. ಲ್ಲಿನ ಚನ್ನೇಶ ಪತ್ತಿನ ಸಹಕಾರಿ ಸಂಘದ ಬಳಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮಿನಿ ವಿಧಾನಸೌಧಕ್ಕೆ ಬಂದು ಸೇರಿದರು. ದಾರಿಯುದ್ದಕ್ಕೂ ಪ್ತ ಭಟನಾಕಾರರು ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಘೋಷಣೆ ಕೂಗಿದರು. ನಂತರ ಉಪ ತಹಶೀಲ್ದಾರ್ ಮಂಜುನಾಥ ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು.
ರತ್ನಾಕರ ಕುಂದಾಪುರ ಮಾತನಾಡಿ, ಸಹಕಾರಿ ಕ್ಷೇತ್ರ ಉಳಿಸಿ-ಬೆಳೆಸುವ ದೃಷ್ಟಿಯಿಂದ ಸಹಕಾರಿ ಕ್ಷೇತ್ರದ ಮೇಲೆ ವಿಧಿ ಸಿರುವ ಆದಾಯ ತೆರಿಗೆ, ಟಿಡಿಎಸ್-ಜಿಎಸ್ಟಿ ಕೂಡಲೇ ರದ್ದುಪಡಿಸಬೇಕು. ಪ್ರಧಾನ ಮಂತ್ರಿಗಳು ಹಾಗೂ ಹಣಕಾಸು
ಚಿವರು ಸಮಸ್ಯೆ ಅರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಕೆ.ಶಿವಲಿಂಗಪ್ಪ, ಕೆ.ವಿ. ಶ್ರೀನಿವಾಸ,
ಬಸವರಾಜ ರ, ಕೆ.ಎನ್. ಪಾಟೀಲ, ವೀರೇಶ ಕೋರಿ, ಕೃಷ್ಣಮೂರ್ತಿ ಸುಣಗಾರ, ಬಿ.ಐ. ಪಾಟೀಲ, ನಾಗಭೂಷಣ ನಿಡಗುಂದಿ, ಮಂಜುನಾಥ ಬಾಳಿಕಾಯಿ, ಪ್ರಶಾಂತ ನಿಡಗುಂದಿ, ಉಮೇಶ ಪಟ್ಟಣಶೆಟ್ಟಿ, ವೀರೇಶ, ಪ್ರವೀಣ ಸುರಹೊನ್ನೆ, ಜಯದೇವ ಸೊಪ್ಪಿನ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ