ಭಾರತ-ವೆಸ್ಟ್ ಇಂಡೀಸ್ ಏಕದಿನ: ಅಯ್ಯರ್, ಪಂತ್ ಹೋರಾಟ ; ವೆಸ್ಟ್ ಇಂಡೀಸ್ ಗೆಲುವಿಗೆ 288 ಗುರಿ

ಸ್ಲ್ಯಾಗ್ ಓವರ್ ಗಳಲ್ಲಿ ಸಿಡಿದ ಜಾಧವ್ – ಜಡೇಜಾ

Team Udayavani, Dec 15, 2019, 5:42 PM IST

One-Day-Match-730

ಚೆನ್ನೈ: ಇಲ್ಲಿನ ಚಿಪಾಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಪ್ರಥಮ ಏಕದಿನ ಮುಖಾಮುಖಿಯಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡದ ಗೆಲುವಿಗೆ 288 ರನ್ ಗುರಿ ನಿಗದಿಯಾಗಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ತಂಡಕ್ಕೆ ಯುವ ಬ್ಯಾಟ್ಸ್ ಮನ್ ಗಳಾದ ಶ್ರೇಯಸ್ ಅಯ್ಯರ್ (70), ವಿಕೆಟ್ ಕೀಪರ್ ರಿಷಭ್ ಪಂತ್ (71) ಮತ್ತು ಕೇಧಾರ್ ಜಾಧವ್ (40) ಅವರು ಆಸರೆಯಾದರು. ಇವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 50 ಓವರುಗಳಲ್ಲಿ 07 ವಿಕೆಟ್ ಗಳ ನಷ್ಟಕ್ಕೆ 287 ರನ್ ಗಳನ್ನು ಕಲೆಹಾಕಿತು.

ಭಾರತದ ಆರಂಭ ನಿರಾಶಾದಾಯಕವಾಗಿತ್ತು. ತಂಡದ ಮೊತ್ತ ಕೇವಲ 21 ರನ್ ಗಳಾಗುವಷ್ಟರಲ್ಲಿ ಕೆ.ಎಲ್. ರಾಹುಲ್ (06) ಅವರು ಕಾಟ್ರೆಲ್ ಬೌಲಿಂಗ್ ನಲ್ಲಿ ಔಟಾದರು. ಇದರ ಬೆನ್ನಲ್ಲೇ ಕೇವಲ ನಾಲ್ಕು ರನ್ ಗಳಿಸಿ ವಿರಾಟ್ ಕೊಹ್ಲಿ ಕೂಡಾ ಪೆವಿಲಿಯನ್ ಸೇರಿದ್ದು ಟೀಂ ಇಂಡಿಯಾದ ಬ್ಯಾಟಿಂಗ್ ಸಂಕಟವನ್ನು ಹೆಚ್ಚಿಸಿತು. ಆದರೆ ಈ ಹಂತದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾ (36) ಅವರಿಗೆ ಜೊತೆಯಾದ ಶ್ರೇಯಸ್ ಅಯ್ಯರ್ (70) ಎಚ್ಚರಿಕೆಯ ಆಟಕ್ಕೆ ತೊಡಗಿದರು. ಈ ಜೋಡಿ ಮೂರನೇ ವಿಕೆಟಿಗೆ ಅಮೂಲ್ಯ 55 ರನ್ ಗಳ ಜೊತೆಯಾಟ ನೀಡಿದರು. ಈ ಹಂತದಲ್ಲಿ 36 ರನ್ ಗಳಿಸಿದ್ದ ಶರ್ಮಾ ಜೋಸೆಫ್ ಬೌಲಿಂಗ್ ನಲ್ಲಿ ಔಟಾದರು.

ನಾಲ್ಕನೇ ವಿಕೆಟಿಗೆ ಬ್ಯಾಟ್ ಹಿಡಿದು ಬಂದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಅಯ್ಯರ್ ಜೊತೆ ಸೇರಿಕೊಂಡು ತಂಡದ ಮೊತ್ತವನ್ನು ಹೆಚ್ಚಿಸುತ್ತಾ ಸಾಗಿದರು. ವೆಸ್ಟ್ ಇಂಡೀಸ್ ಬೌಲರ್ ಗಳನ್ನು ದಿಟ್ಟವಾಗಿ ಎದುರಿಸಿದ ಈ ಯುವ ಜೋಡಿ ನಾಲ್ಕನೇ ವಿಕೆಟಿಗೆ ಅತ್ಯಮೂಲ್ಯ 114 ರನ್ ಭಾಗೀದಾರಿಕೆ ನೀಡಿದರು. ವೇಗದ ಆಟವಾಡಿದ ಪಂತ್ 69 ಎಸೆತೆಗಳಲ್ಲಿ 01 ಸಿಕ್ಸರ್ ಹಾಗೂ 07 ಬೌಂಡರಿ ನೆರವಿನಿಂದ 71 ರನ್ ಬಾರಿಸಿದರೆ ಶ್ರೇಯಸ್ ಅಯ್ಯರ್ ಅವರು 88 ಎಸೆತೆಗಳಲ್ಲಿ 70 ರನ್ ಬಾರಿಸಿದರು. ಇದರಲ್ಲಿ 05 ಬೌಂಡರಿ ಹಾಗೂ 01 ಸಿಕ್ಸರ್ ಒಳಗೊಂಡಿತ್ತು.

ಶ್ರೇಯಸ್ ಐಯರ್ ವಿಕೆಟ್ ಬಿದ್ದ ಮೇಲೆ ಕ್ರೀಸಿಗೆ ಆಗಮಿಸಿದ ಇನ್ನೋರ್ವ ಯುವ ಬ್ಯಾಟ್ಸ್ ಮನ್ ಕೇದಾರ್ ಜಾಧವ್ (40) ಅವರು ಸ್ಲ್ಯಾಗ್ ಓವರ್ ನಲ್ಲಿ ಸಿಡಿದು ನಿಂತರು. ಅನುಭವಿ ರವೀಂದ್ರ ಜಡೇಜಾ (21) ಅವರೊಂದಿಗೆ ಸೇರಿಕೊಂಡು 59 ರನ್ ಗಳ ಜೊತೆಯಾಟ ನೀಡಿದರು. ಈ ಜೋಡಿ ಕ್ರೀಸಿನಲ್ಲಿರುವವರೆಗೆ ಭಾರತ 300ರ ಗಡಿ ದಾಟಬಹುದೆಂಬ ನಿರೀಕ್ಷೆ ಇತ್ತು. ಆದರೆ ಜಾಧವ್ ಹಾಗೂ ಜಡೇಜಾ ಒಟ್ಟಿಗೇ ಔಟಾಗುವುದರೊಂದಿಗೆ ಈ ನಿರೀಕ್ಷೆ ಹುಸಿಯಾಯಿತು.

ಶಿಸ್ತಿನ ಬೌಲಿಂಗ್ ಮತ್ತು ಫೀಲ್ಡಿಂಗ್ ಸಂಘಟಿಸಿದ ವೆಸ್ಟ್ ಇಂಡೀಸ್ ಭಾರತದ ಘಟಾನುಘಟಿ ಬ್ಯಾಟ್ಸ್ ಮನ್ ಗಳನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಭಾರತವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವ ಕೆರಿಬಿಯನ್ನರ ಪ್ರಯತ್ನಕ್ಕೆ ಅಡ್ಡಗಾಲಾಗಿದ್ದು ಅಯ್ಯರ್ ಮತ್ತು ಪಂತ್ ಜವಾಬ್ದಾರಿಯುತ ಜೊತೆಯಾಟ.

ಉತ್ತಮ ಬೌಲಿಂಗ್ ದಾಳಿ ಸಂಘಟಿಸಿದ ಶೆಲ್ಡ್ರನ್ ಕಾಟ್ರೆಲ್ 10 ಓವರ್ ಗೆ 46 ರನ್ ನೀಡಿ 2 ವಿಕೆಟ್ ಪಡೆದರು. ಇದರಲ್ಲಿ 3 ಮೇಡೆನ್ ಓವರ್ ಇದ್ದಿದ್ದೂ ವಿಶೆಷ. ಇನ್ನುಳಿದಂತೆ ಕೀಮೋ ಪೌಲ್ ಮತ್ತು ಅಲ್ಜಾರಿ ಜೋಸೆಫ್ ತಲಾ 02 ವಿಕೆಟ್ ಪಡೆದರೆ ಕೈರೆನ್ ಪೊಲಾರ್ಡ್ 01 ವಿಕೆಟ್ ಪಡೆದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.