ಗಂಗೊಳ್ಳಿ ಬಂದರಿನಲ್ಲಿ ತ್ಯಾಜ್ಯ ರಾಶಿ

ಬಂದರು ಪ್ರದೇಶವಿಡೀ ದುರ್ನಾತ ;ಮೀನು ಎಸೆಯದಂತೆ ಸೂಚನೆ

Team Udayavani, Dec 16, 2019, 5:06 AM IST

1512KDPP9A

ವಿಶೇಷ ವರದಿ ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರಿನಲ್ಲಿ ಕೊಳೆತ ಮತ್ತು ನಿರುಪಯುಕ್ತ ಮೀನುಗಳನ್ನು ಹರಾಜು ಪ್ರಾಂಗಣದ ಬಳಿಯೇ ಬಿಟ್ಟು ಹೋಗುತ್ತಿರುವುದರಿಂದ, ಹಾಗೂ ಅಲ್ಲಿ ಬಿದ್ದ ಪ್ಲಾಸ್ಟಿಕ್‌ ಮತ್ತಿತರ ಕಸಗಳನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡದೆ ಇರುವುದರಿಂದ ಬಂದರು ಪ್ರದೇಶಾದ್ಯಂತ ತ್ಯಾಜ್ಯ ರಾಶಿಯೇ ತುಂಬಿ ಕೊಂಡಿದ್ದು, ಬಂದರು ಪ್ರದೇಶ ಗಬ್ಬೆದ್ದು ನಾರುತ್ತಿದೆ.

ಕೊಳಚೆ ನೀರು ಹರಿದು ಹೋಗಲು ನಿರ್ಮಿಸಿದ ಚರಂಡಿಗಳು ತ್ಯಾಜ್ಯಗಳಿಂದ ತುಂಬಿ ತುಳುಕುತ್ತಿವೆ. ಎಸೆದ ಕೊಳೆತ ಮೀನು, ಪ್ಲಾಸ್ಟಿಕ್‌, ನೀರಿನ ಬಾಟಲಿಗಳು ಬಂದರಿನ ಎಲ್ಲೆಡೆ ರಾಶಿ ಬಿದ್ದು ಗಬ್ಬು ವಾಸನೆ ಹರಡಿಕೊಂಡಿದೆ. ಇದರಿಂದ ಬಂದರಿನಲ್ಲಿ ಮೀನುಗಾರರು ಬಹಳ ತೊಂದರೆ ಅನುಭವಿಸುವಂತಾಗಿದೆ.

ಮೀನುಗಾರಿಕಾ ಋತು ಆರಂಭದಿಂದಲೇ ಇಲಾಖೆ ಮೂಲಕ ಪ್ರತಿನಿತ್ಯ ಬಂದರನ್ನು ತೊಳೆದು ಸ್ವತ್ಛಗೊಳಿಸಲಾಗುತ್ತಿತ್ತು. ಕಳೆದ ಕೆಲವು ದಿನಗಳಿಂದ ಶುಚಿತ್ವ ಸರಿಯಾಗಿ ಮಾಡದ ಕಾರಣ ಸಮಸ್ಯೆ ಬಿಗಡಾಯಿಸಿದ್ದು, ಇಡೀ ಬಂದರು ತ್ಯಾಜ್ಯದಿಂದ ತುಂಬಿ ತುಳುಕುತ್ತಿದ್ದರೂ, ಬಂದರು ಸ್ವತ್ಛತೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದ ಬಗ್ಗೆ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಗ ಭೀತಿ
ಬಂದರಿನ ಚರಂಡಿಯಲ್ಲಿ ಕಸ, ಕೊಳೆತ, ನಿರುಪಯುಕ್ತ ಮೀನುಗಳಿರುವುದರಿಂದ, ಅವು ಕೊಳೆತು ರೋಗ ಹರಡುವ ಭೀತಿ ಉಂಟಾಗಿದೆ. ಯಾರು ಟೆಂಡರ್‌ ವಹಿಸಿಕೊಂಡಿದ್ದಾರೋ ಯಾರು ಸ್ವತ್ಛ ಮಾಡಬೇಕೋ ನಮಗೆ ಗೊತ್ತಿಲ್ಲ. ಬಂದರನ್ನು ದಯಮಾಡಿ ಸ್ವತ್ಛ ಮಾಡಿ ಎಂದು ಮೀನುಗಾರ ಮಹಿಳೆಯರು ಒತ್ತಾಯಿಸಿದ್ದಾರೆ.

ಕೊಳೆತ ಮೀನು ಎಸೆಯದಂತೆ ಮನವಿ
ಬಂದರು ಪ್ರದೇಶ ವ್ಯಾಪ್ತಿಯ ಹರಾಜು ಪ್ರಾಂಗಣ, ಜೆಟ್ಟಿ, ಚರಂಡಿಗಳಲ್ಲಿ ಮೀನುಗಾರರು ಕೊಳೆತ, ನಿರುಪಯುಕ್ತ ಮೀನುಗಳನ್ನು ಎಸೆಯುತ್ತಿರುವುದರಿಂದ ಇಲ್ಲಿ ದುರ್ವಾಸನೆ ಬೀರುತ್ತಿದ್ದು, ಈ ಬಗ್ಗೆ ಈ ಹಿಂದೆಯೇ ಮೀನು ಬಿಸಾಡದಂತೆ ಮನವಿ ಮಾಡಲಾಗಿತ್ತು. ಆದರೆ ಕೊಳೆತ, ನಿರುಪಯುಕ್ತ ಮೀನುಗಳನ್ನು ಅಲ್ಲಿಯೇ ಎಸೆಯುತ್ತಿದ್ದಾರೆ. ಮತ್ತೆ ಬಂದರು ವ್ಯಾಪ್ತಿಯಲ್ಲಿ ಮೀನುಗಳನ್ನು ಎಸೆಯದಂತೆ ಮೀನುಗಾರಿಕಾ ಇಲಾಖೆ ಮನವಿ ಮಾಡಿಕೊಂಡಿದೆ.

ಶೀಘ್ರ ಕ್ರಮ
ಮೀನುಗಾರರು ಕೊಳೆತ ಮತ್ತು ನಿರುಪಯುಕ್ತ ಮೀನುಗಳನ್ನು ಹರಾಜು ಪ್ರಾಂಗಣದ ಬಳಿ ಬಿಟ್ಟು ಹೋಗುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಕಳೆದ 5 ದಿನಗಳಿಂದ ಬಂದರನ್ನು ತೊಳೆದು ಸ್ವತ್ಛಗೊಳಿಸಲು ಸಾಧ್ಯವಾಗಿಲ್ಲ. ಸ್ವತ್ಛತೆಯ ನಿರ್ವಹಣೆಗೆ ಗುತ್ತಿಗೆದಾರರು ನಿಗದಿಯಾಗಿದ್ದು, ಶೀಘ್ರ ಸ್ವತ್ಛಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
-ಅಂಜನಾದೇವಿ,
ಸಹಾಯಕ ನಿರ್ದೇಶಕಿ,ಮೀನುಗಾರಿಕಾ ಇಲಾಖೆ,ಗಂಗೊಳ್ಳಿ

ಕೂಡಲೇ ಕ್ರಮ ಕೈಗೊಳ್ಳಲಿ
ಗಂಗೊಳ್ಳಿ ಮೀನುಗಾರಿಕಾ ಬಂದರನ್ನು ಸ್ವತ್ಛ ಮಾಡದೆ 15 ದಿನ ಕಳೆದಿವೆ. ಸ್ವತ್ಛತಾ ಕೆಲಸದ ಟೆಂಡರ್‌ ತೆಗೆದುಕೊಂಡವರು ಕೆಲ ದಿನಗಳಿಂದ ಪತ್ತೆಯೇ ಇಲ್ಲ. ಈ ಬಂದರಿನ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷé ವಹಿಸುತ್ತಿದ್ದಾರೆ. ಜೆಟ್ಟಿ ಕುಸಿದು 1 ವರ್ಷ 2 ತಿಂಗಳು ಕಳೆದರೂ ಇನ್ನೂ ದುರಸ್ತಿ ಕಾರ್ಯ ಮಾತ್ರ ಕೈಗೆತ್ತಿಕೊಂಡಿಲ್ಲ. ಕೇಳಿದರೆ ಹೆಚ್ಚುವರಿ ಅನುದಾನ ಬೇಕು ಅಂತಾರೆ. ಬಂದರಿನ ಸ್ವತ್ಛತೆ ಬಗ್ಗೆ ಗಮನಹರಿಸಿ ಮೀನುಗಾರರ ಆರೋಗ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕು.
-ರಾಮಪ್ಪ ಖಾರ್ವಿ ಗಂಗೊಳ್ಳಿ,
ಮೀನುಗಾರ ಮುಖಂಡರು

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.