ಪಡುಬೆಳ್ಳೆ: ಸೇತುವೆಯ ಸಂಚಾರ ಸಾಮರ್ಥ್ಯ ತಪಾಸಣೆ
Team Udayavani, Dec 16, 2019, 5:34 AM IST
ಶಿರ್ವ: ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಪಾಪನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸುಮಾರು 39 ವರ್ಷ ಹಳೆಯದಾದ ಸೇತುವೆಯ ಸಂಚಾರ ಸಾಮರ್ಥ್ಯದ ತಪಾಸಣೆ ಕಾರ್ಯ ಶುಕ್ರವಾರ ನಡೆಯಿತು.
ಉಡುಪಿ ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್ ಎಂಜಿನಿಯರ್ ಸವಿತಾ ಆರ್.ಅವರ ನಿರ್ದೇಶನದಂತೆ ಬೆಂಗಳೂರಿನ ಗುತ್ತಿಗೆದಾರ ಸೇತುವೆ ತಜ್ಞ ಚೆನ್ನಬಸವೇಶ್ ನೇತೃತ್ವದ ತಂಡದ ಎಂಜಿನಿಯರ್ಗಳಾದ ಮಧು ಮತ್ತು ಅಶ್ವಥ್ ಸಹಾಯಕರೊಂದಿಗೆ ಶಿಥಿಲಗೊಂಡ ಸೇತುವೆಯ ಕಾಂಕ್ರೀಟ್ ಸಾಮರ್ಥಯದ ಬಗ್ಗೆ ಪರಿಶೀಲನೆ ನಡೆಸಿತು.
ಬೆಂಗಳೂರಿನ ತಜ್ಞರ ತಂಡ ತಾಲೂಕಿನ ಮಣಿಪುರ,ಪಡುಬೆಳ್ಳೆ ಹಾಗೂ ಇತರ 2 ಸೇತುವೆಗಳ ಕಾಂಕ್ರೀಟ್ ಸಾಮರ್ಥ್ಯ ಪರಿಶೀಲನೆ ನಡೆಸಿ ಶಿಥಿಲಗೊಂಡ ಸೇತುವೆಯ ಸದ್ಯದ ಪರಿಸ್ಥಿತಿ,ರಿಪೇರಿಯ ಬಗ್ಗೆ ಅಂದಾಜು ವೆಚ್ಚದ ಪಟ್ಟಿ ತಯಾರಿಸಿ ಲೋಕೋಪಯೋಗಿ ಇಲಾಖೆಯ ಮೂಲಕ ಸರಕಾರಕ್ಕೆ ಸಲ್ಲಿಸುವುದಾಗಿದೆ ಎಂದು ತಂಡದ ಮುಖ್ಯಸ್ಥ ಚೆನ್ನಬಸವೇಶ್ ತಿಳಿಸಿದ್ದಾರೆ.
ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
ಮೂಡುಬೆಳ್ಳೆ-ಪಡುಬೆಳ್ಳೆಯನ್ನು ಸಂಪರ್ಕಿಸುವ ಈ ಸೇತುವೆಯ ಅಗಲ ಕಿರಿದಾಗಿದ್ದು, ವಾಹನ ದಟ್ಟಣೆ ಇರುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದರಿಂದ ನೂತನ ಸೇತುವೆ ನಿರ್ಮಿಸಲು ಬೆಳ್ಳೆ ಗ್ರಾ.ಪಂ.ವತಿಯಿಂದ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾ.ಪಂ. ಉಪಾಧ್ಯಕ್ಷ ಹರೀಶ್ ಶೆಟ್ಟಿ ಮತ್ತು ಸದಸ್ಯ ಬೆಳ್ಳೆ ಗುರುರಾಜ್ ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ