ಓಡಬಾೖ ತೂಗುಸೇತುವೆ ನಿರ್ವಹಣೆಗೆ ನಿರ್ಲಕ್ಷ್ಯ

ಪಿಂಡಿ ದೋಣಿ ಪಯಣಕ್ಕೆ ವಿದಾಯ ಹೇಳಿದ್ದ ಬಳ್ಳಿ ಸೇತುವೆ

Team Udayavani, Dec 16, 2019, 5:57 AM IST

1512SLKP13

ಸುಳ್ಯ : ಸುಮಾರು 150ಕ್ಕೂ ಅಧಿಕ ಕುಟುಂಬಗಳ ಪಿಂಡಿ ಪಯಣಕ್ಕೆ ವಿದಾಯ ಹೇಳಿ ಬಳ್ಳಿ ಸೇತುವೆ ಮೂಲಕ ಜನರನ್ನು ಸ್ವಾಗತಿಸಿದ ಸುಳ್ಯ- ದೊಡ್ಡೇರಿ ಸಂಪರ್ಕದ ಓಡಬಾೖ ತೂಗು ಸೇತುವೆ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಪರಿಣಾಮ ಶಿಥಿಲಗೊಳ್ಳುತ್ತಿದೆ.

ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ವಯಂಸೇವಾ ಸಂಸ್ಥೆಯೊಂದರ ಸಹಯೋಗದಲ್ಲಿ 13 ವರ್ಷಗಳ ಹಿಂದೆ ನಿರ್ಮಿಸಿದ್ದ ತಾಲೂಕಿನ ಅತಿ ಎತ್ತರದ ಈ ತೂಗು ಸೇತುವೆಯ ವಾರ್ಷಿಕ ನಿರ್ವಹಣೆ ಬಗ್ಗೆ ನ.ಪಂ. ಗಮನ ಹರಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕರ ವಲಯದಲ್ಲಿ ವ್ಯಕ್ತವಾಗಿದೆ.

ಅಜ್ಜಾವರ ಗ್ರಾಮದ ದೊಡ್ಡೇರಿ ಪ್ರದೇಶದ ಬಸವನಪಾದೆ ಪರಿಸರದ 150 ಮನೆಗಳ ನಿವಾಸಿಗಳಿಗೆ ಮತ್ತು ಆಸುಪಾಸಿನ ಪ್ರದೇಶದವರಿಗೆ ಸುಳ್ಯದಿಂದ ದೊಡ್ಡೇರಿಗೆ ಹಾಗೂ ದೊಡ್ಡೇರಿ-ಸುಳ್ಯ ಸಂಪರ್ಕಕ್ಕೆ ಓಡಬಾೖ ಬಳಿಯ ಪಯಸ್ವಿನಿ ನದಿಯಲ್ಲಿ ಅಪಾಯಕಾರಿ ಪಿಂಡಿ ದೋಣಿ ಸಂಚಾರ ಏಕೈಕ ಮಾರ್ಗವಾಗಿತ್ತು.

ನಿತ್ಯ 40ಕ್ಕೂ ಅಧಿಕ ಮಂದಿಯನ್ನು ಕುಳ್ಳಿರಿಸಿಕೊಂಡು ಹರಿಯುವ ನದಿ ದಾಟಿ ದಡ ಸೇರುವುದೆಂದರೆ ಇಲ್ಲಿನ ನಿವಾಸಿಗಳಿಗೆ ಮರು ಹುಟ್ಟು ಪಡೆದಂತಹ ಅನುಭವವಾಗಿತ್ತು. ಇಲ್ಲೊಂದು ತೂಗು ಸೇತುವೆ ನಿರ್ಮಿಸಬೇಕೆನ್ನುವ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಿದ್ದರೂ ಆಡಳಿತ ವ್ಯವಸ್ಥೆ ತೆಪ್ಪಗೆ ಕುಳಿತ ಪರಿಣಾಮ ಸಮಸ್ಯೆ ಕಗ್ಗಂಟಾಗಿ ಉಳಿದು ತೆಪ್ಪದ ಪಯಣವೇ ಅನಿವಾರ್ಯವಾಗಿತ್ತು.

ತೂಗು ಸೇತುವೆ ಕೊಂಡಿ
ಇಲ್ಲಿನ ಬವಣೆ ಕಂಡು ಡಾ| ಪ್ರಭಾಕರ ಶಿಶಿಲರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸುಳ್ಯ ರೋಟರಿ ಸಂಸ್ಥೆ ತೂಗು ಸೇತುವೆ ನಿರ್ಮಾಣದ ಯೋಜನೆ ಹಾಕಿಕೊಂಡಿತ್ತು. ಅದಕ್ಕಾಗಿ ಶಾಸಕರ ನೇತೃತ್ವದಲ್ಲಿ ತೂಗುಸೇತುವೆ ಅನುಷ್ಠಾನ ಸಮಿತಿ ರಚನೆಯಾಯಿತು. 25 ಲಕ್ಷ ರೂ. ವೆಚ್ಚದ ಈ ಕಾಮಗಾರಿಗೆ ಇನ್ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ 10 ಲಕ್ಷ ರೂ. ನೆರವು ನೀಡುವ ಮೂಲಕ ಸೇತುವೆ ನಿರ್ಮಾಣದ ಕನಸಿಗೆ ಜೀವ ತುಂಬಿದರು. ಡಾ| ವೀರೇಂದ್ರ ಹೆಗ್ಗಡೆ, ದಿ| ಕುರುಂಜಿ ವೆಂಕಟರಮಣ ಗೌಡ, ಜಗನ್ನಾಥ ಶೆಟ್ಟಿ, ಒಡಿಯೂರು, ಸುಬ್ರಹ್ಮಣ್ಯ ಸ್ವಾಮೀಜಿ ಸಹಿತ ಹಲವು ದಾನಿಗಳು ದೇಣಿಗೆ ರೂಪದಲ್ಲಿ ಕೈ ಜೋಡಿಸಿದ್ದರು. ಅಜ್ಜಾವರ ಗ್ರಾ.ಪಂ.ನಿಂದ 25 ಸಾವಿರ ರೂ. ಅನುದಾನ ಸಿಕ್ಕಿತ್ತು.
25 ಲಕ್ಷ ರೂ.

ವೆಚ್ಚ, 140 ಮೀ. ಉದ್ದ
ತೂಗು ಸೇತುವೆ ಸರದಾರ ಗಿರೀಶ್‌ ಭಾರದ್ವಾಜ್‌ ಅವರ ನೇತೃತ್ವದಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಯಿತು. 2006ರಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಕೆಲವರು ಶ್ರಮದಾನ, ವಸ್ತು ರೂಪದಲ್ಲಿ ನೆರವಾಗಿದ್ದರು. ಗಿರೀಶ್‌ ಭಾರದ್ವಾಜ್‌ ಉಚಿತವಾಗಿ ತಮ್ಮ ಶ್ರಮ ಸೇವೆ ನೀಡಿದ್ದರು. 2006ರ ಜು. 6ರಂದುರೋಟರಿ ಇನ್ಫೋಸಿಸ್‌ ಗೋಲ್ಡನ್‌ ಬ್ರಿಡ್ಜ್ ತೂಗುಸೇತುವೆ ಲೋಕಾರ್ಪಣೆಗೊಂಡು ಸಂಚಾರಕ್ಕೆ ಮುಕ್ತವಾಯಿತು.

ನಿರ್ವಹಣೆ ನಿರ್ಲಕ್ಷ್ಯ
ತೂಗು ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾದ ಅನಂತರ ರೋಟರಿ ಸಂಸ್ಥೆ ನಿರ್ವಹಣೆಗೆಂದು ಅಜ್ಜಾವರ ಗ್ರಾ.ಪಂ. ಸುಪರ್ದಿಗೆ ಒಪ್ಪಿಸಿತ್ತು. ಆದರೆ ಗ್ರಾ.ಪಂ. ಆದಾಯದ ಕೊರತೆ ಎದುರಾಗುವ ಕಾರಣದಿಂದ ಸುಳ್ಯ ನ.ಪಂ.ಗೆ ಹಸ್ತಾಂತರಿಸಲು ಮುಂದಾಯಿತು. ಕೊನೆಗೆ ನ.ಪಂ.ಗೆ ಮನವಿ ಮೂಲಕ ಹಸ್ತಾಂತರಿಸಿ ನಿರ್ವಹಣೆ ವಹಿಸಲಾಯಿತು. ಆದರೆ ನ.ಪಂ. ನಿರ್ವಹಣೆ ಕುರಿತು ಗಮನ ಹರಿಸುತ್ತಿಲ್ಲ ಎನ್ನುತ್ತಾರೆ ಸೇತುವೆ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು. ಸೇತುವೆಯ ಎರಡೂ ಬದಿಯಲ್ಲಿ ಸುರಕ್ಷತೆಗೆ ಅಳವಡಿಸಿದ ಬೇಲಿ ಬಲೆ ತುಂಡಾಗಿದೆ. ಬಣ್ಣ ಬಳಿಯದೆ ಕಬ್ಬಿಣ ತುಕ್ಕು ಹಿಡಿದಿದೆ. ಮೆಟ್ಟಿಲು ಸುಸ್ಥಿತಿಯಲ್ಲಿ ಇಲ್ಲ. ಮೆಟ್ಟಿಲಿನ ಕೆಲ ಭಾಗದಲ್ಲಿ ಪೊದೆ, ಕಸ ಕಡ್ಡಿ ತುಂಬಿವೆ. ಹೀಗಾಗಿ, ಸೇತುವೆಗೆ ಮತ್ತಷ್ಟು ಅಪಾಯ ಕಾದಿದೆ.

 ನ.ಪಂ. ನಿರ್ಲಕ್ಷ್ಯ
ನನ್ನ ಅಧ್ಯಕ್ಷತೆ ಅವಧಿಯಲ್ಲಿ ಹಲವರ ಸಹಕಾರದಿಂದ ಈ ತೂಗು ಸೇತುವೆ ನಿರ್ಮಾಣವಾಗಿತ್ತು. ಇದು ಬರೀ ಸಂಚಾರಕ್ಕೆ ಮಾತ್ರವಲ್ಲದೆ ಪ್ರವಾಸಿಗರ ಆಕರ್ಷಣೆಯ ಸ್ಥಳವೂ ಆಗಿತ್ತು. ಆದರೆ ನಿರ್ವಹಣೆ ಕೊರತೆಯಿಂದ ಶಿಥಿಲವಾಗುತ್ತಿದೆ. ಲಕ್ಷಾಂತರ ರೂ. ಆದಾಯ ಇರುವ ನ.ಪಂ. ನಿರ್ವಹಣೆ ಜವಾಬ್ದಾರಿ ಹೊಂದಿದ್ದರೂ ಸ್ಪಂದಿಸುತ್ತಿಲ್ಲ. ಒಂದು ವೇಳೆ ಸಂಪೂರ್ಣ ಹಾಳಾದರೆ ಮರು ನಿರ್ಮಾಣಕ್ಕೆ 45 ಲಕ್ಷ ರೂ.ಗಳಿಗೂ ಹೆಚ್ಚು ಖರ್ಚಾಗುತ್ತದೆ.
– ಡಾ| ಪ್ರಭಾಕರ ಶಿಶಿಲ,
ಸಾಹಿತಿ, ಪರಿಸರ ತಜ್ಞ

 ಪರಿಶೀಲಿಸಲಾಗುವುದು
ಈ ತೂಗು ಸೇತುವೆ ನ.ಪಂ.ಗೆ ಕ್ರಮಬದ್ಧ ರೀತಿಯಲ್ಲಿ ಹಸ್ತಾಂತರ ಆಗಿದೆಯೇ ಎನ್ನುವ ಬಗ್ಗೆ ಪರಿಶೀಲಿಸಲಾಗುವುದು. ಸೇತುವೆ ನಿರ್ಮಾಣ ಸಂಸ್ಥೆಯೊಂದರ ಮೂಲಕ ಖಾಸಗಿ ಎಂಜಿನಿಯರ್‌ ಅವರು ತೂಗು ಸೇತುವೆ ಪರಿಶೀಲಿಸಿ ದುರಸ್ತಿಗೆ 18 ಲಕ್ಷ ರೂ. ವೆಚ್ಚದ ಅಂದಾಜು ಪಟ್ಟಿಯನ್ನು ಸಲ್ಲಿಸಿದ್ದಾರೆ. ಅನುದಾನದ ಲಭ್ಯತೆ, ಹಸ್ತಾಂತರ ಬಗ್ಗೆ ಪರಿಶೀಲಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.
– ಮತ್ತಡಿ,
ಮುಖ್ಯಾಧಿಕಾರಿ, ನ.ಪಂ., ಸುಳ್ಯ

ಗೋಲ್ಡನ್‌ ಬ್ರಿಡ್ಜ್ ತೂಗುಸೇತುವೆ
ತೂಗುಸೇತುವೆ ಓಡಬಾೖ ರೋಟರಿ ಇನ್ಫೋಸಿಸ್‌
ಸ್ಥಾಪನೆ 2006 ಜು.4
ಉದ್ದ 140 ಮೀ.
ವಿಶೇಷತೆ ರೋಟರಿ ಕ್ಲಬ್‌, ಇನ್ಫೋಸಿಸ್‌ ಸಹಯೋಗದಲ್ಲಿ ಪ್ರಥಮ ಹಾಗೂ ತಾಲೂಕಿನ ಅತಿ ಎತ್ತರದ
ತೂಗು ಸೇತುವೆ.
ವೆಚ್ಚ 25 ಲಕ್ಷ ರೂ.
ಪ್ರಯೋಜನ ದೊಡ್ಡೇರಿ ಗ್ರಾಮಸ್ಥರಿಗೆ ಸುಳ್ಯ ಸಂಪರ್ಕ
ಯೋಜನೆ ರೋಟರಿ ಸಂಸ್ಥೆ ಸುಳ್ಯ ಮತ್ತು ದಾನಿಗಳು
ಈಗಿನ ಸಮಸ್ಯೆ ನಿರ್ವಹಣೆ ಇಲ್ಲದೆ ಶಿಥಿಲ. 18 ಲಕ್ಷ ರೂ. ವೆಚ್ಚ ಅಂದಾಜು.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.