36 ವರ್ಷ ಹಿಂದೆ ಭತ್ತ ಕದ್ದಿದ್ದ ಆರೋಪಿ ಸೆರೆ!
Team Udayavani, Dec 16, 2019, 3:02 AM IST
ಧಾರವಾಡ: ಭತ್ತದ ಚೀಲ ಕದ್ದು ಪರಾರಿಯಾಗಿದ್ದ ಕಳ್ಳನನ್ನು 36 ವರ್ಷಗಳ ಬಳಿಕ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎತ್ತಿನಗುಡ್ಡದ ಶಂಕ್ರಪ್ಪ ಜೋಡಗೇರಿ ಬಂಧಿತ ಆರೋಪಿ. 1983ರಲ್ಲಿ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ರೈತ ಮುತಾಲಿಕ ದೇಸಾಯಿ ಎಂಬುವರ ಕಣದಲ್ಲಿ ಭತ್ತದ ಚೀಲಗಳನ್ನು ಕಳ್ಳತನ ಮಾಡಲಾಗಿತ್ತು.
ಎಂಟು ಜನರು ಕಣಕ್ಕೆ ನುಗ್ಗಿ ರೈತನನ್ನು ಕಟ್ಟಿ ಹಾಕಿ ಬೆಳಗಾಗುವವರೆಗೆ ಕಣದಲ್ಲಿದ್ದ ಭತ್ತದ ಹುಲ್ಲನ್ನು ಒಕ್ಕಣೆ ಮಾಡಿ 25 ಚೀಲ ಕಾಳನ್ನು ಕಳ್ಳತನ ಮಾಡಿದ್ದರು. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು, 7 ಜನ ಆರೋಪಿಗಳನ್ನು ಬಂಧಿಸಿದ್ದರು.
ಆದರೆ 8ನೇ ಆರೋಪಿ ಶಂಕ್ರಪ್ಪ ಜೊಡಗೇರಿ ಊರು ಬಿಟ್ಟಿದ್ದ. ನೆರೆ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಈತ ಕೆಲ ವರ್ಷಗಳ ಹಿಂದೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದಲ್ಲಿ ಆಶ್ರಯ ಪಡೆದಿದ್ದ. ಈ ಮಾಹಿತಿ ಬೆನ್ನತ್ತಿ ಕಳೆದ 2 ತಿಂಗಳಿಂದ ಆರೋಪಿ ಶಂಕ್ರಪ್ಪನ ಬೆನ್ನು ಬಿದ್ದಿದ್ದ ಪೊಲೀಸರು, ಶನಿವಾರ ಯಲ್ಲಮ್ಮನ ಗುಡ್ಡದಲ್ಲಿ ಬಂಧಿ ಸಿ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
36 ವರ್ಷಗಳ ಹಿಂದೆ ಕಳ್ಳತನ ಮಾಡಿ ಸಿಕ್ಕು ಜೈಲು ಪಾಲಾಗಿದ್ದ 7 ಜನರು ಈಗ ಹೊರಗಡೆ ಬಂದಿದ್ದರೆ, ಈಗ ಸಿಕ್ಕಿರುವ ಶಂಕ್ರಪ್ಪ ಜೈಲು ಪಾಲಾಗಿದ್ದಾನೆ. ಪಿಎಸ್ಐ ಮಹೇಂದ್ರಕುಮಾರ ನಾಯಕ, ಎಎಸ್ಐ ಎಂ.ಎಂ. ಮಂಟೂರ, ಹೆಡ್ ಕಾನ್ಸ್ಟೇಬಲ್ ಸೋಮು ಹುಚ್ಚಣ್ಣವರ ಹಾಗೂ ತಂಡ ತನಿಖೆ ಕೈಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು