ಕೆಪಿಎಸ್ಸಿ ವಿರುದ್ಧ ಆಯೋಗಕ್ಕೆ ದೂರು
Team Udayavani, Dec 16, 2019, 3:05 AM IST
ಬೆಂಗಳೂರು: ಉದ್ಯೋಗ ಸಂದರ್ಶನ ಹಾಗೂ ಕಚೇರಿಯ ಇತರ ಕೆಲಸಗಳಿಗೆ ರಾಜ್ಯದ ಬೇರೆ, ಬೇರೆ ಕಡೆಗಳಿಂದ ಬರುವವರಿಗೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಕೇಂದ್ರ ಕಚೇರಿಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸದೆ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ವಕೀಲೆ ಸುಧಾ ಕಾಟವಾ ಈ ದೂರು ನೀಡಿದ್ದು, ಈ ಸಂಬಂಧ ಕೆಪಿಎಸ್ಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
ಸಂದರ್ಶನ, ದಾಖಲಾತಿ ಪರಿಶೀಲನೆ ಸೇರಿದಂತೆ ಇತರ ಕಾರ್ಯಗಳಿಗೆ ಉದ್ಯೋಗಾಕಾಂಕ್ಷಿಗಳು ರಾಜ್ಯದ ಮೂಲೆ, ಮೂಲೆಗಳಿಂದ ಪ್ರತಿನಿತ್ಯ ಕೆಪಿಎಸ್ಸಿ ಕಚೇರಿಗೆ ಭೇಟಿ ನೀಡುತ್ತಾರೆ. ಇದರಲ್ಲಿ ಮಹಿಳೆಯರು ವಿಶೇಷವಾಗಿ, ಹಾಲುಣಿಸುವ ತಾಯಂದಿರು ಇರುತ್ತಾರೆ. ಕೆಪಿಎಸ್ಸಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶವಿಲ್ಲ. ಅಷ್ಟೇ ಅಲ್ಲ, ಕುಡಿಯುವ ನೀರು, ಆಸನ, ಶೌಚಾಲಯದ ವ್ಯವಸ್ಥೆ ಇಲ್ಲ.
ಹೀಗಾಗಿ, ಸಂದರ್ಶನ ಮುಗಿಯುವವರೆಗೂ ಅಭ್ಯರ್ಥಿಗಳು ಮತ್ತು ಅವರೊಂದಿಗೆ ಬಂದವರು ಕಚೇರಿಯ ಹೊರಗೆ ಪಾದಚಾರಿ ಮಾರ್ಗದಲ್ಲೇ ಇರಬೇಕಾಗುತ್ತದೆ. ತಾಯಂದಿರು ಹಸುಗೂಸುಗಳಿಗೆ ಪಾದಚಾರಿ ಮಾರ್ಗದಲ್ಲೇ ಹಾಲುಣಿಸಬೇಕಾದ ಸ್ಥಿತಿಯಿದ್ದು, ಮುಜುಗರ ಅನುಭವಿಸುವಂತಾಗಿದೆ.
ಶೌಚಾಲಯದ ವ್ಯವಸ್ಥೆ ಇಲ್ಲದೇ ಹೆಣ್ಣು ಮಕ್ಕಳು ಇನ್ನಿಲ್ಲದ ತೊಂದರೆ ಎದುರಿಸಬೇಕಾಗುತ್ತದೆ. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಕೆಪಿಎಸ್ಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ