ಹಣ ವಿನಿಮಯ ಕೇಂದ್ರ ಸ್ಥಗಿತ; ಪ್ರಯಾಣಿಕರಿಗೆ ತೊಂದರೆ

ಮಂಗಳೂರು ವಿಮಾನ ನಿಲ್ದಾಣ

Team Udayavani, Dec 16, 2019, 5:10 AM IST

1412MLR40-AIRPORT

ಮಂಗಳೂರು: ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗಿನ ನಗದುವಿನಿಮಯ ಕೇಂದ್ರಗಳು ವಾರದಿಂದ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಇಲ್ಲಿ ಕಾರ್ಯಾಚರಿಸುತ್ತಿದ್ದ ಎರಡು ನಗದು ವಿನಿಮಯ ಕೇಂದ್ರಗಳನ್ನು ನಷ್ಟದ ಕಾರಣ ನೀಡಿ ಟೆಂಡರ್‌ಪಡೆದ ಗುತ್ತಿಗೆದಾರರು ಬಂದ್‌ ಮಾಡಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಅದರಲ್ಲೂ ವಿದೇಶಗಳಿಂದ ಆಗಮಿಸುವವರಿಗೆ ನಗದು ವಿನಿಮಯಕ್ಕೆ ಸಮಸ್ಯೆ
ಯಾಗುತ್ತಿದೆ. ಪರ್ಯಾಯ ವ್ಯವಸ್ಥೆ ರೂಪಿಸುವತ್ತ ವಿಮಾನ ನಿಲ್ದಾಣ ಪ್ರಾಧಿಕಾರವು ಹೆಜ್ಜೆ ಇರಿಸಿದೆ.

ವಿದೇಶಗಳಿಗೆ ತೆರಳುವವರು ಅಲ್ಲಿ ವಹಿವಾಟಿಗಾಗಿ ಅಲ್ಲಿನ ಕರೆನ್ಸಿ ಹೊಂದಿರಬೇಕು. ಇದಕ್ಕಾಗಿ ಮಂಗಳೂರು ನಗರ ಸಹಿತ ಹಲವೆಡೆ ಹಲವಾರು “ನಗದು ವಿನಿಮಯ ಕೇಂದ್ರ’ಗಳಿವೆ. ಸಮಯದ ಅಭಾವ ಅಥವಾ ಇನ್ಯಾವುದೇ ಕಾರಣದಿಂದ ವಿಮಾನ ನಿಲ್ದಾಣದಲ್ಲಿಯೇ ವಿದೇಶೀ ಕರೆನ್ಸಿ ಪಡೆಯಬೇಕಿರುವ ಯಾನಿಗಳ ಅನುಕೂಲಕ್ಕಾಗಿ ನಿಲ್ದಾಣದಲ್ಲೇ ವಿನಿಮಯ ಕೇಂದ್ರ ಆರಂಭಿಸಲಾಗಿತ್ತು. ಈ ಕೇಂದ್ರವಿದ್ದರೆ ಆಗಮಿಸಿದ ವಿದೇಶೀಯರಿಗೂ ಅನುಕೂಲ. ಪ್ರಯಾಣಿಕರಿಗೆ ಸದ್ಯ ಈ ಬಗ್ಗೆ ಮಾಹಿತಿ ನೀಡುತ್ತಿದ್ದರೂ ಕೆಲವರು ಮಾತ್ರ ಬಂದ ಬಳಿಕ ತಬ್ಬಿಬ್ಟಾಗುತ್ತಿದ್ದಾರೆ.

ಏನಿದು ಸಮಸ್ಯೆ?
ನಿಲ್ದಾಣದ ಒಳಭಾಗದ ನಗದು ವಿನಿಮಯ ಕೇಂದ್ರವನ್ನು ಆರ್‌ಬಿಐ ನಿಯಮದ ಪ್ರಕಾರ ಟೆಂಡರ್‌ ಆಧಾರದಲ್ಲಿ ಕೇರಳ ಮೂಲದ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ವಿವಿಧ ಕಾರಣಗಳಿಂದ ನಷ್ಟವಾಗುತ್ತಿದೆ ಎಂಬ ಕಾರಣ ನೀಡಿ ಸಂಸ್ಥೆ ಹಿಂದೆ ಸರದಿದೆ.

ಏರ್‌ಪೋರ್ಟ್‌ ಪ್ರಾಧಿಕಾರದ ಮೂಲಗಳ ಪ್ರಕಾರ ಈ ಕೇಂದ್ರಗಳು ಸ್ಥಗಿತಗೊಳ್ಳುವ ವೇಳೆಯೇ ಹೊಸ ಟೆಂಡರ್‌ ಆಹ್ವಾನಿಸಲಾಗಿತ್ತು. ಆದರೆ ಯಾವುದೇ ಸಂಸ್ಥೆ ಭಾಗವಹಿಸದೆ ಇದ್ದುದರಿಂದ ಮರು ಟೆಂಡರ್‌ ಕರೆಯಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲವು ದಿನಗಳಿಂದ “ನಗದು ವಿನಿಮಯ ಕೇಂದ್ರ’ ಸ್ಥಗಿತಗೊಂಡಿದೆ. ಹೊಸ ಕೇಂದ್ರ ಆರಂಭಿಸಲು ಟೆಂಡರ್‌ ಕರೆಯಲಾಗಿದೆ. ಜತೆಗೆ, ತುರ್ತಾಗಿ ವಿನಿಮಯ ಸೇವೆ ಆರಂಭಿಸುವುದಕ್ಕಾಗಿ ಆರ್‌ಬಿಐ ನಿಯಮ ಪ್ರಕಾರ ಸ್ಥಳೀಯ ಬ್ಯಾಂಕ್‌ಗಳ ಜತೆಗೆ ಮಾತುಕತೆ ನಡೆಸಲಾಗಿದೆ. ಕೆಲವೇ ದಿನಗಳಲ್ಲಿ ಈ ಸಮಸ್ಯೆ ಬಗೆಹರಿಯಲಿದೆ.
–  ಜೈಶಂಕರ್‌ ಕಮರ್ಷಿಯಲ್‌ ಮ್ಯಾನೇಜರ್‌,
ಮಂಗಳೂರು ಅಂ. ವಿಮಾನ ನಿಲ್ದಾಣ

ವಿದೇಶದಿಂದ
ಆಗಮಿಸುವವರಿಗೆ ಸಮಸ್ಯೆ
ನಿಗದಿತ ಪ್ರಮಾಣಕ್ಕಿಂತ ಅಧಿಕ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ವಿದೇಶದಿಂದ ತಂದರೆ ನಿಲ್ದಾಣದಲ್ಲಿ ತೆರಿಗೆ ಪಾವತಿಸಬೇಕು. ಆದರೆ ವಿದೇಶದಿಂದ ಬರುವ ಬಹುತೇಕರಲ್ಲಿ ಭಾರತೀಯ ಕರೆನ್ಸಿ ಇರುವುದಿಲ್ಲ. ನಿಲ್ದಾಣದ ಒಳಗೆಯೇ ವಿನಿಮಯ ಕೇಂದ್ರವಿದ್ದರೆ ಇದಕ್ಕೆ ಅನುಕೂಲ. ಈಗ ಕೇಂದ್ರ ಸ್ಥಗಿತಗೊಂಡು ಸಮಸ್ಯೆಯಾಗಿದೆ.

-ದಿನೇಶ್‌ ಇರಾ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.