ರಿಕ್ಷಾ ರನ್ ತಂಡಕ್ಕೆ ಬೀಳ್ಕೊಡುಗೆ
Team Udayavani, Dec 16, 2019, 10:36 AM IST
ಹುಬ್ಬಳ್ಳಿ: ಭಾರತದಲ್ಲಿನ ಕೆಲವೊಂದು ಅಂಗವಿಕಲ ಮಕ್ಕಳ ಶಾಲೆಗೆ ನೆರವು ಕಲ್ಪಿಸುವ ನಿಟ್ಟಿನಲ್ಲಿ ಸೇವಾ ಯುಕೆ ಸಂಸ್ಥೆ ಆಯೋಜಿಸಿರುವ ರಿಕ್ಷಾ ರನ್ ಅಭಿಯಾನದ ತಂಡ ಹುಬ್ಬಳ್ಳಿ ಆಗಮಿಸಿತ್ತು. ರವಿವಾರ ಬೆಳಗ್ಗೆ ತಂಡವನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರು ದೇಶಪಾಂಡೆ ನಗರದ ಕರ್ನಾಟಕ ಜಿಮಖಾನಾ ಮೈದಾನದಲ್ಲಿ ರಿಕ್ಷಾ ರನ್ ತಂಡಕ್ಕೆ ಬಾವುಟ ತೋರಿಸುವ ಮೂಲಕ ಬೀಳ್ಕೊಟ್ಟರು.
ರಿಕ್ಷಾ ರನ್ ತಂಡ ಶನಿವಾರ ಸಂಜೆ ವೇಳೆಗೆ ಶಿವಮೊಗ್ಗದಿಂದ ಗದುಗಿಗೆ ತೆರಳಿ ಅಲ್ಲಿಂದ ಹುಬ್ಬಳ್ಳಿಗೆ ಆಗಮಿಸಿ ಇಲ್ಲಿಯೇ ತಂಗಿತ್ತು. ಸ್ಥಳೀಯ ಸೇವಾ ಭಾರತಿ ಟ್ರಸ್ಟ್ ಅಡಿಯಲ್ಲಿ ನಗರಕ್ಕೆ ಬಂದ ಸುಮಾರು 105ಕ್ಕೂ ಅಧಿಕ ಅತಿಥಿಗಳಿಗೆ ಇಲ್ಲಿನ ಅನೇಕ ಮನೆಗಳಲ್ಲಿ ಆತಿಥ್ಯ ನೀಡಲಾಗಿತ್ತು. ಬೆಳಗ್ಗೆ 7 ಗಂಟೆ ಸುಮಾರಿಗೆ ರಿಕ್ಷಾ ರನ್ ತಂಡದ ಸದಸ್ಯರು ಜಿಮಖಾನಾ ಮೈದಾನದಲ್ಲಿ ಸಮಾವೇಶಗೊಂಡು ತಮ್ಮ ತಮ್ಮ ಆಟೋರಿಕ್ಷಾಗಳಲ್ಲಿ ಗೋವಾಕ್ಕೆ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಲ್ಲಿ ತಮಗೆ ದೊರೆತ ಆತ್ಮೀಯ ಆತಿಥ್ಯವನ್ನು ಕೊಂಡಾಡಿದರಲ್ಲದೆ, ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಲ್ಪಾ ಶೆಟ್ಟರ, ಗೋವರ್ಧನರಾವ್, ಡಾ| ರಘು ಅಕ್ಮಂಚಿ, ಚಂದ್ರಶೇಖರ ಗೋಕಾಕ, ಶಂಕರ ಗುಮಾಸ್ತೆ, ಕಿರಣ ಗುಡ್ಡದಕೇರಿ, ಜಯತೀರ್ಥ ಕಟ್ಟಿ, ಪ್ರಭು ಉಮದಿ, ಸತೀಶ ಶೇಜವಾಡಕರ, ನಾಗೇಶ ಕಲಬುರ್ಗಿ, ಉಮೇಶ ದುಶಿ, ಸೇವಾ ಭಾರತಿ ಟ್ರಸ್ಟ್ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !