ಅಂಕನಹಳ್ಳಿ ಸ.ಪ್ರೌ.ಶಾಲಾ ವಿದ್ಯಾರ್ಥಿಗಳಿಗೆ ಅರಣ್ಯದಲ್ಲಿ ವನ ಮಾಹಿತಿ


Team Udayavani, Dec 17, 2019, 5:27 AM IST

14SS1STUDENTS-GE-MAHITI

ಶನಿವಾರಸಂತೆ: ಸಮಿಪದ ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಯ ನಿರ್ಮಲ ಇಕೋ ಕ್ಲಬ್‌, ವಿದ್ಯಾರ್ಥಿ ರೋಟರಿ ಇಂಟರಿಯಾಕ್ಟ್ ಕ್ಲಬ್‌ ಮತ್ತು ಶನಿವಾರಸಂತೆ ಅರಣ್ಯ ಇಲಾಖೆ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಅರಣ್ಯದಲ್ಲಿ ವನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಅಂಕನಹಳ್ಳಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಮತ್ತು ಗ್ರಾಮಸ್ಥರು ಅಕ್ಕಪಕ್ಕದ ಗ್ರಾಮಗಳಿಂದ ಕರೆಸಿಕೊಂಡಿದ್ದ 7 ಎತ್ತಿನ ಗಾಡಿಯಲ್ಲಿ ಕುಳಿತುಕೊಂಡು ಶಾಲೆಯಿಂದ ಸಮಿಪದ ಗಂಗವಾರ ಮೀಸಲು ಅರಣ್ಯಕ್ಕೆ ತೆರಳಿದರು.

ಮೀಸಲು ಅರಣ್ಯದೊಳಗೆ ದಿನದ ಮಹತ್ವದ ಕುರಿತು ಮಾಹಿತಿ ಸಭೆಯನ್ನು ನಡೆಸಲಾಯಿತು. ಅರಣ್ಯ, ಪರಿಸರ, ಮರಗಿಡ, ಪ್ರಾಣಿ-ಪಕ್ಷಿಗಳು ಸೇರಿದಂತೆ ಅರಣ Â ಮತ್ತು ವನ್ಯ ಸಂಪತ್ತಿನ ಮಹತ್ವದ ಬಗ್ಗೆ ಶನಿವಾರಸಂತೆ ಉಪ ಅರಣ್ಯ ವಲಯಾಧಿಕಾರಿಶ್ರೀನಿವಾಸ್‌ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಜಿ.ಎಂ.ಹೇಮಂತ್‌ ಮಾಹಿತಿ ನೀಡಿ-ವನ್ಯ ಸಂಪತ್ತು ರಾಷ್ಟ್ರದ ಬಹುದೊಡ್ಡ ಸಂಪತ್ತಾಗಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅರಣ್ಯ, ವನ್ಯಜೀವಿ ಮುಂತಾದ ಸ್ವಾಭಾವಿಕ ಪರಿಸರದ ಬಗ್ಗೆ ಅರಿವು ಹೊಂದುವ ಅಗತ್ಯ ಇದೆ ಎಂದರು. ಮನುಷ್ಯನ ಬದುಕಿಗೆ ಅರಣ್ಯ ಮತ್ತು ಪರಿಸರ ಮಹತ್ವದ ಪಾತ್ರವಹಿಸುತ್ತದೆ, ಅರಣ್ಯವನ್ನು ಉಳಿಸಿ ಬೆಳೆಸಿದರೆ ಮಾತ್ರ ಉತ್ತಮ ಮಳೆ ಬೆಳೆಯಾಗುತ್ತದೆ ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಅರಣ್ಯದ ಮಹತ್ವವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಅರಣ್ಯದಲ್ಲಿ ಮಾಹಿತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಶನಿವಾರಸಂತೆ ರೋಟರಿ ಕ್ಲಬ್‌ ಅಧ್ಯಕ್ಷ ಎಸ್‌.ವಿ.ಶುಭು ಮಾತನಾಡಿ-ರೋಟರಿ ಸಂಸ್ಥೆಯು ಸಮಾಜ ಸೇವೆಯ ಜೊತೆಯಲ್ಲಿ ಸರಕಾರಿ ಶಾಲೆಗಳು ಮತ್ತು ವಿದ್ಯಾರ್ಥಿಗಳ ಪ್ರಗತಿಗಾಗಿ ಸೇವೆ ಸಹಕಾರ ನೀಡುತ್ತಿದೆ ಎಂದರು.

ರೋಟರಿ ಸಂಸ್ಥೆ ವಿದ್ಯಾರ್ಥಿಗಳಿಗೆ ಪರಿಸರ, ಆರೋಗ್ಯ, ಸ್ವಚ್ಚತೆ ಮತ್ತು ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಜೊತೆಯಲ್ಲಿ ಶಾಲೆಗಳಲ್ಲಿ ರೋಟರಿ ಇಂಟರಿಯಾಕ್ಟ್ ಕ್ಲಬ್‌ ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಕಲಿಸಿಕೊಡುತ್ತಿದೆ ಮತ್ತು ವಿದ್ಯಾರ್ಥಿಗಳಿಗೆ ಅರಣ್ಯ ಸಂಪತ್ತಿನ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಶ್ಲಾಘನಿಯ ಎಂದರು.

ವನ ಮಾಹಿತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಈ ಸಂದರ್ಭ ಇಂದಿನ ದಿನದಲ್ಲಿ ಹಳ್ಳಿಯಲ್ಲಿ ತೀರ ಅಪರೂಪವಾಗಿರುವ ಮಧ್ಯೆ ಅಂಕನಹಳ್ಳಿ ಸಮಿಪದ ಅಮ್ಮಳ್ಳಿ ಗ್ರಾಮದ ಎತ್ತಿನ ಗಾಡಿ ಸೇವೆಯನ್ನು ಒದಗಿಸಿಕೊಟ್ಟ 7 ಮಂದಿ ಎತ್ತಿನಗಾಡಿ ಮಾಲೀಕರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ, ಅರಣ್ಯ ರಕ್ಷಕರಾದ ಪ್ರಶಾಂತ್‌, ರೋಹಿತ್‌, ಜಯಕುಮಾರ್‌, ಎಸ್‌ಡಿಎಂಸಿ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಗ್ರಾಮದ ಪ್ರಮುಖರು ಹಾಜರಿದ್ದರು. ತದನಂತರ ವನ ಬೋಜನ ಕಾರ್ಯಕ್ರಮ ಏರ್ಪಡಿಸಲಾಯಿತು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.