ನರೇಗಾ ಯೋಜನೆ ಕಾಮಗಾರಿಗೆ ಜೆಸಿಬಿ ಬಳಕೆ


Team Udayavani, Dec 17, 2019, 3:00 AM IST

narega-yoj

ಚಿಂತಾಮಣಿ: ತಾಲೂಕಿನಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ನರೇಗಾ) ದುರುಪಯೋಗ ಪಡಿಸಿಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ತಾಲೂಕಿನಲ್ಲಿ ಕಂಡುಬಂದಿದೆ.

ಉದ್ಯೋಗ ಖಾತ್ರಿ ಯೋಜನೆ ಎಂದರೆ ಸೂಚಿಸುವಂತೆ ಕೂಲಿ ಇಲ್ಲದ ಬಡ ಜನರಿಗೆ ಸರ್ಕಾರದಿಂದಲೇ ಕೆಲಸ ಕೊಟ್ಟು ಕೂಲಿ ಕೊಡುವುದು ಈ ಯೋಜನೆಯ ಉದ್ದೇಶ. ಆದರೆ ಗ್ರಾಮೀಣ ಭಾಗಗಳಲ್ಲಿ ಕೃಷಿಗೆ ಸಂಬಂಧಿಸಿದಂತೆ ರೈತರು ತಮ್ಮ ಜಮೀನುಗಳಲ್ಲಿ ಬದು, ಕಾಲುವೆ, ಗೋಗುಂಟೆಗಳು ಸೇರಿದಂತೆ ಕೆರೆಯಲ್ಲಿ ಹುಳು ತೆಗೆಯುವುದು ಇನ್ನಿತರ ಹಲವು ಕಾಮಗಾರಿಗಳನ್ನು ಈ ಯೋಜನೆಯಡಿ ಮಾಡಿಕೊಳ್ಳುವ ಅವಕಾಶವಿರುತ್ತೆ. ಆದರೆ ಆಗುತ್ತಿರುವುದೇ ಬೇರೆ.

ಮಾನವ ಕೂಲಿಗೆ ಕತ್ತರಿ: ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ನಂದಿಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಅಣ್ಣೆನಹಳ್ಳಿ ಗ್ರಾಮದ ಕೆರೆಯಲ್ಲಿ ಮುಖಂಡರೊಬ್ಬರು ಗೋಗುಂಟೆ ಕಾಮಗಾರಿ ಮಾಡಿಸಿದ್ದು, ಸದರಿ ಕಾಮಗಾರಿಯನ್ನು ಜಾಬ್‌ಕಾರ್ಡ್‌ ಹೊಂದಿರುವ ಜನರಿಗೆ ಕೆಲಸ ಕೊಟ್ಟು ಗ್ರಾಪಂ ಅಧಿಕಾರಿಗಳು ಖುದ್ದು ಸ್ಥಳದಲ್ಲಿದ್ದು ಕೆಲಸ ಮಾಡಿಸಬೇಕು. ಆದರೆ ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೋಗುಂಟೆ ಕಾಮಗಾರಿಯನ್ನು ಜೆಸಿಬಿ ಯಂತ್ರದ ಮೂಲಕ ನಿರ್ವಹಿಸಿದ್ದು, ಮಾನವ ಕೂಲಿಗೆ ಕತ್ತರಿ ಹಾಕಿದಂತಾಗಿದೆ.

3 ಲಕ್ಷ ರೂ.ವೆಚ್ಚದ ಕಾಮಗಾರಿ ದುರುಪಯೋಗ: ತಾಲೂಕಿನ ನಂದಿಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಅಣ್ಣೆನಹಳ್ಳಿ ಗ್ರಾಮದಲ್ಲಿ ದ್ಯೋಗ ಖಾತ್ರಿ ಯೋಜನೆಯಡಿ ಮಾಡುತ್ತಿರುವ 3 ಲಕ್ಷ ಮೌಲ್ಯದ ಗೋಗುಂಟೆ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು, ಕಾಮಗಾರಿ ಪರಿಶೀಲಿಸದೆ ಅನುದಾನ ದುರ್ಬಳಕೆಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಾನೂನು ಕ್ರಮ: ಈ ಕುರಿತು ಪ್ರತಿಕ್ರಿಯಿಸಿದ ತಾಪಂ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ, ಉದ್ಯೋಗ ಖಾತ್ರಿ ಯೋಜನೆಯಡಿಯ ಕಾಮಗಾರಿಗಳನ್ನು ಜೆಸಿಬಿ ಯಂತ್ರ ಬಳಕೆ ಮಾಡಿ ಕೆಲಸ ಮಾಡುವುದು ಕಾನೂನು ಬಾಹಿರ. ಆದ್ದರಿಂದ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದೇಶದಲ್ಲಿ ಗ್ರಾಮೀಣ ಭಾಗದ ಜನರು ಪ್ರತಿದಿನ ಕೂಲಿಗಾಗಿ ಪರಿತಪಿಸುವುದನ್ನು ತಡೆಯುವ ದೃಷ್ಟಿಯಿಂದ ವರ್ಷಕ್ಕೆ 150 ದಿನಗಳ ಕಾಲ ಬಡವರಿಗೆ ಕೂಲಿ ದೊರೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೆ ತಂದು ಪಂಚಾಯಿತಿ ವತಿಯಿಂದ ಹಲವು ರೀತಿಯ ಕಾಮಗಾರಿಗಳು ಮಾಡಲು ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಆದರೆ ತಾಪಂ ಅಧಿಕಾರಿಗಳ ನಿರ್ಲಕ್ಷದಿಂದ ಖಾತ್ರಿ ಯೋಜನೆಯನ್ನು ಕೆಲ ಮುಖಂಡರು ದುರುಪಯೋಗ ಪಡಿಸಿಕೊಂಡು ಬಡವರಿಗೆ ಅನ್ಯಾಯ ಮಾಡುತ್ತಿರುವುದು ತಾಲೂಕಿನ ಹಲವು ಗ್ರಾಪಂಗಳಲ್ಲಿ ಕಂಡುಬರುತ್ತಿರುವುದು ಖೇಧಕರ ಸಂಗತಿ.

ಮುಂದುವರಿದ ಕಾಮಗಾರಿ: ಗ್ರಾಮದಲ್ಲಿ ನರೇಗಾ ಯೋಜನೆ ದುರುಪಯೋಗದ ಬಗ್ಗೆ ಪಿಡಿಒ ಅಧಿಕಾರಿಗಳಿಗೆ ತಿಳಿಸಿದೆ. ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಮಗಾರಿ ಮಾತ್ರ ನಡೆಯುತ್ತಲೇ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ

Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.