ನ್ಯಾಯಾಲಯದೊಳಗೆ ಕೊಲೆ ಆರೋಪಿಗೆ ಗುಂಡಿಟ್ಟು ಹತ್ಯೆ; ಮೂವರ ಬಂಧನ
ಏಕಾಏಕಿ ಘಟನೆ ನಡೆದಿರುವುದನ್ನು ಕಂಡ ನ್ಯಾಯಾಧೀಶರು, ವಕೀಲರು ಹಾಗೂ ಕೋರ್ಟ್ ಸಿಬ್ಬಂದಿಗಳು ಆಘಾತಕ್ಕೊಳಗಾಗಿದ್ದರು
Team Udayavani, Dec 17, 2019, 3:54 PM IST
ಲಕ್ನೋ: ಕೊಲೆ ಆರೋಪಿಯನ್ನು ನ್ಯಾಯಾಲಯದೊಳಗೆ ಗುಂಡಿಟ್ಟು ಹತ್ಯೆಗೈದ ಘಟನೆ ಮಂಗಳವಾರ ಉತ್ತರಪ್ರದೇಶದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಉತ್ತರಪ್ರದೇಶದ ಬಿಜ್ನೋರ್ ನಲ್ಲಿ ಇಂದು ಮಧ್ಯಾಹ್ನ ನ್ಯಾಯಾಲಯದೊಳಗೆ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಇದ್ದ ವೇಳೆಯೇ ಆರೋಪಿ ಮೇಲೆ ಗುಂಡು ಹಾರಿಸಿ ಹತ್ಯೆಗೈಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಕೊಲೆ ಪ್ರಕರಣದ ಆರೋಪಿ ಶಹನವಾಜ್ ಅನ್ಸಾರಿಯನ್ನು ಪೊಲೀಸರು ಬಿಜ್ನೋರ್ ಜಿಲ್ಲಾ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ಪಿಸ್ತೂಲ್ ಹಿಡಿದು ಬಂದ ಮೂವರು ಕೋರ್ಟ್ ನೊಳಗೆ ಆರೋಪಿಯನ್ನು ಗುಂಡಿಟ್ಟು ಕೊಂದಿದ್ದರು ಎಂದು ವರದಿ ತಿಳಿಸಿದೆ.
ಕೂಡಲೇ ಮೂವರನ್ನು ಹಿಂಬಾಲಿಸಿ ಹೋದ ಪೊಲೀಸರು ಕೋರ್ಟ್ ಆವರಣದೊಳಗೆ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಏಕಾಏಕಿ ಘಟನೆ ನಡೆದಿರುವುದನ್ನು ಕಂಡ ನ್ಯಾಯಾಧೀಶರು, ವಕೀಲರು ಹಾಗೂ ಕೋರ್ಟ್ ಸಿಬ್ಬಂದಿಗಳು ಆಘಾತಕ್ಕೊಳಗಾಗಿದ್ದರು ಎಂದು ಸ್ಥಳೀಯ ವರದಿ ತಿಳಿಸಿದೆ.
ಕೋರ್ಟ್ ನಲ್ಲಿ ಆರೋಪಿಗೆ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ಕುರಿತು ವಾದ ಮಂಡಿಸಲಾಗಿತ್ತು. ದಿಢೀರನೆ ಬಂದ ಮೂವರು ಏಕಾಏಕಿ ಗುಂಡು ಹಾರಿಸಿಬಿಟ್ಟಿದ್ದರು. ಒಬ್ಬ ವ್ಯಕ್ತಿ (ಆರೋಪಿ) ನೆಲದ ಮೇಲೆ ಬಿದ್ದುಬಿಟ್ಟಿದ್ದನ್ನು ನಾನು ಗಮನಿಸಿದ್ದೇನೆ. ಎಲ್ಲವೂ ಸಿನಿಮೀಯ ರೀತಿಯಲ್ಲಿ ನಡೆದು ಹೋಗಿತ್ತು ಎಂದು ವಕೀಲ ಅತುಲ್ ಸಿಸೋಡಿಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ