ಶ್ರೀನಿ ಕೈಯಲ್ಲಿ “ಓಲ್ಡ್‌ ಮೊಂಕ್‌’


Team Udayavani, Dec 18, 2019, 7:02 AM IST

Srini-old-monk

ಈ ಹಿಂದೆ “ಶ್ರೀನಿವಾಸ ಕಲ್ಯಾಣ’ ಮತ್ತು “ಬೀರ್‌ಬಲ್‌’ ಚಿತ್ರದ ಮೂಲಕ ಪ್ರೇಕ್ಷಕರಿಗೆ ಕಾಮಿಡಿ ಕಚಗುಳಿ ಇಟ್ಟಿದ್ದ ನಟ ಕಂ ನಿರ್ದೇಶಕ ಶ್ರೀನಿ (ಶ್ರೀನಿವಾಸ್‌) ಈಗ ಮತ್ತೂಂದು ಅಂಥದ್ದೇ ಕಾಮಿಡಿ ಕಹಾನಿಯನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಅಂದಹಾಗೆ, ಈ ಬಾರಿ ಶ್ರೀನಿ ತಮ್ಮ ಚಿತ್ರಕ್ಕೆ ಇಟ್ಟಿರುವ ಹೆಸರು “ಓಲ್ಡ್‌ ಮೊಂಕ್‌’! ಈ ಬಗ್ಗೆ ಮಾತನಾಡುವ ಶ್ರೀನಿ, “ಎಲ್ಲರೂ ಚಿತ್ರದ ಟೈಟಲ್‌ ಕೇಳಿದ್ರೆ ಬೇರೆ ಥರ ಯೋಚಿಸುತ್ತಾರೆ.

ಆದ್ರೆ ಸಿನಿಮಾದಲ್ಲಿ ನಾವು ಹೇಳುತ್ತಿರುವುದೇ ಬೇರೆ. ಒಮ್ಮೆ ಶ್ರೀಕೃಷ್ಣ ಮತ್ತು ರಾಧೆ ರಮಿಸುತ್ತಿರುವಾಗ ಅವರ ಮಧ್ಯೆ ಬರುವ ನಾರದ ಇಬ್ಬರಿಗೂ ಫಿಟಿಂಗ್‌ ಇಟ್ಟು ಹೋಗುತ್ತಾನೆ. ಇದರಿಂದ ರಾಧೆ ಕೃಷ್ಣನಿಂದ ದೂರವಾಗುತ್ತಾಳೆ. ಆಗ ಒಂದು ಹುಡುಗಿಯನ್ನು ಪಟಾಯಿಸುವುದು ಎಷ್ಟು ಕಷ್ಟ ಅನ್ನೋದು ನಾರದನಿಗೆ ಅರ್ಥ ಮಾಡಿಸಲು ಕೃಷ್ಣ ಅವನಿಗೆ ಶಾಪ ಕೊಟ್ಟು ಮನುಷ್ಯ ರೂಪದಲ್ಲಿ ಭೂಮಿಗೆ ಕಳುಹಿಸುತ್ತಾನೆ.

ಅದೇ ಫಿಟಿಂಗ್‌ ಇಡುವ ಗುಣಗಳನ್ನು ಇಟ್ಟುಕೊಂಡು ಭೂಮಿಗೆ ಮನುಷ್ಯನ ರೂಪದಲ್ಲಿ ಬರುವ ನಾರದ ಇಲ್ಲಿ ಏನೇನು ಮಾಡ್ತಾನೆ ಅನ್ನೋದೆ ಕಥೆ’ ಎಂದು ಚಿತ್ರದ ಕಥಾಹಂದರವನ್ನು ಬಿಚ್ಚಿಡುತ್ತಾರೆ ಶ್ರೀನಿ. “ಇಡೀ ಸಿನಿಮಾ ಲವ್‌ ಕಂ ರೊಮ್ಯಾಂಟಿಕ್‌ ಕಾಮಿಡಿಯಾಗಿ ಸಾಗುತ್ತದೆ. ಒಂದಷ್ಟು ಕಾಲ್ಪನಿಕ ಅಂಶಗಳನ್ನು ಇಟ್ಟುಕೊಂಡು, ಮನರಂಜನಾತ್ಮಕವಾಗಿಸಾಗುವ ಚಿತ್ರ. ಕೊನೆಯಲ್ಲಿ ಒಂದು ಫಿಲಾಸಫಿಯನ್ನು ಕೂಡ ಹೇಳುತ್ತದೆ.

“ಓಲ್ಡ್‌ ಮೊಂಕ್‌’ ಅಂದ್ರೆ ಹಳೆಯ ಸನ್ಯಾಸಿ ಅಂಥ. ನಮ್ಮಲ್ಲಿ ಹಳೆಯ ಸನ್ಯಾಸಿ ಅಂದ್ರೆ ಮೊದಲು ನೆನಪಿಗೆ ಬರುವ ಹೆಸರು ನಾರದನದ್ದು. ಹಾಗಾಗಿ ಚಿತ್ರದ ಸಬ್ಜೆಕ್ಟ್ಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಟೈಟಲ್‌ ಇಟ್ಟುಕೊಂಡಿದ್ದೇವೆ’ ಎಂದು ವಿವರಣೆ ಕೊಡುತ್ತಾರೆ ಶ್ರೀನಿ. ಸದ್ಯ “ಓಲ್ಡ್‌ ಮೊಂಕ್‌’ ಚಿತ್ರದ ಸ್ಕ್ರಿಪ್ಟ್ ಕಾರ್ಯಗಳು ಬಹುತೇಕ ಪೂರ್ಣಗೊಂಡಿದ್ದು, ಚಿತ್ರದಲ್ಲಿ ನಿರ್ದೇಶಕ ಕಂ ನಾಯಕ ಶ್ರೀನಿ ಅವರಿಗೆ ನಾಯಕಿಯ ಹುಡುಕಾಟ ನಡೆಯುತ್ತಿದೆ.

ಉಳಿದ ಪಾತ್ರಗಳಿಗೂ ಒಂದಷ್ಟು ಕಲಾವಿದರ ಹುಡುಕಾಟ ನಡೆಯುತ್ತಿದ್ದು, ಮುಂದಿನ ಜನವರಿ ವೇಳೆಗೆ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಬೆಂಗಳೂರು, ಮೈಸೂರು ಮತ್ತಿತರ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ಶ್ರೀಶ ಕೂದುವಳ್ಳಿ ಛಾಯಾಗ್ರಹಣ, ಸೌರಭ್‌ ವೈಭವ್‌ ಸಂಗೀತವಿದೆ. ಶ್ರೀನಿ, ಸಂತೋಷ್‌ ನಂದಕುಮಾರ್‌, ಪ್ರಸನ್ನ ಜಂಟಿಯಾಗಿ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ರಚಿಸಿದ್ದಾರೆ. “ಸಿದ್ಧಿ ಎಂಟರ್‌ಟೈನ್ಮೆಂಟ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ ಮುಂದಿನ ಜುಲೈ ವೇಳೆಗೆ ತೆರೆಗೆ ತರುವ ಯೋಚನೆ ಇದೆ ಎನ್ನುತ್ತಾರೆ ಶ್ರೀನಿ.

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.