ಸಚಿವಾಕಾಂಕ್ಷಿಗಳ ಲಾಬಿ; ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂದ ಬಿಎಸ್ವೈ
Team Udayavani, Dec 18, 2019, 6:40 AM IST
ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿ ಶಾಸಕರು ಸಚಿವ ಸ್ಥಾನ, ಖಾತೆಗೆ ಪಟ್ಟು ಹಿಡಿಯುತ್ತಿರುವ ಬೆನ್ನಲ್ಲೇ ಮೂಲ ಬಿಜೆಪಿಗರೂ ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿಗಳಿಗೆ ದುಂಬಾಲು ಬಿದ್ದಿದ್ದಾರೆ. ಇನ್ನೊಂದೆಡೆ ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಒತ್ತಡದ ನಡುವೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಈಗಿರುವ ಉಪಮುಖ್ಯಮಂತ್ರಿ ಸ್ಥಾನವೇ ಅಗತ್ಯವಿಲ್ಲ ಎಂದು ಹೇಳಿರುವುದು ಪರ- ವಿರೋಧದ ಚರ್ಚೆಗೆ ಇನ್ನಷ್ಟು ಪುಷ್ಟಿ ನೀಡಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಯಾಗಿ ಚರ್ಚಿಸಿದ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಈ ನಡುವೆ ಉಪಚುನಾವಣೆಯಲ್ಲಿ ಗೆದ್ದವರಿಗಷ್ಟೇ ಸಚಿವ ಸ್ಥಾನ, ಉಳಿದವರಿಗೆ ಸಚಿವ ಸ್ಥಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ ಉಪಚುನಾವಣೆಯ ಪರಾಜಿತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂಬ ಪರೋಕ್ಷ ಸಂದೇಶ ರವಾನಿಸಿದರು. ಜತೆಗೆ ಡಿ. 25ರ ಬಳಿಕ ದಿಲ್ಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಾಗಿ ಹೇಳಿರುವುದರಿಂದ ಸಚಿವಾಕಾಂಕ್ಷಿಗಳ ಒತ್ತಡವೂ ಹೆಚ್ಚಾಗಿದೆ.
ಮುಖ್ಯಮಂತ್ರಿಗಳ ಡಾಲರ್ ಕಾಲನಿಯ ನಿವಾಸವು ಸೋಮವಾರ ಬೆಳಗ್ಗೆ ಬಿರುಸಿನ ರಾಜಕೀಯ ಚಟುವಟಿಕೆ ತಾಣವಾಗಿ ಪರಿವರ್ತನೆಯಾಗಿತ್ತು. ಸಚಿವಕಾಂಕ್ಷಿಗಳು, ಉಪಮುಖ್ಯಮಂತ್ರಿ ಆಕಾಂಕ್ಷಿಗಳು, ಸ್ಥಾನಮಾನದ ನಿರೀಕ್ಷೆಯಲ್ಲಿರುವ ಶಾಸಕರು, ಪ್ರಭಾವಿ ಖಾತೆ ಬಯಸುವ ಸಚಿವರ ಮ್ಯಾರಥಾನ್ ಭೇಟಿ, ಮಾತುಕತೆ ನಡೆದಿತ್ತು.
ಹಿರಿಯ ಶಾಸಕ ಉಮೇಶ್ ಕತ್ತಿ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಬೆನ್ನಲ್ಲೇ ಉಮೇಶ್ ಕತ್ತಿ ಅವರು ಸಚಿವ ಸ್ಥಾನಕ್ಕೆ ಮನವಿ ಮುಂದುವರಿಸಿದ್ದಾರೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿಯವರು ಕೂಡ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಹಿಂದೆ ಮಾತು ನೀಡಿದ್ದಂತೆ ಜಲ ಸಂಪನ್ಮೂಲ ಖಾತೆ ಜತೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೋರಿದರು ಎಂದು ಹೇಳಲಾಗಿದೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಯಡಿಯೂರಪ್ಪ
ಅವರನ್ನು ಭೇಟಿಯಾಗಿದ್ದರು. ಶ್ರೀರಾಮುಲು ಪರ ಸೋಮಶೇಖರ ರೆಡ್ಡಿ
ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಶ್ರೀರಾಮುಲು ಅವರಿಗೆ ಉಪ ಮುಖ್ಯ ಮಂತ್ರಿ ಸ್ಥಾನ ನೀಡಬೇಕು. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಸ್ಥಾನಮಾನ ಕಲ್ಪಿಸಬೇಕು ಎಂದು ರಾಮುಲು ಪರವಾಗಿ ಸೋಮಶೇಖರ ರೆಡ್ಡಿ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.
ಡಿ.21 ಇಲ್ಲವೇ 22ರಂದು ದಿಲ್ಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುವುದು. ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡ ಲಾಗಿತ್ತು. ಅದರಂತೆ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು.
-ಬಿ.ಎಸ್. ಯಡಿಯೂರಪ್ಪ , ಮುಖ್ಯಮಂತ್ರಿ
ಪಕ್ಷದ ಸುರೇಶ್ಗೌಡ, ರವೀಂದ್ರ ಶ್ರೀಕಂಠಯ್ಯ ಅವರಷ್ಟೇ ಬಿಜೆಪಿ ಸೇರುತ್ತಾರೋ ಅಥವಾ ಇನ್ನಷ್ಟು ಮಂದಿ ಬಿಜೆಪಿ ಸೇರು ತ್ತಾರೋ ಗೊತ್ತಿಲ್ಲ. ಶಾಸಕರಿಗೆ ಈಗ ಮೊದಲಿ ನಷ್ಟು ಬೇಡಿಕೆ ಇಲ್ಲ. ಹೋದವರಿಗೂ ಪ್ರಯೋಜನವೂ ಆಗುವುದಿಲ್ಲ.
– ಬಸವರಾಜ ಹೊರಟ್ಟಿ , ಜೆಡಿಎಸ್ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ
UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು