ನಡುಗಡ್ಡೆ ಸ್ಥಳಾಂತರಕ್ಕೆ ಆಗ್ರಹ


Team Udayavani, Dec 18, 2019, 12:14 PM IST

bk-tdy-4

ಬಾಗಲಕೋಟೆ: ಆಲಮಟ್ಟಿ ಜಲಾಯಶವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿದಾಗ ಸಂಪೂರ್ಣ ನಡುಗಡ್ಡೆಯಾಗಿ ಸಂಪರ್ಕ ಕಳೆದುಕೊಳ್ಳುವ ನಗರದ ಕಿಲ್ಲಾ ಭಾಗದ ನಡುಗಡ್ಡೆ ಪ್ರದೇಶ ಸ್ಥಳಾಂತರಿಸಬೇಕು ಎಂದು ನಡುಗಡ್ಡೆ ಹೋರಾಟ ಸಮಿತಿ ಒತ್ತಾಯಿಸಿದೆ.

ಮಂಗಳವಾರ ಕೃಷ್ಣಾ ಮೇಲ್ದಂಡೆ ಯೋಜನೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಎನ್‌. ಜಯರಾಮ್‌ ಅವರಿಗೆ ಹೋರಾಟ ಸಮಿತಿಯಪದಾಧಿಕಾರಿಗಳು, ಸುಮಾರು 45ಕ್ಕೂ ಹೆಚ್ಚು ಸಂತ್ರಸ್ತರು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡರು. ನೂತನ ಆಯುಕ್ತರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ ಹೋರಾಟ ಸಮಿತಿ ಪದಾಧಿಕಾರಿಗಳು ಸಂತ್ರಸ್ತರು, ವಿವಿಧ ಸಮಸ್ಯೆ ಗಮನಕ್ಕೆ ತಂದರು.

ಈ ವೇಳೆ ಹೋರಾಟ ಸಮಿತಿಯ ಕಾರ್ಯದರ್ಶಿ ಅರವಿಂದ ಮುಚಖಂಡಿ ಮಾತನಾಡಿ, ನಡುಗಡ್ಡೆ ಪ್ರದೇಶದ ಸುಮಾರು 1120 ಮನೆಗಳು, ಇಡೀ ಬಾಗಲಕೋಟೆಯ ಸಂಪರ್ಕ ಕಳೆದುಕೊಳ್ಳಲಿವೆ. ಅವುಗಳನ್ನು ಮುಳುಗಡೆ ವ್ಯಾಪ್ತಿಗೆ ತಂದು ಸ್ಥಳಾಂತರಿಸಬೇಕು ಎಂಬುದು ಬಹಳ ದಿನಗಳ ಬೇಡಿಕೆ. ಬಿಟಿಡಿಎದಿಂದ ಈ ಪ್ರಕ್ರಿಯೆ ನಡೆಸಿತ್ತು. ಆದರೆ, ಜಲ ಸಂಪನ್ಮೂಲ ಇಲಾಖೆ, ಕಾರ್ಯ ಭಾರದ ಒತ್ತಡದ ನೆಪ ಹೇಳಿ, ನಡುಗಡ್ಡೆ ಸ್ಥಳಾಂತರ ಕಾರ್ಯವನ್ನು ಕೈಬಿಟ್ಟಿದೆ. ಇದರಿಂದ ಹಲವು ವರ್ಷಳಿಂದ ನಡೆದ ಹೋರಾಟಕ್ಕೆ ಜಲ ಸಂಪನ್ಮೂಲ ಇಲಾಖೆ ಮಾನ್ಯತೆ ನೀಡಿಲ್ಲ. ಈ ವಿಷಯದ ಸ್ವತಃ ಸ್ಥಳೀಯ ಶಾಸಕರ ಗಮನಕ್ಕೂ ಅಧಿಕಾರಿಗಳು ತಂದಿಲ್ಲ ಎಂದು ತಿಳಿಸಿದರು.

ಸಂತ್ರಸ್ತರಿಗೆ ಮುದ್ರಾಂಕ ಶುಲ್ಕ ವಿನಾಯಿತಿ ನಾಲ್ಕು ವರ್ಷಗಳ ಕಾಲ ಮಾತ್ರವಿದೆ. ವರ್ಷಗಳ ಗಡವು ತೆಗೆಯಬೇಕು. 1991ರಲ್ಲಿ ಬಾಗಲಕೋಟೆ ನಗರಸಭೆಗೆ ಸರ್ಕಾರ, ಲಿಖೀತ ಆದೇಶ ಹೊರಡಿಸಿ, ಮುಳುಗಡೆ ವ್ಯಾಪ್ತಿಗೆ ಬರುವ ಕಟ್ಟಡ, ಖಾಲಿ ನಿವೇಶನ ಸಹಿತ ನಗರದಲ್ಲಿ ಭೂ ಕಂದಾಯ ತೆರಿಗೆ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು ಎಂದು ಆದೇಶ ಹೊರಡಿಸಿತ್ತು. ಇದನ್ನು ಉಲ್ಲಂಘಿಸಿ, ಮುಳುಗಡೆ ವ್ಯಾಪ್ತಿಯ ಜಾಗೆಗೂ ಭೂ ಕಂದಾಯ ಹೆಚ್ಚಳ ಮಾಡಲಾಗಿದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಮೀಸಲಾತಿ ಕಲ್ಪಿಸಿದೆ. ಆದರೆ, ಇದನ್ನು ಜೆಓಡಿಸಿ, ಐಟಿಐ, ಡಿಪ್ಲೋಮಾ ಶಿಕ್ಷಣಕ್ಕೆ ಮಾತ್ರ ಸಿಮೀತಗೊಳಿಸಿದೆ. ಸರ್ಕಾರ ಶಿಕ್ಷಣ ಮೀಸಲಾತಿ ವ್ಯಾಖ್ಯಾನ ಬದಲಿಸಿ, ಎಲ್ಲ ರೀತಿಯ ಶಿಕ್ಷಣಕ್ಕೂ ಮೀಸಲಾತಿ ಕಲ್ಪಿಸಬೇಕು. ಯುಕೆಪಿಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಡುಗಡ್ಡೆ ಹೋರಾಟ ಸಮಿತಿಯ ಅಧ್ಯಕ್ಷ ಎ.ಎ. ದಂಡಿಯಾ, ಸಹ ಕಾರ್ಯದರ್ಶಿ ದೀಪಕ ಹಂಚಾಟೆ, ಪ್ರಮುಖರಾದ ವೀರಣ್ಣ ಹೊಸೂರ, ಅಶೋಕ ಘಾಟಗೆ ಉಪಸ್ಥಿತರಿದ್ದರು.

ಶಾಸಕರ ಭೇಟಿ: ಇದೇ ವೇಳೆ ಶಾಸಕ ಡಾ|ವೀರಣ್ಣ ಚರಂತಿಮಠ ಕೂಡ, ಯುಕೆಪಿ ನೂತನ ಆಯುಕ್ತ ಎನ್‌. ಜಯರಾಮ್‌ ಅವರನ್ನು ಭೇಟಿ ಮಾಡಿ, ಜಿಲ್ಲೆಗೆ ಬರಮಾಡಿಕೊಂಡರು. ನಡುಗಡ್ಡೆ ಸಹಿತ ಸಂತ್ರಸ್ತರ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.