22ರಂದು ವಿಕ್ರಮಾದಿತ್ಯ ವೀಕ್ಷಣೆಗೆ ಮುಕ್ತ ಅವಕಾಶ
Team Udayavani, Dec 18, 2019, 2:46 PM IST
ಕಾರವಾರ: ಪ್ರಸಕ್ತ ಸಾಲಿನ ನೌಕಾ ಸಪ್ತಾಹ ಆಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಡಿ.22 ರಂದು ಭಾರತೀಯ ನೌಕಾ ಹಡಗು ವಿಕ್ರಮಾದಿತ್ಯ ವೀಕ್ಷಣೆಗೆ, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ವೀಕ್ಷಕರ ಅನುಕೂಲಕ್ಕಾಗಿ ಕೆಲವು ಭದ್ರತಾ ನಿಯಮಗಳು ಜಾರಿಯಲ್ಲಿದ್ದು, ಅರಗಾ ಮುಖ್ಯ ಗೇಟ್ನಿಂದ ಮಾತ್ರ ಒಳಪ್ರವೇಶಕ್ಕೆ ಅನುಮತಿಯಿದೆ. ವೀಕ್ಷಕರು ತಮ್ಮ ಗುರುತಿನ ಚೀಟಿಗಳಾದ ಆಧಾರ್, ಮತದಾರರ ಗುರುತಿನ ಚೀಟಿ, ಸರ್ಕಾರದಿಂದ ನೀಡಿದ ಯಾವುದೇ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರತಕ್ಕದ್ದು. ನೌಕಾನೆಲೆ ಒಳಗೆ ಮೊಬೈಲ್, ಕ್ಯಾಮೆರಾ, ಆಡಿಯೋ ಅಥವಾ ವಿಡಿಯೋ ರೆಕಾರ್ಡಿಂಗ್ ಸಾಧನ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ತಮ್ಮ ವಾಹನಗಳನ್ನುನಿಗದಿಪಡಿಸಿದ ಸ್ಥಳದಲ್ಲಿಯೇ ನಿಲ್ಲಿಸಬೇಕು. ಯಾವುದೇ ಕಾರಣಕ್ಕೂ ನೌಕಾನೆಲೆ ಒಳಗಡೆ ವಾಹನ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಎಂದು ಐಎನ್ ಎಸ್ ಕದಂಬ ನೌಕಾನೆಲೆ ಸಾರ್ವಜನಿಕ ಸಂಪರ್ಕಾಧಿಕಾರಿ ಅಜಯ್ ಕಪೂರ್ ತಿಳಿಸಿದ್ದಾರೆ. ವೀಕ್ಷಕರು ನೌಕಾಪಡೆ ಅಧಿಕಾರಿಗಳೊಂದಿಗೆ ಸಹಕರಿಸಿ ಸಪ್ತಾಹ ಆಚರಣೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರವಾರ ನೌಕಾನೆಲೆ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ