ರೈತರ ಸಾಲ ಮನ್ನಾ ಮಾಡಿದ್ದಕ್ಕೆ ಕುಮಾರಣ್ಣಗೆ ಅನ್ನದಾತ ನೀಡಿದ ವಿಶೇಷ ಉಡುಗೊರೆ ಏನು ?


Team Udayavani, Dec 18, 2019, 7:06 PM IST

xc-4

ಬೆಂಗಳೂರು: ರಾಜ್ಯದ ರೈತರ ಸುಮಾರು 46 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಕುಮಾರಣ್ಣರಿಗೆ ಉತ್ತರ ಕರ್ನಾಟಕದ ನೇಗಿಲಯೋಗಿಯೊಬ್ಬರು ವಿಶೇಷ ಉಡುಗೊರೆ ನೀಡಿದ್ದಾರೆ.  ಆ ರೈತ ನೀಡಿದ ಉಡುಗೊರೆ ಸ್ವೀಕರಿಸಿದ ಮಾಜಿ ಸಿಎಂ ಕುಮಾರಸ್ವಾಮಿಯವರು ಭಾವುಕರಾಗಿದ್ದಾರೆ.

ಏನಿದು ಘಟನೆ ?:
ಧಾರವಾಡ ಜಿಲ್ಲೆ ಹುಬ್ಬಳಿ ತಾಲೂಕ್ ಕಿರೇಸೂರ ಗ್ರಾಮದ ಗೋವಿಂದಪ್ಪ ಶ್ರೀ ಹರಿ ಅನ್ನೋ ರೈತ ಸಾಲಬಾಧೆಯಿಂದ ನೇಣಿಗೆ ಕೊರಳೊಡ್ಡುವ ಪರಿಸ್ಥಿತಿ ತಂದುಕೊಂಡಿದ್ದರು. ಈ ಸಂಧರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಸಾಲ ಹೆಚ್ಚಳದಿಂದ ಆತ್ಮಹತ್ಯೆ ಮಾಡಿಕೊಳ್ಳುವ ತೀರ್ಮಾನ ಮಾಡಿದ್ದೇನೆಂದು ಪತ್ರ ಬರೆದಿದ್ದರು. ಆ ರೈತ ಬರೆದಿದ್ದ ಪತ್ರದಲ್ಲಿದ್ದ ಫೋನ್ ನಂಬರ್ ಗೆ ತಕ್ಷಣವೇ ಫೋನಾಯಿಸಿದ್ದ ಅಂದಿನ ಸಿಎಂ ಹೆಚ್ಡಿಕೆ ಸಾಲ ಮನ್ನಾ ಆಗುತ್ತೆ, ಆತ್ಮಹತ್ಯೆಯಂತಹ ನಿರ್ಧಾರ ಮಾಡಬಾರದೆಂದು ರೈತ ಗೋವಿಂದಪ್ಪ ಶ್ರೀ ಹರಿಯವರಿಗೆ ಫೋನ್ ಮೂಲಕವೇ ಸಾಂತ್ವನ ಹೇಳಿದ್ದರು. ನಂತರ ಆ ರೈತರ ಸಾಲ ಮನ್ನ ಆಯಿತು.

ಅಷ್ಟರಲ್ಲಿ ಕುಮಾರಸ್ವಾಮಿಯವರು ರಾಜಕೀಯ ಸ್ಥಿತ್ಯಂತರಗಳ ನಡುವೆ ಅಧಿಕಾರ ಕಳೆದುಕೊಂಡರು. ಆದರೆ ಕುಮಾರಸ್ವಾಮಿಯವರು ಹೇಳಿದ ಸಾಂತ್ವನ ಮತ್ತು ಸಾಲ ಮನ್ನಾ ಮಾಡಿದ್ದನ್ನ ಸ್ಮರಣೆ ಮಾಡಿದ ರೈತ ತನ್ನ ಹೊಲದಲ್ಲಿ ಜೋಳಾ, ಶೇಂಗಾ ಬೆಳೆದು ಬದುಕು ಕಟ್ಟಿಕೊಂಡರು. ತಮ್ಮ‌ ಹೊಲದಲ್ಲಿ ಬೆಳೆದ ಬೆಳೆಯಲ್ಲಿ ಜೋಳದ ರೊಟ್ಟಿ , ಶೇಂಗಾ ಚಟ್ನಿ ಪುಡಿ, ಡ್ರೈ ಪಲ್ಯಾವನ್ನ ತಯಾರು ಮಾಡಿ ಒಂದೊ ದೊಡ್ಡ ಬಾಕ್ಸ್ ಮೂಲಕ‌ ಮಾಜಿ ಸಿಎಂ ಕುಮಾರಸ್ವಾಮಿಯವರ ಜೆಪಿ ನಗರ ನಿವಾಸಕ್ಕೆ ಕೊರಿಯರ್ ಮಾಡಿ ವಿಶೇಷ ಕೃತಜ್ಞತೆಗಳನ್ನ ಹೆಚ್ಡಿಕೆಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಉಡುಗೊರೆ ಬಾಕ್ಸ್ ನೋಡಿದ ಮಾಜಿ ಸಿಎಂ ಹೆಚ್ಡಿಕೆ ಭದ್ರತಾ ಸಿಬ್ಬಂದಿ ಸಂಪೂರ್ಣ ಪರಿಶೀಲಿಸಿದಾಗ ಜೋಳದರೊಟ್ಟಿ, ಶೇಂಗಾ ಚಟ್ನಿಪುಡಿ, ಡ್ರೈ ಪಲ್ಯಾ ಮತ್ತು ರೈತ ಗೋವಿಂದಪ್ಪ ಶ್ರೀ ಹರಿಯವರ ಕೃತಜ್ಞತಾ ಪತ್ರ ಇರುವುದರ ಬಗ್ಗೆ ಹೆಚ್ಡಿಕೆ ಗಮನಕ್ಕೆ ತಂದಿದ್ದಾರೆ. ರೈತ ಗೋವಿಂದಪ್ಪ ಶ್ರೀಹರಿಯವರ ವಿಶೇಷ ಉಡುಗೊರೆಯ ಬಗ್ಗೆ ಹೆಚ್ಡಿಕೆ ರೈತ ಗೋವಿಂದಪ್ಪ ಶ್ರೀಹರಿಯವರಂತಹ ರೈತರೇ ನನ್ನ ರಾಜಕೀಯ ಜೀವನಕ್ಕೆ ಸ್ಪೂರ್ತಿ ಎಂದು ಭಾವುಕರಾದರು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.