ಮಾಸಾಂತ್ಯಕ್ಕೆ ಮೋದಿ, ಶಾ ಭೇಟಿ: ಬಿಎಸ್ವೈ
Team Udayavani, Dec 19, 2019, 3:04 AM IST
ಹುಬ್ಬಳ್ಳಿ: ಪಕ್ಷಕ್ಕೆ ಬೆಂಬಲ ಕೊಟ್ಟು ಉಪಚುನಾವಣೆಯಲ್ಲಿ ಗೆದ್ದಿರುವ ಎಲ್ಲ 12 ಶಾಸಕರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರನ್ನೆಲ್ಲ ಸಚಿವರನ್ನಾಗಿ ಮಾಡಲಾಗುವುದೆಂದು ಪಕ್ಷದ ಮುಖಂಡರು ಭರವಸೆ ಕೊಟ್ಟಿದ್ದಾರೆ.
ಹೀಗಾಗಿ, ತಿಂಗಳಾಂತ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ ಮೇಲೆ ಅವರ ಭರವಸೆ ಈಡೇರಿಸುತ್ತೇವೆ ಎಂದರು. ಪ್ರಧಾನಿ ಮೋದಿ ಜ.2ರಂದು ಬೆಂಗಳೂರಿಗೆ ಬಂದು ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು, 3ರಂದು ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅದನ್ನು ತುಮಕೂರು ಇಲ್ಲವೆ ಬೇರೆಡೆ ಮಾಡಬೇಕೆಂಬ ಚರ್ಚೆ ನಡೆದಿದೆ. ಆ ಕುರಿತು ಪ್ರಧಾನಿ ಕಚೇರಿ ಸಂಪರ್ಕದಲ್ಲಿದ್ದು, ಅಂತಿಮವಾಗಿ ಕಾರ್ಯಕ್ರಮ ಸ್ಥಳ ನಿಗದಿಪಡಿಸಲಾಗುವುದು ಎಂದರು.
ಬಿಎಸ್ವೈ ಕಾರ್ಯಕ್ರಮದಲ್ಲಿ “ರಾಜಾ ಹುಲಿ’ ಸದ್ದು: ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಬುಧವಾರ ಯಡಿಯೂರಪ್ಪ ಅವರಿದ್ದ ಕಾರ್ಯಕ್ರಮದಲ್ಲಿ ಮತ್ತೆ “ಹುಲಿಯಾ’ ಕೂಗು ಕೇಳಿ ಬಂತು. ಆದರೆ, ಈ ಸಲ “ಹೌದು ಹುಲಿಯಾ’ ಬದಲು ಅದು “ರಾಜಾ ಹುಲಿ’ ಎಂದಾಗಿತ್ತು. ಕಾರ್ಯಕ್ರಮದಲ್ಲಿ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಭಾಷಣ ಮಾಡುವಾಗ, ಚನ್ನಬಸಪ್ಪ ಜಂಬಗಿ ಎಂಬಾತ ಕುಡಿದ ಅಮಲಿನಲ್ಲಿ “ರಾಜಾ ಹುಲಿ..ರಾಜಾ ಹುಲಿ’ ಎಂದು ಕೂಗು ಹಾಕಿದ. ಆಗ, ಮುನೇನಕೊಪ್ಪ ಅವರು, ನಮ್ಮ ಅಭಿಮಾನಿ ಹೋಗಲಿ ಬಿಡು ಎಂದು ಸಮಾಧಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು