ಅನ್ಯಭಾಷೆಯ ನಾಮಫ‌ಲಕ ತೆರವು


Team Udayavani, Dec 19, 2019, 3:08 AM IST

anyabhasheya

ಬೆಂಗಳೂರು: ನಾಮಫ‌ಲಕಗಳಲ್ಲಿ ಶೇ 60 ಕನ್ನಡ ಅಳವಡಿಸಿಕೊಳ್ಳುವಂತೆ ನೋಟಿಸ್‌ ಜಾರಿ ಮಾಡಿದರೂ ಎಚ್ಚೆತ್ತುಕೊಳ್ಳದ ಉದ್ದಿಮೆಗಳ ನಾಮಫ‌ಲಕ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಅಧಿಕಾರಿಗಳು ಬುಧವಾರ ನಡೆಸಿದರು. ಜಯನಗರ ಮಾರುಕಟ್ಟೆ, ಬಸವನಗುಡಿ, ಚಿಕ್ಕಪೇಟೆ, ವಿಜಯನಗರ, ಪದ್ಮನಾಭನಗರ, ಕೋರಮಂಗಲ, ಜಯನಗರ, ರಾಜಾಜಿನಗರದ ಓರಾಯನ್‌ ಮಾಲ್‌ ಸೇರಿದಂತೆ ವಿವಿಧ ಕಡೆ ಕಾರ್ಯಾಚರಣೆ ನಡೆಸಿ ಆರೋಗ್ಯಾಧಿಕಾರಿಗಳು ಒಟ್ಟು 207 ಮಳಿಗೆಗಳ ಅನ್ಯಭಾಷೆಯ ನಾಮಫ‌ಲಕ ತೆರವು ಮಾಡಿದ್ದಾರೆ.

ಅಧಿಕಾರಿಗಳೊಂದಿಗೆ ವ್ಯಾಪಾರಿಗಳ ವಾಗ್ವಾದ: ನಾಮಫ‌ಲಕ ತೆರವು ಕಾರ್ಯಾಚರಣೆ ವಾಗ್ವಾದಕ್ಕೂ ಕಾರಣವಾಯಿತು. ಜಯನಗರದಲ್ಲಿ ಆರೋಗ್ಯಾಧಿಕಾರಿ ಭಾಗ್ಯಲಕ್ಷ್ಮಿ ನೇತೃತ್ವದಲ್ಲಿ ಬುಧವಾರ ನಾಮಫ‌ಲಕ ತೆರವು ಕಾರ್ಯಾಚರಣೆ ನಡೆಯಿತು. ಈ ವೇಳೆ ಅನ್ಯ ಭಾಷೆಯ ನಾಮಫ‌ಲಕ ತೆರವು ಮಾಡದಂತೆ ವ್ಯಾಪಾರಿಗಳು ಬಿಬಿಎಂಪಿ ಅಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಇಳಿದರು. ಇನ್ನು ರಾಜಾಜಿನಗರ ಓರೆಯನ್‌ ಮಾಲ್‌ನಲ್ಲಿ ಆರೋಗ್ಯಾಧಿಕಾರಿ ಬಾಲಚಂದ್ರ ನೇತೃತ್ವದಲ್ಲಿ ಬಿಬಿಎಂಪಿ ಅಧಿಕಾರಿಗಳು ತಪಾಸಣೆ ನಡೆಸಿದರು.

ಈ ವೇಳೆ ಮಾಲ್‌ನ ನೆಲ ಮಹಡಿಯಲ್ಲಿ ಮಾತ್ರ 30 ಮಳಿಗೆಗಳಲ್ಲಿ ಕನ್ನಡ ನಾಮಫ‌ಲಕ ಅಳವಡಿಕೆ ಮಾಡಿಕೊಂಡಿದ್ದು, ಹಲವು ಮಳಿಗೆಗಳು ಕನ್ನಡ ನಾಮಫ‌ಲಕ ಅಳವಡಿಸಿಕೊಳ್ಳದೆ ಇರುವುದು ಬೆಳಕಿಗೆ ಬಂದಿದೆ. ಅವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಆರೋಗ್ಯಾಧಿಕಾರಿ ಬಾಲಚಂದ್ರ ತಿಳಿಸಿದ್ದಾರೆ.

ಸ್ಥಳ ನೋಟಿಸ್‌ ನೀಡಲಾಗಿರುವ ಉದ್ದಿಮೆ ನಾಮಫ‌ಲಕ ತೆರವು
ಜಯನಗರ 118 58
ವಿಜಯನಗರ 133 17
ಪದ್ಮನಾಭನಗರ 55 30
ಬಿಟಿಎಂ ಲೇಔಟ್‌ 60 18
ಚಿಕ್ಕಪೇಟೆ 150 52
ಒಟ್ಟು 586 207

ಪರವಾನಗಿ ಇಲ್ಲದ ಉದ್ದಿಮೆಗಳಿಗೆ ನೋಟಿಸ್‌
ಬೆಂಗಳೂರು: ಪಾಲಿಕೆ ಈಗ ನಗರದ ಎಲ್ಲ ಉದ್ದಿಮೆಗಳಿಗೂ ನಾಮಫ‌ಲಕಗಳಲ್ಲಿ ಶೇ 60 ಕನ್ನಡಕ್ಕೆ ಆದ್ಯತೆ ಕೊಡುವಂತೆ ನೋಟಿಸ್‌ ನೀಡುತ್ತಿದ್ದು, ಇದರಲ್ಲಿ ಉದ್ದಿಮೆ ಪರವಾನಗಿ ಪಡೆಯದೆ ವ್ಯಾಪಾರ ನಡೆಸುತ್ತಿರುವ ಮಾಲೀಕರೂ ಇದ್ದಾರೆ. ಬಿಬಿಎಂಪಿಯಿಂದ ಅಧಿಕೃತವಾಗಿ 48 ಸಾವಿರ ಉದ್ದಿಮೆಗಳು ಪರವಾನಗಿ ಪಡೆದಿವೆ. ಆದರೆ, ನಗರದಲ್ಲಿ ಲಕ್ಷಾಂತರ ಅನಧಿಕೃತ ಮಳಿಗೆಗಳಿವೆ. ಈಗ ಬಿಬಿಎಂಪಿ ಅಧಿಕೃತ, ಅನಧಿಕೃತ ಎಂದು ನೋಡದೆ ಎಲ್ಲ ಮಳಿಗೆಗಳಿಗೂ ನೋಟಿಸ್‌ ನೀಡುತ್ತಿದೆ.

ಪಾಲಿಕೆಯ ಅಧಿಕಾರಿಗಳು ನಗರದಲ್ಲಿ ಎಲ್ಲ ಉದ್ದಿಮೆಗಳಿಗೂ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಮಾಡಿದ ನಾಮಫ‌ಲಕಗಳನ್ನು ಅಳವಡಿಕೆ ಮಾಡುವಂತೆ ನೋಟಿಸ್‌ ಜಾರಿ ಮಾಡುತ್ತಿದ್ದಾರೆ. ನಾಮಫ‌ಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡದಿದ್ದರೆ, ಪರವಾನಿಗೆ ರದ್ದು ಪಡಿಸಲಾಗುವುದು ಎಂದು ಪಾಲಿಕೆ ಸೂಚಿಸಿತ್ತು. ಆದರೆ, ಪರವಾನಗಿ ಪಡೆದು ಉದ್ದಿಮೆ ನಡೆಸುತ್ತಿರುವುದಕ್ಕಿಂತ ಹೆಚ್ಚಿನ ಸಂಖ್ಯೆಉದ್ದಿಮೆಗಳು ಅನಧಿಕೃತವಾಗಿ ನಡೆಯುತ್ತಿರುವುದರಿಂದ ಎಲ್ಲ ಉದ್ದಿಮೆಗಳ ಮಾಲೀಕರಿಗೂ ನೋಟಿಸ್‌ ನೀಡಲಾಗುತ್ತಿದೆ ಎಂದು ಬಿಬಿಎಂಪಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

-48,440 ಬಿಬಿಎಂಪಿಯಿಂದ ಪರವಾನಗಿ ಪಡೆದಿರುವ ಉದ್ದಿಮೆಗಳು
-55 ಸಾವಿರ ನೋಟಿಸ್‌ ನೀಡಲಾಗಿರುವ ಉದ್ದಿಮೆಗಳು

ಅಧಿಕೃತ ಪರವಾನಗಿ ಪಡೆದ ಉದ್ದಿಮೆಗಳ ವಿವರ (ನ.30)
ವಲಯ ಪರವಾನಗಿ ಉದ್ದಿಮೆ ಪರಿಶೀಲಿಸಿರುವ ಉದ್ದಿಮೆ ನೋಟಿಸ್‌ಜಾರಿ ಮಾಡಿದ ಉದ್ದಿಮೆ ಕನ್ನಡ ನಾಮಫ‌ಲಕ ಅಳವಡಿಸಿಕೊಂಡ ಉದ್ದಿಮೆ
ದಕ್ಷಿಣ 11,044 9,310 6,850 2,460
ಪೂರ್ವ 8,293 7,933 5,882 2,051
ಪಶ್ಚಿಮ 13,487 9,820 2,846 6,974
ಯಲಹಂಕ 4,770 3,760 3,182 578
ಮಹದೇವಪುರ 5,046 4,965 2,273 2,692
ಬೊಮ್ಮನಹಳ್ಳಿ 3,047 3,525 2,712 813
ದಾಸರಹಳ್ಳಿ 2,434 2,467 528 1,939
ಆರ್‌ಆರ್‌ನಗರ 319 956 656 300
ಒಟ್ಟು 48,440 42,736 24,929 17,807

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.