ಸ್ವಲ್ಪ 2003ರ ವಿಡಿಯೋ ವೀಕ್ಷಿಸಿ….ಪೌರತ್ವ ಕಾಯ್ದೆ ವಿರೋಧಿ ಕಾಂಗ್ರೆಸ್ ಗೆ BJP ತಿರುಗೇಟು!
Team Udayavani, Dec 19, 2019, 4:16 PM IST
ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತೀಯ ಜನತಾ ಪಕ್ಷ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2003ರಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿರುವ ವೀಡಿಯೋವನ್ನು ಬಹಿರಂಗಗೊಳಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದೆ.
2003ರಲ್ಲಿ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಮನಮೋಹನ್ ಸಿಂಗ್ ಮಾತನಾಡಿದ್ದರು. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾಯ್ದೆ ಅಗತ್ಯವಾಗಿದೆ ಎಂದು ಹೇಳಿದ್ದರು.
ಮನಮೋಹನ್ ಸಿಂಗ್ ಪೌರತ್ವ ಕಾಯ್ದೆ ಬಗ್ಗೆ ಮಾತನಾಡಿರುವ ವಿಡಿಯೋ ಫೂಟೇಜ್ ಅನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅಂದು ರಾಜ್ಯಸಭೆಯಲ್ಲಿ ಮಾತನಾಡಿದ್ದ ವಿಪಕ್ಷ ನಾಯಕ ಸಿಂಗ್, ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಬಗ್ಗೆ ಉದಾರತೆ ಬೇಕಾಗಿದೆ. ನೆರೆಯ ದೇಶಗಳಾದ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳ ಎದುರಿಸುತ್ತಿರುವ ಅಲ್ಪಸಂಖ್ಯಾತರಿಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಅಗತ್ಯವಾಗಿದೆ ಎಂದು ಹೇಳಿದ್ದ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿದೆ.
“ ಈ ವಿಚಾರವಾಗಿ ಮೇಡಂ ನಾನು ನಿರಾಶ್ರಿತರ ಕುರಿತು ಸ್ವಲ್ಪ ಮಾತನಾಡಬೇಕಾಗಿದೆ. ನಮ್ಮ ದೇಶ ಇಬ್ಭಾಗವಾದ ನಂತರ ಬಾಂಗ್ಲಾದೇಶದಂತಹ ದೇಶಗಳಲ್ಲಿ ಅಲ್ಪಸಂಖ್ಯಾತರ (ಹಿಂದೂ, ಸಿಖ್, ಬೌದ್ಧ, ಪಾರ್ಸಿ) ಸಮುದಾಯಗಳು ಕಿರುಕುಳವನ್ನು ಅನುಭವಿಸಿತ್ತು. ಹೀಗಾಗಿ ಬಲವಂತಕ್ಕೊಳಗಾದ, ದುರದೃಷ್ಟ ಜನರಿಗಾಗಿ ಈ ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಅವರಿಗೆ ಅವಕಾಶ ಕಲ್ಪಿಸುವುದು ನೈತಿಕ ಹೊಣೆಗಾರಿಕೆಯಾಗಿದೆ. ಇಂತಹ ನತದೃಷ್ಟ ಜನರಿಗೆ ಪೌರತ್ವ ನೀಡುವುದು ಹೆಚ್ಚು ಉದಾರಿತನದ್ದಾಗಿದೆ ಎಂದು ಸಿಂಗ್ ಹೇಳಿದ್ದರು.
In 2003, speaking in Rajya Sabha, Dr Manmohan Singh, then Leader of Opposition, asked for a liberal approach to granting citizenship to minorities, who are facing persecution, in neighbouring countries such as Bangladesh and Pakistan. Citizenship Amendment Act does just that… pic.twitter.com/7BOJJMdkKa
— BJP (@BJP4India) December 19, 2019
ಗೌರವಾನ್ವಿತ ಉಪಪ್ರಧಾನಿ (ಎಲ್ ಕೆ ಅಡ್ವಾಣಿ)ಯವರು ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಆತ್ಮೀಯ ಭರವಸೆ ನನ್ನದಾಗಿದೆ ಎಂದು ಸಿಂಗ್ ಅಭಿಪ್ರಾಯವ್ಯಕ್ತಪಡಿಸಿದ್ದರು. ಈ ವಿಡಿಯೋವನ್ನು ಉಪಯೋಗಿಸಿಕೊಂಡ ಬಿಜೆಪಿ, ಪೌರತ್ವ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕಟುವಾಗಿ ಪ್ರಶ್ನಿಸಿದೆ. ಅಲ್ಲದೇ ಕಾಂಗ್ರೆಸ್ ಮುಖಂಡರೊಬ್ಬರು ಪೌರತ್ವ ಕಾಯ್ದೆ ವಿರುದ್ದ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿರುವುದಾಗಿ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ