ವಿವಾದಿತ ರಸ್ತೆಯಲ್ಲಿ ಗ್ರಾಮದೇವತೆ ಮೆರವಣಿಗೆಗೆ ಅಡ್ಡಿ

ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ „ ನಗರಕೆರೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಹತೋಟಿಗೆ

Team Udayavani, Dec 19, 2019, 5:27 PM IST

19-December-26

ಮಂಡ್ಯ/ಮದ್ದೂರು: ವಿವಾದಿತ ರಸ್ತೆಯಲ್ಲಿ ಗ್ರಾಮ ದೇವತೆ ಮೆರವಣಿಗೆ ನಡೆಸುವ ವಿಚಾರವಾಗಿ ಗ್ರಾಮಗಳ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದ ಬಿಗುವಿನ ಪರಿಸ್ಥಿತಿ ಉಂಟಾದ ಘಟನೆ ತಾಲೂಕಿನ ನಗರಕೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೆಯೂ ಎರಡು ಗುಂಪುಗಳ ನಡುವೆ ವಿವಾದ ಏರ್ಪಟ್ಟಿದ್ದು, ಅಂತಿಮವಾಗಿ ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್‌ ಗಾಮ ಪಂಚಾಯಿತಿಗೆ ಆದೇಶ ನೀಡಿತ್ತು.

ಕರಗ ಮೆರವಣಿಗೆ: ವಿವಾದದ ನಡುವೆಯೂ ಬುಧವಾರ ನಗರಕೆರೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕಾಳಮ್ಮ ದೇವಿಯ ದೇಗುಲ ಪ್ರತಿಷ್ಠಾಪನೆ ಅಂಗವಾಗಿ 48 ದಿನಗಳ ಮಂಡಲಪೂಜೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ದೊಡ್ಡರಸಿನಕೆರೆ ಸಣ್ಣಕ್ಕಿರಾಯ ಬಸವ,
ರಾಮನಗರದ ಜೈಪುರದ ಶ್ರೀ ಚಾಮುಂಡೇಶ್ವರಿ, ದೇಶಹಳ್ಳಿಯ ಬಸವ, ನೀಲಕಂಠನಹಳ್ಳಿ ಶ್ರೀ ಮಾಯಮ್ಮ ಹಾಗೂ ನಗರಕೆರೆ ಶ್ರೀ ಚಿಕ್ಕಮ್ಮ ಕರಗ ಮೆರವಣಿಗೆ ಏರ್ಪಡಿಸಲಾಗಿತ್ತು.

ಗ್ರಾಮ ದೇವತೆಗಳು ಹಾಗೂ ಬಸವನ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ನಂತರ ಗ್ರಾಮಠಾಣಾ ವ್ಯಾಪ್ತಿಯ ವಿವಾದಿತ ರಾಜಬೀದಿ ರಸ್ತೆಗಳಲ್ಲಿ ತೆರಳಲು ಬಂದಾಗ ಪೊಲೀಸರು ಮೆರವಣಿಗೆಗೆ ಅಡ್ಡಿಪಡಿಸಿದರು. ಹೈಕೋರ್ಟ್‌ ಆದೇಶ ವಿರುವುದರಿಂದ ರಾಜಬೀದಿ ರಸ್ತೆಗಳಲ್ಲಿ ಮೆರವಣಿಗೆ ನಡೆಸದಂತೆ ತಾಕೀತು ಮಾಡಿದರು.

ಒಂದು ಗುಂಪಿನ ಮನವೊಲಿಕೆ: ವಿವಾದಿತ ರಸ್ತೆಯಲ್ಲಿ ಮೆರವಣಿಗೆ ನಡೆಸುವುದರ ಕುರಿತು ಬೇರೆ ಮಾರ್ಗದಲ್ಲಿ ತೆರಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸತೀಶ್‌ ಬೆಂಬಲಿಗರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮೆರವಣಿಗೆಯಲ್ಲಿ ಬಂದಿದ್ದ ಬಸವಗಳನ್ನು ಉದ್ರಿಕ್ತ ಗುಂಪು ವಿವಾದಿತ ರಸ್ತೆಗೆ ತೆರಳಿಸುವುದಕ್ಕೆ ಯತ್ನಿಸಿದರು. ಈ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಆದರೂ ತಾಳ್ಮೆ ಕಳೆದುಕೊಳ್ಳದ ಪೊಲೀಸರು ಗ್ರಾಪಂ ಸದಸ್ಯ ಸತೀಶ್‌ ಬೆಂಬಲಿಗರ ಗುಂಪಿನ ಮನವೊಲಿಸುವಲ್ಲಿ ಯಶಸ್ವಿಯಾದರು. ವಿವಾದಿತ ರಸ್ತೆ ಬಿಟ್ಟು
ಬೇರೆ ಮಾರ್ಗದಲ್ಲಿ ಮೆರವಣಿಗೆ ನಡೆಸುವಂತೆ ಸೂಚಿಸಿದರು. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದು ದೇಗುಲದ ಬಳಿ ಅಂತ್ಯ ಗೊಂಡಿತು. ಮುಂಜಾಗ್ರತಾ ಕ್ರಮವಾಗಿ ಡಿವೈಎಸ್ಪಿ ಪೃಥ್ವಿಕುಮಾರ್‌ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋ ಬಸ್ತ್ ಮಾಡಲಾಗಿದ್ದು, ಪರಿಸ್ಥಿತಿ ಶಾಂತವಾಗಿದೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.