ಅನುಷ್ಠಾನಕ್ಕೆ ಗ್ರಾ.ಪಂ. ವಿರೋಧ; ನೀರು ಕೊಡುತ್ತೇವೆ ಎಂದರೂ ಕೇಳದ ಸ್ಥಳೀಯರು !

ಸಜಿಪಮುನ್ನೂರು: ನೀರಿನ ಯೋಜನೆ

Team Udayavani, Dec 20, 2019, 5:51 AM IST

1912KS3-PH

ಬಂಟ್ವಾಳ: ಉಳ್ಳಾಲ, ಕೋಟೆಕಾರು ನಗರ ಸ್ಥಳೀಯಾಡಳಿತ ಸಹಿತ 25 ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಯೋಜನೆಯೊಂದಕ್ಕೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯೂ ಎಸ್‌ಡಿಬಿ)ಮಂಗಳೂರು ಉಪವಿಭಾಗವು ಬಂಟ್ವಾಳ ತಾಣ ಸಜಿಪಮುನ್ನೂರು ಗ್ರಾಮದ ಆಲಾಡಿಯಲ್ಲಿ ಜಾಕ್‌ವೆಲ್‌ ನಿರ್ಮಾಣಕ್ಕೆ ಉದ್ದೇಶಿಸಿದೆ. ಆದರೆ ಆದಕ್ಕೆ ಸಜೀಪ ಮುನ್ನೂರು ಗ್ರಾ.ಪಂ.ಸೇರಿದಂತೆ ಸ್ಥಳೀಯರ ವಿರೋಧ ವ್ಯಕ್ತವಾಗಿದೆ.

ಅಧಿಕಾರಿಗಳು ಗ್ರಾಮಕ್ಕೆ ನೀರು ಕೊಡುತ್ತೇವೆ ಎಂದರೂ ಗ್ರಾಮಸ್ಥರು ಒಪ್ಪಿಕೊಳ್ಳುತ್ತಿಲ್ಲ. ನೇತ್ರಾವತಿ ನದಿ ಕಿನಾರೆಯಲ್ಲೇ ವಿಸ್ತರಿಸಿಕೊಂಡಿರುವ ಸಜೀಪಮುನ್ನೂರು ಗ್ರಾಮವು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ನಮ್ಮ ಗ್ರಾಮದಿಂದಲೇ ಇತರ ಗ್ರಾಮಗಳಿಗೆ ನೀರನ್ನು ಪೂರೈಕೆ ಮಾಡಲಾಗುತ್ತಿದ್ದರೂ ನಮಗೆ ನೀರು ನೀಡುತ್ತಿಲ್ಲ ಎಂಬುದು ಸ್ಥಳೀಯರ ವಾದ.

ಈ ಹಿಂದೆ ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುವ ಸಂದರ್ಭದಲ್ಲೂ ಸಜೀಪ ಮುನ್ನೂರಿಗೆ ನೀರು ಕೊಡುತ್ತೇವೆ ಎಂದು ಹೇಳಿ ಬಳಿಕ ನೀರು ಕೊಟ್ಟಿಲ್ಲ. ಹೀಗಾಗಿ ಈ ಬಾರಿಯೂ ಅದೇ ರೀತಿ ಆಗುತ್ತದೆ ಎಂಬುದು ಸಜೀಪಮುನ್ನೂರು ಜನರ ಆರೋಪ.

ಬೇಡಿಕೆಗಳೇನಿದೆ ?
ಪ್ರಸ್ತುತ ನೂತನ ಕುಡಿಯುವ ನೀರಿನ ಯೋಜನೆಯಲ್ಲಿ ಸಜೀಪಮುನ್ನೂರು ಸೇರಿದಂತೆ ಬಂಟ್ವಾಳ ಕ್ಷೇತ್ರದ 5 ಗ್ರಾಮಗಳು ಸೇರಿದೆ ಎಂದು ಹೇಳಿದರೂ ಸ್ಥಳೀಯರು ಅದನ್ನುಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಕೆಲವು ಬೇಡಿಕೆಗಳನ್ನು ನಿಗಮದ ಮುಂದಿಟ್ಟಿದ್ದಾರೆ.

ಅಂದರೆ ಸಜೀಪಮುನ್ನೂರಿನ ಆಲಾ ಡಿಯ ಜಾಕ್‌ವೆಲ್‌ನಿಂದ ಮುಡಿಪಿನ ಶುದ್ಧೀಕರಣ ಘಟಕಕ್ಕೆ ನೀರು ಪೂರೈಕೆಗೆ ಹಾಕುವ ಪೈಪ್‌ಲೈನ್‌ನ ಜತೆಗೇ ಅಲ್ಲಿಂದ ಸಜೀಪಮುನ್ನೂರಿಗೆ ನೀರು ಬರುವ ಪೈಪ್‌ಲೈನನ್ನೂ ಕೂಡ ಅಳವಡಿಸಬೇಕು.

ಇಲ್ಲದೇ ಇದ್ದರೆ ಸಜೀಪಮುನ್ನೂರಿನಲ್ಲೇ ಪ್ರತ್ಯೇಕ ಶುದ್ಧೀಕರಣ ಘಟಕ ಮಾಡುವಂತೆ ಆಗ್ರಹಿಸಿದ್ದಾರೆ. ಜತೆಗೆ ಪೈಪ್‌ಲೈನ್‌ಗೆ ಅಗೆಯುವ ವೇಳೆ ರಸ್ತೆ ಚರಂಡಿಗೆ ಹಾನಿಯಾದರೆ ಅದನ್ನು ನಿಗಮವೇ ದುರಸ್ತಿ ಮಾಡಬೇಕು ಎಂಬುದು ಗ್ರಾ.ಪಂ.ನ ವಾದ.

ಆದರೆ ಈ ಬೇಡಿಕೆಯನ್ನು ಒಪ್ಪಿಕೊಳ್ಳುವುದಕ್ಕೆ ನಿಗಮದ ಅಧಿಕಾರಿಗಳು ಸಿದ್ಧವಿಲ್ಲ. ಅಧಿಕಾರಿಗಳು ಹೇಳುವ ಪ್ರಕಾರ ನಮ್ಮ ಯೋಜನೆಯಲ್ಲಿ ಮುಡಿಪಿನಲ್ಲಿ ಶುದ್ಧೀಕರಣ ಘಟಕಕ್ಕೆ ಮಾತ್ರ ಅವಕಾಶವಿದೆ. ಜತೆಗೆ ಮೊದಲ ಹಂತದಲ್ಲಿ ಶುದ್ಧೀಕರಣ ಘಟಕಕ್ಕೆ ನೀರು ಪೂರೈಕೆ ಮಾಡುವ ಪೈಪುಲೈನ್‌ ಮಾತ್ರ ಹಾಕಲಾಗುತ್ತದೆ ಎನ್ನುತ್ತಾರೆ.

5 ಗ್ರಾ.ಪಂ.ಗಳ ಸೇರ್ಪಡೆ
ಕುಡಿಯುವ ನೀರು ಪೂರೈಕೆಗೆ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಯ ಜತೆಗೆ ಪ್ರಸ್ತುತ ಬಂಟ್ವಾಳ ವ್ಯಾಪ್ತಿಯ ಸಜೀಪಮುನ್ನೂರು, ಸಜೀಪಮೂಡ, ವೀರಕಂಭ, ಬೋಳಂತೂರು ಹಾಗೂ ಮಂಚಿ ಗ್ರಾಮಗಳು ಸೇರ್ಪಡೆಯಾಗಿವೆ. ಈ ರೀತಿ ಒಟ್ಟು 25 ಗ್ರಾಮಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದು, ಅದಕ್ಕಾಗಿ ಸರ್ವೇ ನಡೆಸಿ ಡಿಪಿಆರ್‌ ಸಿದ್ಧಪಡಿಸಲು ಈಗಾಗಲೇ 30 ಲಕ್ಷ ರೂ.ಗಳನ್ನು ಸಂಬಂಧಪಟ್ಟ ನಿಗಮಕ್ಕೆ ಪಾವತಿಸಬೇಕಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಬಂಟ್ವಾಳ ಉಪವಿಭಾಗದ ಎಇಇ ಸಿ.ಮಹೇಶ್‌ ಅವರು ತಿಳಿಸಿದ್ದಾರೆ.

 ನೀರಿನ ಸಮಸ್ಯೆ ಸಾಕಷ್ಟಿದೆ
ಸಜೀಪಮುನ್ನೂರು ಗ್ರಾಮದಲ್ಲಿ ನೀರಿನ ಸಮಸ್ಯೆ ಸಾಕಷ್ಟಿದ್ದು, ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಪ್ರಸ್ತುತ 17 ಪಂಪುಗಳ ಮೂಲಕ ನೀರು ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ಹೀಗಾಗಿ ಇಲ್ಲಿನ ಗ್ರಾ.ಪಂ.ಆಡಳಿತ ಮಂಡಳಿ ಯೋಜನೆಯಲ್ಲಿ ಸಜೀಪಮುನ್ನೂರನ್ನು ಸೇರಿಸಿ ಗ್ರಾಮದ ನೀರಿನ ಸಮಸ್ಯೆ ಹೋಗಲಾಡಿಸುವಂತೆ ಪಕ್ಷಾತೀತವಾಗಿ ಒತ್ತಡ ಹಾಕುತ್ತಿದೆ.
 - ಪ್ರಕಾಶ್‌, ಅಭಿವೃದ್ಧಿ ಅಧಿಕಾರಿ, ಸಜಿಪಮುನ್ನೂರು ಗ್ರಾ.ಪಂ.

ಪ್ರತ್ಯೇಕ ಬೇಡಿಕೆ
ಹಿಂದೆ ಬಹುಗ್ರಾಮ ಯೋಜನೆಯಲ್ಲಿ ನೀರು ಕೊಟ್ಟಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ವಿವಿಧ ಬೇಡಿಕೆಗಳನ್ನಿಟ್ಟಿದ್ದಾರೆ. ಮೊದಲ ಹಂತದಲ್ಲೇ ಪೈಪ್‌ಲೈನ್‌, ಪ್ರತ್ಯೇಕ ಶುದ್ಧೀಕರಣ ಘಟಕಕ್ಕೆ ಬೇಡಿಕೆ ಇದ್ದು, ಆದರೆ ಅದರ ಅನುಷ್ಠಾನ ಕಷ್ಟಸಾಧ್ಯ. ಹೀಗಾಗಿ ಮುಂದೆ ಏನು ಎಂಬುದನ್ನು ತೀರ್ಮಾನಿಸಬೇಕಿದೆ.
-ಶೋಭಾಲಕ್ಷ್ಮೀ ಸಹಾಯಕ ಎಂಜಿನಿಯರ್‌, ಕೆಯುಡಬ್ಲ್ಯೂ ಎಸ್‌ಡಿಬಿ ಮಂಗಳೂರು

 ಅನುಕೂಲವಿಲ್ಲ
ಸಜೀಪಮುನ್ನೂರು ಗ್ರಾಮದಲ್ಲೇ ನೀರಿಗಾಗಿ ಸಾಕಷ್ಟು ತೊಂದರೆಯಿದ್ದು, ಇಲ್ಲಿಂದ ಎಲ್ಲರೂ ನೀರು ಕೊಂಡುಹೋಗುತ್ತಾರೆಯೇ ಹೊರತು ನಮ್ಮ ಗ್ರಾಮಕ್ಕೆ ಅನುಕೂಲವಾಗುವ ರೀತಿಯ ನೀರಿನ ಯೋಜನೆ ಮಾಡಿಲ್ಲ. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ. ನೂತನವಾಗಿ ಜಾಕ್‌ವೆಲ್‌ ಮಾಡುವುದಾದರೆ ಸಜೀಪಮುನ್ನೂರಿಗೆ ನೀರು ಕೊಡುವ ಹಾಗೇ ಶುದ್ಧಿಕರಣ ಘಟಕ ಮಾಡಬೇಕು. ನೀರು ಹೋಗುವ ಪೈಪ್‌ಲೈನ್‌ ಮಾಡುವಾಗಲೇ ಹಿಂದಕ್ಕೆ ಬರುವ ಪೈಪ್‌ಲೈನ್‌ ಕೂಡ ಹಾಕಬೇಕು ಎಂಬುದು ನಮ್ಮ ಆಗ್ರಹ.
-ಶರೀಫ್‌ ನಂದಾವರ,
ಅಧ್ಯಕ್ಷರು, ಸಜಿಪಮುನ್ನೂರು ಗ್ರಾ.ಪಂ.

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.