ಮಹದಾಯಿಗೆ ಬೇಕಿದೆ ಸಂಘಟಿತ ಯತ್ನ


Team Udayavani, Dec 20, 2019, 6:06 AM IST

mahadayi

ರಾಜಕೀಯ ಪ್ರತಿಷ್ಠೆ, ಲಾಭ-ನಷ್ಟದ ಲೆಕ್ಕಾಚಾರಕ್ಕೆ ಸಿಲುಕಿದ ಮಹದಾಯಿ ಹಲವು ದಶಕಗಳಿಂದ ನರಳುತ್ತಲೇ ಇದೆ.

ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ರಾಜಕೀಯ ಪ್ರತಿಷ್ಠೆ, ಲಾಭ-ನಷ್ಟದ ಲೆಕ್ಕಾಚಾರದ ಸುಳಿಗೆ ಸಿಲುಕಿ ನಲುಗುವಂತಾಗಿದೆ. ಚುನಾವಣೆಗಳು ಬಂದಾಗಲೊಮ್ಮೆ ಆಸೆ ಗರಿಗೆದರುತ್ತಿದೆಯಾದರೂ, ಯೋಜನೆಯಡಿ ಹನಿ ನೀರು ದೊರೆಯದೆ ಜನ ಕಣ್ಣೀರಿಡುವಂತಾಗಿದೆ.

ಬಹುತೇಕ ಬಳಕೆ ಇಲ್ಲದೆ ಸುಮಾರು 200 ಟಿಎಂಸಿ ಅಡಿಯಷ್ಟು ಮಹದಾಯಿ ನದಿ ನೀರು ಸಮುದ್ರ ಪಾಲಾಗುತ್ತಿದೆ. ನಮ್ಮದೇ ಹಳ್ಳಗಳಾದ ಕಳಸಾ-ಬಂಡೂರಿ ನಾಲಾಗಳಿಂದ ಕುಡಿಯುವ ನೀರಿನ ಉದ್ದೇಶಕ್ಕೆಂದು ಕೈಗೊಂಡ ಯೋಜನೆಗೂ ಬಿಡದೆ ಗೋವಾ ಹೆಜ್ಜೆ, ಹೆಜ್ಜೆಗೂ ಅಡ್ಡಿಪಡಿಸುತ್ತಿದೆ. ಗೋವಾದ ಕುಣಿತಕ್ಕೆ ತಾಳ ಹಾಕುವಂತೆ ಕೇಂದ್ರ ಸರಕಾರ ವರ್ತಿಸುವ ಮೂಲಕ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಅಳಲು ಕನ್ನಡಿಗರದ್ದಾಗಿದೆ.

1976ರ ಸುಮಾರಿಗೆ ಅವಿಭಜಿತ ವಿಜಯಪುರ ಜಿಲ್ಲೆ ಗುಳೇದಗುಡ್ಡ ಶಾಸಕರಾಗಿದ್ದ ಬಿ.ಎಂ.ಹೊರಕೇರಿಯವರು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದರು. ಖ್ಯಾತ ಇಂಜಿನಿಯರ್‌ ಎಸ್‌.ಜಿ.ಬಾಳೇಕುಂದ್ರಿ ಅವರಿಂದ ಮಹದಾಯಿ ನದಿ ನೀರು ಬಳಕೆ ಕುರಿತಾದ ಯೋಜನೆ ರೂಪಿಸಿದ್ದರು. 1980ರ ಸುಮಾರಿಗೆ ರಾಜ್ಯ ಸರಕಾರ ಎಸ್‌.ಆರ್‌.ಬೊಮ್ಮಾಯಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಮಹದಾಯಿ ನದಿ ನೀರು ಬಳಕೆಯ ಶಿಫಾರಸನ್ನು ಸಮಿತಿ ಮಾಡಿತ್ತು. ಮುಂದೆ ಎಸ್‌.ಆರ್‌.ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿದ್ದಾಗ, ಗೋವಾದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರಾದರೂ ನಂತರ ಉಲ್ಟಾ ಹೊಡೆದಿದ್ದ ಗೋವಾ ಊಸರವಳ್ಳಿತನ ಪ್ರದರ್ಶಿಸಿತ್ತು.

1999-2000ರಲ್ಲಿ ಅಂದಿನ ಜಲಸಂಪನ್ಮೂಲ ಸಚಿವ ಎಚ್‌.ಕೆ.ಪಾಟೀಲರು ಕುಡಿಯುವ ನೀರಿಗೆಂದು ಕಳಸಾ- ಬಂಡೂರಿ ನಾಲಾಗಳಿಂದ 7.56 ಟಿಎಂಸಿ ಅಡಿ ನೀರು ಬಳಕೆ ಯೋಜನೆ ರೂಪಿಸಿದ್ದರು. 2002ರಲ್ಲಿ ಕೇಂದ್ರದ ಎನ್‌ಡಿಎ ಸರಕಾರ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿತ್ತಾದರೂ ಗೋವಾದ ಲಾಬಿಗೆ ಮಣಿದು ಒಪ್ಪಿಗೆ ಅಮಾನತ್ತಿನಲ್ಲಿಟ್ಟಿತ್ತು.

ಮಹದಾಯಿ ನೀರು ಹಂಚಿಕೆ ನ್ಯಾಯಾಧಿಕರಣದಿಂದಲೇ ಇತ್ಯರ್ಥವಾಗಲಿ ಎಂಬ ಗೋವಾದ ಪಟ್ಟಿನಿಂದ, ಕೇಂದ್ರ ಸರಕಾರ 2010ರಲ್ಲಿ ನ್ಯಾ|ಜೆ.ಎಂ.ಪಾಂಚಾಲ ನೇತೃತ್ವದಲ್ಲಿ ಮಹದಾಯಿ ನ್ಯಾಯಾಧಿಕರಣ ರಚಿಸಿತ್ತು. ಈ ನ್ಯಾಯಾ ಧಿಕರಣ 2018ರ ಆಗಸ್ಟ್‌ 14ರಂದು ತೀರ್ಪು ನೀಡಿ, ಕರ್ನಾಟಕಕ್ಕೆ ಒಟ್ಟಾರೆ 13.07 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿತ್ತು. ಗೋವಾ ಅದಕ್ಕೂ ಕೊಂಕು ತೆಗೆದಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ ಜಾವಡೇಕರ್‌ ಅವರು 2019ರ ಅಕ್ಟೋಬರ್‌ 17ರಂದು ಕಳಸಾ-ಬಂಡೂರಿ ನಾಲಾ ಯೋಜನೆ ಕುಡಿಯುವ ನೀರಿನ ಉದ್ದೇಶದ್ದಾಗಿದ್ದು, ಇದಕ್ಕೆ ಪರಿಸರ ಇಲಾಖೆ ಅನುಮತಿ ಅಗತ್ಯವಿಲ್ಲ ಎಂಬ ಪತ್ರ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ತೋರಿದ ಗೋವಾ, ಕೇಂದ್ರದ ಮೇಲೆ ಒತ್ತಡ ತಂದು ಬುಧವಾರ (ಡಿ.18) ಒಪ್ಪಿಗೆ ತಡೆಯೊಡ್ಡುವಂತೆ ಮಾಡಿದೆ.

ಮಹದಾಯಿ ವಿಚಾರದಲ್ಲಿ ಎನ್‌ಡಿಎ ಸರಕಾರ ಎರಡು ಬಾರಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದರೆ, ಈ ಹಿಂದೆ ಗೋವಾದಲ್ಲಿನ ಚುನಾವಣೆ ವೇಳೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಕರ್ನಾಟಕಕ್ಕೆ ಮಹದಾಯಿ ಹನಿ ನೀರು ನೀಡುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ರಾಜಕೀಯ ಪ್ರತಿಷ್ಠೆ, ಲಾಭ-ನಷ್ಟಕ್ಕೆ ಸಿಲುಕಿದ ಮಹದಾಯಿ ಹಲವು ದಶಕಗಳಿಂದ ನರಳುತ್ತಿದೆ. ಮಹದಾಯಿ, ಕಳಸಾ ಬಂಡೂರಿ ಹೋರಾಟ ಮಾಡಿದವರಲ್ಲಿ ಅನೇಕರು ಅಧಿಕಾರದಲ್ಲಿದ್ದಾರೆ. ಆದರೆ ಸತತ ಮೂರ್‍ನಾಲ್ಕು ವರ್ಷಗಳಿಂದ ಹೋರಾಟ ಮಾಡಿ, ಲಾಠಿ ಏಟು ತಿಂದು, ಜೈಲು ಸೇರಿ, ಕೋರ್ಟ್‌ಗೆ ಅಲೆದಾಡುತ್ತಿರುವ ರೈತರು, ಹೋರಾಟಗಾರರು ರಾಜಕೀಯ ಚದುರಂಗದಾಟದಿಂದ ಭ್ರಮನಿರಸನಗೊಂಡಿದ್ದಾರೆ.

ರಾಜಕೀಯ ಪ್ರತಿಷ್ಠೆ, ಲಾಭ-ನಷ್ಟ ಬದಿಗಿರಿಸಿ, ರಾಜ್ಯದ ಹಿತ, ಕುಡಿಯುಲು ಹಾಗೂ ಕೃಷಿಗೆ ನೀರೊದಗಿಸಲು ಸಂಘಟಿತ ಯತ್ನ ತೋರಬೇಕಿದೆ.

ಕೇಂದ್ರದಿಂದ ಅಧಿಸೂಚನೆ ಹೊರಡಿಸಲು, ಕೇಂದ್ರ ನೀಡಿದ ಒಪ್ಪಿಗೆ ಮುಂದುವರಿಸಲು ಒತ್ತಡದ ಮೂಲಕ, ರಾಜ್ಯದ ರೈತರು ಹಾಗೂ ಜನರಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕಾಗಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.