ಕರಾವಳಿಯ ನಮಿತಾ ರೈ; ಅವಳಿ ಚಿನ್ನದ ಪವರ್‌


Team Udayavani, Dec 20, 2019, 6:13 AM IST

karavali-namita-rai

ಮೂಡುಬಿದಿರೆ: ಕರಾವಳಿ ಮೂಲದ ಕನ್ನಡತಿ ನಮಿತಾ ರೈ ಪಾರೇಖ್‌ ಮಾಸ್ಕೋದಲ್ಲಿ ನಡೆದ ವಿಶ್ವ ಪವರ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ವಿಶ್ವದಾಖಲೆಯ ಸಾಧನೆಯೊಂದಿಗೆ 2 ಚಿನ್ನದ ಪದಕ ಜಯಿಸಿದ್ದಾರೆ. 55 ಕೆ.ಜಿ. ವಿಭಾಗದ ಸ್ಪರ್ಧೆಗಳಲ್ಲಿ 172.5 ಕೆಜಿ ಹಾಗೂ 165 ಕೆ.ಜಿ. ಭಾರವೆತ್ತಿ ಸ್ವರ್ಣ ಸಾಧನೆಗೈದರು.

ಇವರು ಕಡಂದಲೆ ಶ್ರೀ ಸುಬ್ರಹ್ಮಣ್ಯಸ್ವಾಮಿ ಪ್ರೌಢಶಾಲಾ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ವೇಣೂರಿನ ಸದಾಶಿವ ರೈ ಮತ್ತು ಮೂಡುಬಿದಿರೆ ಹೊಸಬೆಟ್ಟು ಸರಕಾರಿ ಪ್ರೌಢಶಾಲಾ ಶಿಕ್ಷಕಿ ಜಯಲಕ್ಷ್ಮೀ ಶೆಟ್ಟಿ ದಂಪತಿಯ ಪುತ್ರಿ.

ದೈ.ಶಿ. ಶಿಕ್ಷಕ ತಂದೆಯೇ ಸ್ಫೂರ್ತಿ
ತಂದೆ ದೈಹಿಕ ಶಿಕ್ಷಣ ಶಿಕ್ಷಕರಾಗಿರುವುದರಿಂದ ಬಾಲ್ಯದಿಂದಲೇ ಕ್ರೀಡಾಸಕ್ತಿ ಬೆಳೆಸಿಕೊಂಡಿದ್ದ ನಮಿತಾ ರೈ, ಮೂಡುಬಿದಿರೆ ಜೈನ್‌ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ, ಆಳ್ವಾಸ್‌ನಲ್ಲಿ ಕ್ರೀಡಾ ತರಬೇತಿಯೊಂದಿಗೆ ಬಿಕಾಂನಲ್ಲಿ ಪದವಿ ಶಿಕ್ಷಣ ಪೂರೈಸಿದ್ದರು. ಆಗಲೇ ಫ‌ುಟ್‌ಬಾಲ್‌, ಹರ್ಡಲ್ಸ್‌ನಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆಗೈದಿದ್ದರು.

ಎಂಬಿಎ ಪದವಿ ಗಳಿಸಿ ಬೆಂಗಳೂರಿನ ಎಚ್‌ಎಸ್‌ಬಿಸಿಯಲ್ಲಿ 2 ವರ್ಷ ಉದ್ಯೋಗಿಯಾಗಿದ್ದರು. 2015ರಲ್ಲಿ ಛತ್ತೀಸ್‌ಗಡ ರಾಯ್‌ಪುರದ ಉದ್ಯಮಿ ಸನ್ನಿ ಪಾರೇಖ್‌ ಅವರನ್ನು ವಿವಾಹವಾಗಿ ಅಲ್ಲೇ ನೆಲೆಸಿ ದ್ದಾರೆ. ಮದುವೆ ಬಳಿಕವೂ ತರಬೇತಿ ಮುಂದುವರಿಸಿದ್ದು, ಅಕ್ಟೋಬರ್‌ನಲ್ಲಿ ಬೆಂಗಳೂರಿ ನಲ್ಲಿ ನಡೆದ ವೇಟ್‌ಲಿಫ್ಟಿಂಗ್‌ ಅರ್ಹತಾ ಸುತ್ತಿನಲ್ಲಿ ಆಯ್ಕೆಯಾಗಿದ್ದರು.

ಬದುಕು ಬದಲಿಸಿದ ಕೋಚ್‌ ಸಲಹೆ
ಬೆಂಗಳೂರಿನ ಜಿಮ್‌ನಲ್ಲಿ ವಕೌìಟ್‌ ಮಾಡುತ್ತಿ ದ್ದಾಗ ಪವರ್‌ಲಿಫ್ಟಿಂಗ್‌ ಬಗ್ಗೆ ಕೋಚ್‌ ನೀಡಿದ ಸಲಹೆಯಿಂದ ತಾನು ಈ ದಿಕ್ಕಿನಲ್ಲಿ ಯೋಚಿಸು ವಂತಾಯಿತು ಎನ್ನುತ್ತಾರೆ ನಮಿತಾ ರೈ. ಕೋಚ್‌ ಮೊಹಮ್ಮದ್‌ ಅಜ್ಮತ್‌ ಮಾರ್ಗದರ್ಶನದಲ್ಲಿ ಭಾರ ಎತ್ತುವ ಕೌಶಲ ಕಲಿತರು.

ಅದು ಯಾವುದೇ ಹಂತವಾಗಿರಲಿ, ಭಾರತವನ್ನು ಪ್ರತಿನಿಧಿಸುವುದೇ ಒಂದು ಹೆಮ್ಮೆ. ಮೊದಲ ಪ್ರಯತ್ನದÇÉೇ ವಿಶ್ವದಾಖಲೆಯೊಂದಿಗೆ ಎರಡು ಚಿನ್ನದ ಪದಕ ಗೆದ್ದಿರುವುದು ತುಂಬ ಖುಷಿ ಕೊಟ್ಟಿದೆ. ಮುಂದೆಯೂ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ಎದುರು ನೋಡುತ್ತಿರುತ್ತೇನೆ.
– ನಮಿತಾ ರೈ

ಚಿಕ್ಕಂದಿನಿಂದಲೇ ಆಕೆಗೆ ಕ್ರೀಡೆಯತ್ತ ವಿಶೇಷ ಆಸಕ್ತಿ. ಕಬಡ್ಡಿ, ಹಾಕಿ, ಫುಟ್‌ಬಾಲ್‌, ಹರ್ಡಲ್ಸ್‌ ಗಳಲ್ಲೂ ಗಮನಾರ್ಹ ಸಾಧನೆ ಮಾಡಿದ್ದಳು. ಹಠ ಹಿಡಿದು ಗುರಿ ಮುಟ್ಟುವ ಸ್ವಭಾವ ಆಕೆಯದು. ವಿಶ್ವದಾಖಲೆಯ ಸಾಧನೆಯ ಮೂಲಕ ನಮ್ಮ ದೇಶಕ್ಕೆ, ನಾಡಿಗೆ ಕೀರ್ತಿ ತಂದಿದ್ದು, ನಮಗೆಲ್ಲ ಬಹಳ ಸಂತಸದ ಸಂಗತಿ.

– ಸದಾಶಿವ ರೈ, ತಂದೆ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.