26 ರಿಂದ ಬಿಸಿಯೂಟ ಬಂದ್‌


Team Udayavani, Dec 21, 2019, 3:00 AM IST

26rinda

ಚಿಕ್ಕಬಳ್ಳಾಪುರ: ಬಿಸಿಯೂಟ ಯೋಜನೆ ಖಾಸಗೀಕರಣಗೊಳಿಸಲು ಹೊರಟಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಹಾಗೂ ಬಿಸಿಯೂಟ ನೌಕರರಿಗೆ ಕನಿಷ್ಟ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲಾದ್ಯಂತ ಡಿ.26 ರಿಂದ ಬಿಸಿಯೂಟ ಬಂದ್‌ಗೊಳಿಸಿ ನೌಕರರು, ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಮುನಿಲಕ್ಷ್ಮೀ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್‌.ಮಂಜುಳಾ ತಿಳಿಸಿದರು.

ನಗರದ ವಾಪಸಂದ್ರದ ಸಿಐಟಿಯು ಕಚೇರಿಯಲ್ಲಿ ಶುಕ್ರವಾರ ಈ ಕುರಿತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಸಿಯೂಟ ನೌಕರರನ್ನು ರಾಜ್ಯ ಸರ್ಕಾರ ಕೂಡಲೇ ಡಿ ಗ್ರೂಪ್‌ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿದರು.

ಕೆಲಸದಿಂದ ತೆಗೆಯಬಾರದು: ಬಿಸಿಯೂಟ ನೌಕರರಿಗೆ ಎಲ್‌ಐಸಿ ಆಧಾರಿತ ನಿವೃತ್ತ ವೇತನ ಸೌಲಭ್ಯ ಜಾರಿಗೆ ತರಬೇಕು, ಬಿಸಿಯೂಟ ನೌಕರರಿಗೆ ಹೆರಿಗೆ ರಜೆ ಹಾಗೂ ಹೆರಿಗೆ ಭತ್ಯೆ ನೀಡಬೇಕು, 12ನೇ ತರಗತಿವರೆಗೂ ಬಿಸಿಯೂಟ ಯೋಜನೆ ವಿಸ್ತರಿಸಬೇಕು, ಬರಗಾಲ ಹಾಗೂ ವಿಶೇಷ ದಿನಗಳಲ್ಲಿ ನೌಕರರಿಗೆ ವೇತನ ನೀಡಬೇಕು, ದಲಿತ ಮಹಿಳೆಯರಿಂದ ಅಡುಗೆ ಮಾಡಿಸಬೇಕು, ಅಡುಗೆ ಸಿಬ್ಬಂದಿ ಮೇಲೆ ಪದೇ ಪದೆ ಇಲ್ಲಸಲ್ಲದ ಆರೋಪ ಹೊರೆಸಿ ಕೆಲಸದಿಂದ ತೆಗೆಯುವ ಪ್ರವೃತ್ತಿ ನಿಲ್ಲಿಸಬೇಕೆಂದು ಆಗ್ರಹಿಸಿದರು.

ಆರೋಗ್ಯ ಕಾರ್ಡ್‌ ವಿತರಿಸಲಿ: ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆಯಡಿಯಲ್ಲಿ ಮೇಲ್ವಿಚಾರಣೆ ಮಾಡಬೇಕು, ಹಾಜರಾತಿ ಆಧಾರದಲ್ಲಿ ಕೆಲಸದಿಂದ ಕೈ ಬಿಡುವ ಕ್ರಮ ನಿಲ್ಲಬೇಕೆಂದ ಮುಖಂಡರು, ನೌಕರರಿಗೆ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಹಾಗೂ ಯೂನಿರ್ವಸಲ್‌ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಬೇಕೆಂದರು.

ಮಾರ್ಗದರ್ಶನ ನೀಡಬೇಕು: ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಿಗೆ ಹಾಗೂ ಇತರೆ ಸಿಬ್ಬಂದಿಗೆ ಸಿಗುವ ಹಾಗೆ ಬೇಸಿಗೆ ಮತ್ತು ದಸರಾ ರಜಾ ದಿನಗಳ ಸೌಲಭ್ಯ ಭತ್ಯೆ ನೀಡಬೇಕೆಂದರು. ಕಾಲಕಾಲಕ್ಕೆ ಮುಖ್ಯ ಅಡುಗೆ ಸಿಬ್ಬಂದಿಯೊಂದಿಗೆ ಸಭೆಗಳನ್ನು ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕೆಂದರು.

ಅನಿರ್ದಿಷ್ಟಾವಧಿ ಹೋರಾಟ: ರಾಜ್ಯದಲ್ಲಿ 1.18 ಲಕ್ಷ ಬಿಸಿಯೂಟ ನೌಕರರು ಕೆಲಸ ಮಾಡುತ್ತಿದ್ದು ಅಲ್ಪ ವೇತನಕ್ಕೆ ದುಡಿಯಲಾಗುತ್ತಿದೆ. ಬಿಸಿಯೂಟ ನೌಕರರಿಗೆ ಕನಿಷ್ಠ 21 ಸಾವಿರ ರೂ. ವೇತನ ನೀಡಬೇಕೆಂದು ಕೋರಿ ಹಲವು ಬಾರಿ ಪ್ರತಿಭಟನೆ, ಧರಣಿ ನಡೆಸಿದರೂ ಪ್ರಯೋಜನವಾಗಿಲ್ಲ. ಆ ಕಾರಣಕ್ಕಾಗಿ ಬಿಸಿಯೂಟ ನೌಕರರಿಗೆ ಕೆಲಸದ ಭದ್ರತೆ, ಕನಿಷ್ಠ ವೇತನ ಹಾಗೂ ಸೇವಾ ನಿಯಮಾವಳಿ ಹಾಗೂ ನಿವೃತ್ತ ವೇತನಕ್ಕಾಗಿ ಆಗ್ರಹಿಸಿ

ಡಿ.26 ರಿಂದ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಕರೆ ಮೇರೆಗೆ ಜಿಲ್ಲಾದ್ಯಂತ ಬಿಸಿಯೂಟ ಯೋಜನೆಯನ್ನು ರದ್ದುಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ, ಉಪಾಧ್ಯಕ್ಷ ಬಾಗೇಪಲ್ಲಿ ಮುಸ್ತಾಫ‌, ಖಜಾಂಚಿ ರಾಜಮ್ಮ, ಮುಖಂಡರಾದ ಉಮಾ, ಗೌರಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರ ಬಿಸಿಯೂಟ ನೌಕರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರಮುಖವಾಗಿ ಯೋಜನೆ ಖಾಸಗೀಕರಣ ಕೈ ಬಿಡಬೇಕು. ಕನಿಷ್ಠ ವೇತನ ನೌಕರರಿಗೆ ಕೊಡಬೇಕು. ಪಿಂಚಣಿ ಸೌಲಭ್ಯ ನೀಡಬೇಕೆಂದು ಅನಿರ್ದಿಷ್ಟಾವಧಿ ಹೋರಾಟವನ್ನು ಡಿ.26 ರಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ.
-ಬಿ.ಎನ್‌.ಮುನಿಕೃಷ್ಣಪ್ಪ, ಜಿಲ್ಲಾ ಗೌರವಾಧ್ಯಕ್ಷ, ಬಿಸಿಯೂಟ ನೌಕರರ ಸಂಘ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.