ಕೈಕಾಲು ಕಟ್ಟಿ ವೃದ್ಧ ದಂಪತಿಗಳ ಬರ್ಬರ ಹತ್ಯೆ; ದರೋಡೆ ಯತ್ನ ಶಂಕೆ
Team Udayavani, Dec 21, 2019, 10:26 AM IST
ಅಂಕೋಲಾ : ಕೈಕಾಲು ಕಟ್ಟಿ ವೃದ್ಧ ದಂಪತಿಗಳ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮೊಗಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಂದ್ಲೆಯಲ್ಲಿ ನಡೆದಿದೆ.
ಘಟನೆ ಶುಕ್ರವಾರ ತಡರಾತ್ರಿ ನಡೆದಿರಬಹುದು ಎಂದು ಊಹಿಸಲಾಗಿದ್ದು ಇಬ್ಬರು ದಂಪತಿಗಳನ್ನು ಕಾಲುಗಳನ್ನು ಕಟ್ಟಿ ಹತ್ಯೆಗೈಯಲಾಗಿದೆ.
ನಾರಾಯಣ ಬೊಮ್ಮಯ್ಯ ನಾಯಕ ಮತ್ತು ಸಾವಿತ್ರಿ ನಾರಾಯಣ ನಾಯಕ ಕೊಲೆಯಾದ ವೃದ್ಧ ದಂಪತಿಗಳಾಗಿದ್ದು ಸ್ಥಳಕ್ಕೆ ಅಂಕೋಲ ಪೊಲೀಸರು ತೆರಳಿ ತನಿಖೆ ಕೈಗೊಂಡಿದ್ದಾರೆ.
ಕೊಲೆಯು ದರೋಡೆಗಾಗಿ ಮಾಡಲಾಗಿದೆಯೋ ಅಥವಾ ವೈಷಮ್ಯದಿಂದ ಹತ್ಯೆ ಮಾಡಲಾಗಿದೆಯೊ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಸ್ಥಳಕ್ಕೆ ಎಸ್ಪಿ ಶಿವಪ್ರಕಾಶ ದೇವರಾಜು ಡಿಎಸ್ಪಿ ಶಂಕರ ಮಾರಿಹಾಳ, ಪಿಎಸ್ಐ ಸಂಪತಕುಮಾರ, ನವೀನ ನಾಯಕ, ಮತ್ತು ಶ್ವಾನ ದಳ, ಬೆರಳಚ್ಚು ತಜ್ಞರು ಘಟನಾ ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!