ಪಾಳುಬಿದ್ದ ತಹಶೀಲ್ದಾರ್‌ ವಸತಿಗೃಹ


Team Udayavani, Dec 21, 2019, 12:24 PM IST

bidar-tdy-1

ಹುಮನಾಬಾದ: ಪಟ್ಟಣದ ತಹಶೀಲ್ದಾರ್‌ ವಾಸ್ತವ್ಯದ ವಸತಿಗೃಹ ನಿರ್ವಹಣೆ ಕೊರತೆಯಿಂದ ಕಳೆದ ಒಂದು ವರ್ಷದಿಂದ ಬಳಕೆ ಇಲ್ಲದೇ ಪಾಳು ಬಿದ್ದಿದೆ.

ಕಳೆದ 3 ದಶಕದ ಹಿಂದೆ ನಿರ್ಮಿಸಲಾದ ಕಟ್ಟಡದಲ್ಲಿ ಕಳೆದೊಂದು ವರ್ಷದ ಹಿಂದಿನವರೆಗೆ ಅಂದರೆ ಮೂರು ವರ್ಷಕ್ಕೂ ಅಧಿಕ ಅವಧಿ ಯವರೆಗೆ ಸೇವೆ ಸಲ್ಲಿಸಿದ್ದ ತಹಶೀಲ್ದಾರ್‌ ಡಿ.ಎಂ. ಪಾಣಿ ಹಳೆಯ ಗೋಡೆಗಳಿಗೆ ಪಿಒಪಿ ಮಾಡಿಸಿ, ಹೊಸ ಬಣ್ಣ ಬಳಿಸಿದ್ದಾರೆ. ತಮ್ಮ ಇತಿಮಿತಿಯಲ್ಲಿ ಸಾಧ್ಯವಾದಷ್ಟು ದುರಸ್ತಿ ಕೈಗೊಂಡು ಈ ಕಟ್ಟಡದಲ್ಲೇ ಉಳಿದುಕೊಂಡಿದ್ದರು.

ಆದರೆ ಡಿ.ಎಂ. ಪಾಣಿ ಇಲ್ಲಿಂದ ಚಿತ್ತಾಪುರಕ್ಕೆ ವರ್ಗವಾಗಿ ಹೋದ ನಂತರ ಆ ಸ್ಥಾನಕ್ಕೆ ಬಂದಿರುವ ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ ಆ ಕಟ್ಟಡ ಬಳಕೆಗೆ ಯೋಗ್ಯವಿಲ್ಲವೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದ ಪಕ್ಕದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ಉಳಿದುಕೊಂಡಿದ್ದಾರೆ.

ಉಂಡಾಡಿಗಳ ತಾಣ: ತಹಶೀಲ್ದಾರ್‌ ಇದ್ದಾಗಲೇ ರಾತ್ರಿ ಸಮಯದಲ್ಲಿ ಆ ಕಟ್ಟಡದ ಆಸುಪಾಸು ಉಂಡಾಡಿಗಳು ಕುಳಿತು ಜೂಜು ಆಡುವುದು, ಮದ್ಯ ಸೇವಿಸುವುದು ಸೇರಿದಂತೆ ವ್ಯರ್ಥ ಕಾಲಹರಣ ಮಾಡುತ್ತಿದ್ದರು. ಈಗ ಯಾರೂ ಇಲ್ಲದಿರುವುದು ಉಂಡಾಡಿಗಳಿಗೆ ಅನುಕೂಲವಾಗಿದೆ. ಹಗಲು-ರಾತ್ರಿ ಎನ್ನದೇ ನಿತ್ಯ ಅನೇಕರು ವಸತಿಗೃಹ ಬಾಗಿಲು, ಕಿಟಕಿ ಸಂಪೂರ್ಣ ಮುರಿದು ದುಶ್ಚಟಗಳನ್ನು ಮಾಡುವ ಅಡ್ಡೆಯನ್ನಾಗಿ ಮಾಡಿಕೊಂಡಿದ್ದಾರೆ.

ಮುರಿದ ಪರಿಕರ: ವಸತಿಗೃಹದಲ್ಲಿನ ಸ್ನಾನ ಕೋಣೆಯಲ್ಲಿ ನಲ್ಲಿ, ವಿವಿಧ ಪರಿಕರ ಅಲ್ಲದೇ ವಿದ್ಯುತ್‌ ವೈರಿಂಗ್‌ ಕಿತ್ತು ಬಲ್ಬ್ಗಳನ್ನು ಒಡೆದಿದ್ದಾರೆ. ಶೌಚಾಲಯದಲ್ಲಿ ಅಳವಡಿಸಿದ್ದ ಎಲ್ಲ ಪರಿಕರಗಳು ಒಡೆದು ಹಾಳಾಗಿವೆ. ಕೋಣೆಯಲ್ಲಿ ನೋಡಿದಲ್ಲೆಲ್ಲ ಸಿಗರೇಟ್‌ ಪ್ಯಾಕೆಟ್‌, ಮದ್ಯದ ಬಾಟಲ್‌ಗ‌ಳು ಸೇರಿದಂತೆ ಇತರೆ ನಿರುಪಯುಕ್ತ ವಸ್ತುಗಳೇ ರಾರಾಜಿಸುತ್ತವೆ.

ವಿಷಜಂತುಗಳ ಹಾವಳಿ: ವಸತಿಗೃಹ ಪ್ರಾಂಗಣದಲ್ಲಿ ಗಿಡಗಂಟಿ ಬೆಳೆದ ಹಿನ್ನೆಲೆಯಲ್ಲಿ ಆಗಾಗ ವಿಷ ಜಂತುಗಳು-ಹಂದಿಗಳು ಕಾಣಿಸಿಕೊಳ್ಳುತ್ತವೆ ಸಾರ್ವಜನಿಕರು ಹೇಳುತ್ತಾರೆ. ನಸುಕಿನ ಜಾವ ಮತ್ತು ರಾತ್ರಿ ಸಮಯದಲ್ಲಿ ತಾಲೂಕು ದಂಡಾಧಿಕಾರಿಗಳ ವಸತಿಗೃಹ ಪ್ರಾಂಗಣ ಸಾರ್ವಜನಿಕ ಶೌಚಾಲಯವಾಗಿ ಬಳಕೆಯಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈವರೆಗಿನ ಅನೇಕ ತಹಶೀಲ್ದಾರ್‌ಗೆ ಆಶ್ರಯತಾಣವಾಗಿದ್ದ ವಸತಿಗೃಹವೀಗ ನಿರ್ವಹಣೆ ಕೊರತೆಯಿಂದ ಹಾಳಾಗಿದೆ.

ಈಗಿರುವ ಸ್ಥಿತಿಯಲ್ಲಿ ದುರಸ್ತಿ ಕೈಗೊಳ್ಳದಿದ್ದರೆ ವರ್ಷದೊಳಗೆ ಸಂಪೂರ್ಣ ಶಿಥಿಲಾವಸ್ಥೆ ತಲುಪುತ್ತದೆ. ಆದ್ದರಿಂದ ಕಟ್ಟಡ ನೆಲ ಕಚ್ಚುವ ಮುನ್ನ ಬಳಕೆ ಅನುಕೂಲ ಮಾಡಿಕೊಡಬೇಕೆಂಬುದು ಸಾರ್ವಜನಿಕರ ಒತ್ತಾಸೆ.

 

-ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.