ರಸ್ತೆಯಲ್ಲಿ ಸುಗ್ಗಿ ಒಕ್ಕಲು: ಬೆಂಕಿ ತಾಗಿ ಸುಟ್ಟು ಕರಕಲಾದ ಓಮ್ನಿ
Team Udayavani, Dec 21, 2019, 12:31 PM IST
ಚಿತ್ರದುರ್ಗ: ಸುಗ್ಗಿ ಕಾಲದಲ್ಲಿ ಬಹುತೇಕ ರೈತರು ರಸ್ತೆಗಳಲ್ಲೇ ಒಕ್ಕಲು ಮಾಡುವ ದೃಶ್ಯಗಳು ಸಾಮಾನ್ಯವಾಗಿರುತ್ತವೆ. ಹೊಸದುರ್ಗ ತಾಲೂಕು ಕಂಚಿಪುರ ಬಳಿ ರೈತರೊಬ್ಬರು ರಸ್ತೆಗೆ ರಾಗಿ ಹುಲ್ಲು ಹಾಕಿ ಒಕ್ಕಲು ಮಾಡುತ್ತಿದ್ದರು. ಈ ವೇಳೆ ಆ ರಸ್ತೆಯಲ್ಲಿ ಬಂದ ಓಮ್ನಿ ವಾಹನದ ಸೈಲೆನ್ಸರ್ ಗೆ ಹುಲ್ಲು ಸಿಕ್ಕಿ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ತಗುಲಿದ ತಕ್ಷಣ ಇಡೀ ಓಮ್ನಿ ಕಾರು ಧಗಧಗಿಸಿದೆ. ಜತೆಗೆ ಸ್ಥಳದಲ್ಲಿದ್ದ ಹುಲ್ಲು ಹಾಗೂ ಕಾಳು ಕೂಡಾ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ.
ಈ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಗಿ, ನವಣೆ ಸೇರಿದಂತೆ ಅನೇಕ ಧಾನ್ಯಗಳನ್ನು ಹಿಂದೆ ಜಮೀನು ಅಥವಾ ಊರಿನ ಪಕ್ಕದಲ್ಲಿ ಕಣ ಮಾಡಿ ಹುಲ್ಲಿನಿಂದ ಬೇರ್ಪಡಿಸಿ ಕಾಳು ಮನೆಗೆ ತರಲಾಗುತ್ತಿತ್ತು. ಆದರೆ, ಈಗ ಎಲ್ಲವೂ ರಸ್ತೆಯಲ್ಲೇ ಆಗುತ್ತಿರುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ರಸ್ತೆಯಲ್ಲಿ ವಾಹನಗಳ ಕೆಳಗೆ ಹುಲ್ಲು ನುರಿಸುವುದರಿಂದ ಕಾಳು ಮಲಿನವಾಗುವುದು ಒಂದು ಕಡೆಯಾದರೆ, ಇದರಿಂದ ವಾಹನಗಳಿಗೆ ತೊಂದರೆಯೂ ಇದೆ. ಈ ಬಗ್ಗೆ ರೈತರು ಎಚ್ಚೆತ್ತು ಕೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ