ರಾಮಘಟ್ಟ-ದುಮ್ಮಿ ರಸ್ತೆ ದೇವರಿಗೇ ಪ್ರೀತಿ!


Team Udayavani, Dec 21, 2019, 2:50 PM IST

cd-tdy-1

ಹೊಳಲ್ಕೆರೆ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹದಗೆಟ್ಟ ರಸ್ತೆಗಳಿಂದ ಸಂಚಾರಕ್ಕೆ ತೊಂದರೆಯಾಗಿ ಪರಿಣಮಿಸಿದೆ. ತಾಲೂಕಿನ ರಾಮಘಟ್ಟ, ಅಂಜನಾಪುರ, ದುಮ್ಮಿ ಮಾರ್ಗದಲ್ಲಿರುವ 5 ಕಿಮೀ ತಾಲೂಕು ಹೆದ್ದಾರಿ ರಸ್ತೆ ಹದಗೆಟ್ಟು ಹಲವು ವರ್ಷಗಳೆ ಉರುಳಿದರೂ ಅಭಿವೃದ್ಧಿ ಕಾಣದೇ ಈ ಭಾಗದ ಜನರು ಪ್ರಯಾಣ ಮಾಡುವುದು ದುಸ್ತರವಾಗಿದೆ. ರಸ್ತೆಗುಂಡಿಗಳಿಂದ ತುಂಬಿ ಹೋಗಿದೆ. ರಸ್ತೆಯ ಪಕ್ಕದಲ್ಲಿ ಬೆಳೆದು ನಿಂತ ಜಾಲಿಮುಳ್ಳು ಸಂಚರಿಸುವ ವ್ಯಕ್ತಿಯ ಪ್ರಾಣಕ್ಕೆ ಸಂಚಕಾರ ತರುವ ಮೃತ್ಯುಕೂಪವಾಗಿದೆ.

ಹಲವಾರು ವರ್ಷಗಳ ಹಿಂದೆ ಅಭಿವೃದ್ಧಿಗಾಗಿ ಕಾಮಗಾರಿ ಎನ್ನದೆ, ಕಾಮಗಾರಿಗಾಗಿ ರಸ್ತೆ ಅಭಿವೃದ್ಧಿ ಎಂಬಂತೆ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿ ಅರೆಬರೆಯಾಗಿ ರಸ್ತೆ ನಿರ್ಮಿಸಿ ಕೈ ತೊಳೆದುಕೊಂಡಿದ್ದು, ಬಿಟ್ಟರೇ ರಸ್ತೆ ಪರಿಸ್ಥಿತಿ ಬಗ್ಗೆ ಯರೊಬ್ಬರು ಚಿಂತಿಸಿಲ್ಲ. ರಸ್ತೆಗೆ ಸಂಬಂಧಿಸಿದ ಇಲಾಖೆ ಇತ್ತ ತಿರುಗಿ ನೋಡುವ ಗೋಜಿಗೆ ಹೋಗಿಲ್ಲ. ಸಾರ್ವಜನಿಕರ ಸುರಕ್ಷಿತ ಪ್ರಯಾಣಕ್ಕೆ ಬೇಕಾದ ರಸ್ತೆ ನಿರ್ಮಿಸುವ ಹೊಣೆ ಇರುವ ಇಲಾಖೆ ಅಧಿಕಾರಿಗಳು, ಇಲ್ಲಿನ ಜನಪ್ರತಿನಿಧಿಗಳ ಕಣ್ಣಿಗೆ ದುಸ್ಥಿತಿಯಲ್ಲಿರುವ ರಸ್ತೆ ರಾಚುತ್ತಿದ್ದರೂ ಕಣ್ಣಿದ್ದರೂ ಕುರುಡರಂತಾಗಿದ್ದಾರೆ. ದಾವಣಗೆರೆ ಮುಖ್ಯ ರಸ್ತೆಯಿಂದ ದುಮ್ಮಿಯಲ್ಲಿ ಹಾದು ಹೋಗಿರುವ ಶಿವಮೊಗ್ಗ ಚಿತ್ರದುರ್ಗ ರಸ್ತೆಗೆ ಲಿಂಕ್‌ ನೀಡಿ ದೂರ ಕಡಿಮೆ ಮಾಡುವ ರಸ್ತೆ ದುಸ್ಥಿತಿ ಯಿಂದ ಜನರು ಹತ್ತಿಪ್ಪತ್ತು ಕಿಮೀ ಸುತ್ತುವರೆದು ಪ್ರಯಾಣಿಸಬೇಕಾಗಿದೆ. ಚಿಕ್ಕಜಾಜೂರು ರೈಲ್ವೆ ಸ್ಟೇಷನ್‌ ಬರುವ ದೂರದ ಊರಿನ ಪ್ರಯಾಣಿಕರಿಗೆ ಹಾಗೂ ಚನ್ನಗಿರಿ ಭಾಗಕ್ಕೆ ಪ್ರಯಾಣಿಸಲು ಚಿಕ್ಕಜಾಜೂರು, ಕೋಟೆಹಾಳ್‌, ಕೊಡಗವಳ್ಳಿ, ಎಮ್ಮಿಗನೂರು, ಚಿಕ್ಕನಕಟ್ಟೆ ತನಕ ಉತ್ತಮ ರಸ್ತೆ ಇದೆ. ರಸ್ತೆಯ ಪಕ್ಕದಲ್ಲಿ ಬೆಳೆದು ನಿಂತಿರುವ ಜಾಲಿ ಮರಗಳು ಪ್ರಯಾಣಿಕರ ಬದುಕಿಗೆ ಮಾರಕವಾಗಿದೆ.

ರಾಮಘಟ್ಟದಿಂದ ದುಮ್ಮಿಯಲ್ಲಿ ಹಾದು ಹೋಗುವ ಶಿವಮೊಗ್ಗ ರಸ್ತೆ ಸಂಪರ್ಕ ಸಾಧಿಸಲು ಸಾಕಷ್ಟು ಜನರು ರಾಮಘಟ್ಟ ದುಮ್ಮಿ ರಸ್ತೆಯಲ್ಲಿ ಸಂಚರಿಸುತ್ತಾರೆ. ರಸ್ತೆ ದುಸ್ಥಿತಿ ಹಾಗೂ ಮುಳ್ಳಿನ ಗಿಡಗಳ ಸಮಸ್ಯೆಗಳಿಂದ ಈ ಮಾರ್ಗದ ಬದಲಿಗೆ ಹೊಳಲ್ಕೆರೆ ಮಾರ್ಗವಾಗಿ ಸಂಚಾರ ಮಾಡುವುದರಿಂದ 25 ಕಿಮೀ ಹೆಚ್ಚುವರಿಯಾಗಿ ಕ್ರಮಿಸಬೇಕಾಗಿದೆ. ಹಾಗಾಗಿ ರಸ್ತೆ ಹದಗೆಟ್ಟಿರುವ ರಾಮಘಟ್ಟ ಅಂಜನಾಪುರ ದುಮ್ಮಿ ಮಾರ್ಗವನ್ನು ಅಗಲೀಕರಣಗೊಳಿಸಿ ಡಾಂಬರ್‌ ರಸ್ತೆಯನ್ನಾಗಿ ಮಾಡಬೇಕಾಗಿದೆ.

ರಾಮಘಟ್ಟ ದುಮ್ಮಿ ಮಾರ್ಗಕ್ಕೆ ಈ ಹಿಂದೆ ಡಾಂಬರೀಕರಣಗೊಳಿಸಿದ್ದರೂ ಅದು, ಈಗ ಸಂಪೂರ್ಣ ಕಿತ್ತು ಹೋಗಿದೆ. ರಸ್ತೆಯ ಪಕ್ಕದಲ್ಲಿ ಜಾಲಿಗಿಡಗಳು ಬೆಳೆದು ನಿಂತು ಜನರು ಪ್ರಯಾಣಿಸುವುದು ದುಸ್ತರವಾಗಿದೆ. ಇನ್ನು ವಾಹನಗಳಿಗೆ ಜಾಲಿ ಮುಳ್ಳು ತಗುಲಿ ವಾಹನಗಳ ಮೇಲಿನ ಬಣ್ಣ ಹಾಳಾಗುತ್ತಿದೆ. ಬೈಕ್‌ನಲ್ಲಿ ಸಂಚರಿಸಲು ಸಾಧ್ಯವಿಲ್ಲದಷ್ಟು ಮುಳ್ಳಿನ ಗಿಡಗಳು ರಸ್ತೆಯ ಇಕ್ಕೆಲದಲ್ಲಿ ಬೆಳೆದಿದೆ. ಇದರಿಂದಾಗಿ ಎದುರಿಗೆ ಬರುವಂತಹ ವಾಹನ ಜಾಗ ಬಿಡಲು ಹೋದಾಗ ಮುಳ್ಳಿ ಪೊದೆಗೆ ಹೋಗಿ ಹತ್ತಾರು ಜನರು ಮುಳ್ಳಿನ ಹೊಡೆತಕ್ಕೆ ಕಣ್ಣು ಕಳೆದುಕೊಂಡಿದ್ದಾರೆ. ಕೆಲ ಬೈಕ್‌ಚಾಲಕರು ಮುಳ್ಳಿನ ಪೊದೆಯಲ್ಲಿ ಸಿಕ್ಕಿಕೊಂಡು ಮೈಕೈಯಿಗೆ ಮುಳ್ಳುಗಳನ್ನು ಚುಚ್ಚಿಸಿಕೊಂಡಿದ್ದಾರೆ.

ಹಾಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಕಡೆಗೆ ಗಮನಹರಿಸಿ ಮುಳ್ಳಿನ ಗಿಡಗಳನ್ನು ತೆರವುಗೊಳಿಸಿ, ದುರಸ್ಥಿಯಲ್ಲಿರುವ ರಸ್ತೆ ಆಭಿವೃದ್ಧಿಪಡಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ರಾಮಘಟ್ಟ-ದುಮ್ಮಿ ರಸ್ತೆಯನ್ನು ದುರಸ್ತಿಗೊಳಿಸಿ ಅಗಲೀಕರಣಗೊಳಿಸುವಂತೆ ಸಾಕಷ್ಟು ವರ್ಷಗಳಿಂದ ಎಲ್ಲ ಜನಪ್ರತಿನಿಧಿ , ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ತಿರುಗಿ ನೋಡಿಲ್ಲ. ಹೋರಾಟಕ್ಕೆ ಅಣಿಯಾಗುವ ಮೊದಲೆ ರಸ್ತೆ ನಿರ್ಮಾಣ ಮಾಡಬೇಕು.ಕೆ.ಎಸ್‌.ಮಲ್ಲಿಕಾರ್ಜುನ್‌, ವಕೀಲರು.

ಟಾಪ್ ನ್ಯೂಸ್

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.