ಪೌರತ್ವ ಗಲಭೆಗಳ ಹಿಂದೆ ಕೈ ನಾಯಕರ ಷಡ್ಯಂತ್ರ : ಶಾಸಕ ಸುಧಾಕರ್ ಟೀಕೆ
Team Udayavani, Dec 21, 2019, 6:47 PM IST
ಚಿಕ್ಕಬಳ್ಳಾಪುರ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ದ ನಡೆಯುತ್ತಿರುವ ಹಿಂಸಾಚಾರ ಹಾಗೂ ಗಲಭೆಗಳ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಟೀಕಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಕೆಟ್ಟ ಹೆಸರು ತರಲು ಗಲಭೆಗಳನ್ನು ನಡೆಸಲು ಷಡ್ಯಂತ್ರ ನಡೆಸಿದ್ದಾರೆ ಎಂದರು. ಬಿಜೆಪಿ ಅಧಿಕಾರ ಇರುವ ರಾಜ್ಯಗಳಲ್ಲಿಯೆ ಏಕೆ ಈ ರೀತಿ ಹಿಂಸಾಚಾರ, ಗಲಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಮದ್ಯ ಪ್ರದೇಶ, ರಾಜಸ್ಥಾನ ಮತ್ತಿತರ ಕಡೆ ಏಕೆ ಗಲಭೆಗಳು ನಡೆಯುತ್ತಿಲ್ಲ. ಬರೀ ಬಿಜೆಪಿ ಅಧಿಕಾರ ಇರುವ ಕರ್ನಾಟಕ, ಉತ್ತರ ಪ್ರದೇಶ ಹಾಗೂ ಅಸ್ಸಾಂನಲ್ಲಿ ಗಲಭೆಗಳು ನಡೆಯಲು ಕಾಂಗ್ರೆಸ್ ಕಾರಣ ಎಂದರು. ಮಂಗಳೂರಿನಲ್ಲಿ ಘಟನೆಗೆ ಕಾಂಗ್ರೆಸ್ ನಾಯಕರೇ ಕಾರಣ 144 ಸೆಕ್ಷನ್ ಜಾರಿಯಲ್ಲಿದ್ದರೂ ಅಲ್ಲಿಗೆ ಕಾಂಗ್ರೆಸ್ ನಾಯಕರು ಏಕೆ ಹೋಹಬೇಕು. ಇವರು ಬೆಂಕಿ ಆರಿಸುವುದಕ್ಕಿಂತ ಎಲ್ಪಿಜಿ ಹಾಕಿ ಇನ್ನಷ್ಟು ಬೆಂಕಿ ಉರಿಸಲಿಕ್ಕೆ ಹೋಗಿದ್ದಾರೆ ಎಂದರು. ಪೌರತ್ವ ತಿದ್ದುಪಡಿ ಮಸೂದೆಯಿಂದ ಯಾರು ಆತಂಕ ಪಡಯವ ಅಗತ್ಯವಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜನರಲ್ಲಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆಂದು ಸುಧಾಕರ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
MUST WATCH
ಹೊಸ ಸೇರ್ಪಡೆ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?